AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinay Rajkumar Birthday: ನಟ ವಿನಯ್​ ರಾಜ್​ಕುಮಾರ್​ ಜನ್ಮದಿನಕ್ಕೆ ವಿಶೇಷ ವಿಡಿಯೋ​ ಮೂಲಕ ವಿಶ್​ ಮಾಡಿದ ರಾಘಣ್ಣ

Happy Birthday Vinay Rajkumar: ವಿನಯ್​ ರಾಜ್​ಕುಮಾರ್​ ಅವರಿಗೆ ಸೆಲೆಬ್ರಿಟಿಗಳು, ಸ್ನೇಹಿತರು ಮತ್ತು ಅಭಿಮಾನಿಗಳು ಸೋಶಿಯಲ್​ ಮೀಡಿಯಾ ಮೂಲಕ ವಿಶ್​ ಮಾಡುತ್ತಿದ್ದಾರೆ. ಪುತ್ರನ ಹುಟ್ಟುಹಬ್ಬಕ್ಕೆ ವಿಶೇಷ ರೀತಿಯಲ್ಲಿ ನಟ ರಾಘವೇಂದ್ರ ರಾಜ್​ಕುಮಾರ್​ ಶುಭಕೋರಿದ್ದಾರೆ.

Vinay Rajkumar Birthday: ನಟ ವಿನಯ್​ ರಾಜ್​ಕುಮಾರ್​ ಜನ್ಮದಿನಕ್ಕೆ ವಿಶೇಷ ವಿಡಿಯೋ​ ಮೂಲಕ ವಿಶ್​ ಮಾಡಿದ ರಾಘಣ್ಣ
ವಿನಯ್ ರಾಜ್​ಕುಮಾರ್​
ಮದನ್​ ಕುಮಾರ್​
| Edited By: |

Updated on:May 07, 2021 | 9:25 AM

Share

ಡಾ. ರಾಜ್​ಕುಮಾರ್​ ಕುಟುಂಬದ ಮೂರನೇ ತಲೆಮಾರಿನ ಹೀರೋ ಆಗಿ ಸ್ಯಾಂಡಲ್​ವುಡ್​ಗೆ ಕಾಲಿಟ್ಟ ನಟ ವಿನಯ್​ ರಾಜ್​ಕುಮಾರ್​ ಅವರಿಗೆ ಇಂದು (ಮೇ 7) ಹುಟ್ಟುಹಬ್ಬ. ಕೊರೊನಾ ಹರಡುವ ಭೀತಿಯಲ್ಲಿ ಯಾವುದೇ ನಟರು ಕೂಡ ಈ ಸಂದರ್ಭದಲ್ಲಿ ಅದ್ದೂರಿಯಾಗಿ ಬರ್ತ್​ಡೇ ಆಚರಿಸಿಕೊಳ್ಳುತ್ತಿಲ್ಲ. ಹಾಗಾಗಿ, ವಿನಯ್​ ರಾಜ್​ಕುಮಾರ್​ ಅವರಿಗೆ ಸೆಲೆಬ್ರಿಟಿಗಳು, ಸ್ನೇಹಿತರು ಮತ್ತು ಅಭಿಮಾನಿಗಳು ಸೋಶಿಯಲ್​ ಮೀಡಿಯಾ ಮೂಲಕವೇ ವಿಶ್​ ಮಾಡುತ್ತಿದ್ದಾರೆ.

ಪುತ್ರನ ಹುಟ್ಟುಹಬ್ಬಕ್ಕೆ ವಿಶೇಷ ರೀತಿಯಲ್ಲಿ ನಟ ರಾಘವೇಂದ್ರ ರಾಜ್​ಕುಮಾರ್​ ಶುಭಕೋರಿದ್ದಾರೆ. ಅಣ್ಣಾವ್ರ ಮಡಿಲಲ್ಲಿ ಆಡಿ ಬೆಳದವರು ವಿನಯ್​. ಚಿಕ್ಕ ವಯಸ್ಸಿನಿಂದ ಹಿಡಿದು ತಾರುಣ್ಯದವರೆಗೆ ಡಾ. ರಾಜ್​ ಜೊತೆಗೆ ಅವರು ಕಳೆದ ಅನೇಕ ಕ್ಷಣಗಳು ಫೋಟೋಗಳಲ್ಲಿ ಸೆರೆಯಾಗಿವೆ. ಆ ಫೋಟೋಗಳನ್ನೆಲ್ಲ ಒಳಗೊಂಡಿರುವ ಒಂದು ವಿಡಿಯೋವನ್ನು ರಾಘಣ್ಣ ಹಂಚಿಕೊಂಡಿದ್ದಾರೆ. ‘ಚಿನ್ನ ಎಂದೂ ನಗುತಿರು, ನನ್ನ ಸಂಗ ಬಿಡದಿರು..’ ಹಾಡಿನ ಹಿನ್ನೆಲೆಯಲ್ಲಿ ಪುತ್ರನಿಗೆ ಅವರು ವಿಶ್​ ಮಾಡಿದ್ದಾರೆ.

ಆಕಸ್ಮಿಕ, ಅನುರಾಗದ ಅಲೆಗಳು, ಒಡಹುಟ್ಟಿದವರು, ಓಂ, ಹೃದಯ ಹೃದಯ ಮುಂತಾದ ಸಿನಿಮಾಗಳಲ್ಲಿ ವಿಜಯ್​ ರಾಜ್​ಕುಮಾರ್​ ಅವರು ಬಾಲ ನಟನಾಗಿ ಕಾಣಿಸಿಕೊಂಡಿದ್ದರು. ಸಿನಿಮಾ ಕುಟುಂಬದಲ್ಲೇ ಬೆಳೆದ ಅವರು 2015ರಲ್ಲಿ ಹೀರೋ ಆಗಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ವಿನಯ್​ ನಟನೆಯ ಮೊದಲ ಸಿನಿಮಾ ‘ಸಿದ್ಧಾರ್ಥ’. ಆ ಚಿತ್ರಕ್ಕೆ ಅವರು ಸೈಮಾ ಅವಾರ್ಡ್​ ಪಡೆದುಕೊಂಡರು.

ಹಲವು ಬಗೆಯ ಪಾತ್ರಗಳನ್ನು ವಿನಯ್​ ಪ್ರಯತ್ನಿಸುತ್ತಿದ್ದಾರೆ. 2016ರಲ್ಲಿ ‘ರನ್​ ಆ್ಯಂಟೊನಿ’ ಚಿತ್ರದಲ್ಲಿ ಅವರು ನಟಿಸಿದರು. 2018ರಲ್ಲಿ ಬಂದ ‘ಅನಂತು ವರ್ಸಸ್​ ನುಸ್ರತ್​’ ಚಿತ್ರಕ್ಕೆ ವಿಮರ್ಶಕರ ಮೆಚ್ಚುಗೆ ಸಿಕ್ಕಿತು. ಸದ್ಯ ವಿನಯ್​ ನಟಿಸುತ್ತಿರುವ ಟೆನ್​, ಪೆಪೆ ಮತ್ತು ಗ್ರಾಮಾಯಣ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಟೆನ್​ ಚಿತ್ರದಲ್ಲಿ ಅವರು ಬಾಕ್ಸರ್​ ಆಗಿ ಕಾಣಿಸಿಕೊಳ್ಳಲಿದ್ದಾರೆ. ಆ ಚಿತ್ರಕ್ಕೆ ಖ್ಯಾತ ನಿರ್ಮಾಪಕ ಪುಷ್ಕರ್​ ಮಲ್ಲಿಕಾರ್ಜುನಯ್ಯ ಬಂಡವಾಳ ಹೂಡುತ್ತಿದ್ದಾರೆ.

ಇದನ್ನೂ ಓದಿ:

ಡಾ. ರಾಜ್​ ನಿಧನರಾದ ದಿನ ಆಕಾಶ ನೋಡಿಕೊಂಡು ದೇವರಿಗೆ ಬೈಯ್ದಿದ್ದ ಮೊಮ್ಮಗಳು ಧನ್ಯಾ!

ರಾಜ್​ಕುಮಾರ್​ ಕಿಡ್ನ್ಯಾಪ್​​ ಆದಾಗ ಆತ್ಮಹತ್ಯೆಗೆ ಯತ್ನಿಸಿದ್ದ ಅಭಿಮಾನಿಯ ಎಕ್ಸ್​ಕ್ಲ್ಯೂಸಿವ್ ಸಂದರ್ಶನ

Published On - 9:15 am, Fri, 7 May 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ