AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬದಂದು ರಕ್ತಸಿಕ್ತ ಲುಕ್​​ನಲ್ಲಿ ಬಂದ ವಿನಯ್ ರಾಜ್​​ಕುಮಾರ್

Vinay Rajkumar Birthday: ಮಲೆನಾಡಿನಲ್ಲಿ ನಡೆಯುವ ಗ್ಯಾಂಗ್​​ಸ್ಟರ್ ಕಥೆಯನ್ನು ‘ಪೆಪೆ’ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಸಂಪೂರ್ಣವಾಗಿ ಹಳ್ಳಿ ಸೊಗಡಿನ ಆಕ್ಷನ್ ಸಿನಿಮಾ ಇದಾಗಿದೆ.  

ಹುಟ್ಟುಹಬ್ಬದಂದು ರಕ್ತಸಿಕ್ತ ಲುಕ್​​ನಲ್ಲಿ ಬಂದ ವಿನಯ್ ರಾಜ್​​ಕುಮಾರ್
ವಿನಯ್ ರಾಜ್​ಕುಮಾರ್
TV9 Web
| Edited By: |

Updated on: May 07, 2022 | 6:36 PM

Share

ಸೆಲೆಬ್ರಿಟಿಗಳ ಬರ್ತ್​ಡೇ (Celebrity Birthday) ದಿನ ಸಿನಿಮಾ ತಂಡದಿಂದ ಗಿಫ್ಟ್​ ಸಿಗೋದು ವಾಡಿಕೆ. ಸಿನಿಮಾ ಫಸ್ಟ್​ಲುಕ್​, ಟೀಸರ್​ ಅಥವಾ ಟ್ರೇಲರ್ ಬಿಡುಗಡೆ ಆಗುತ್ತದೆ. ಇಂದು (ಮೇ 7) ವಿನಯ್​ ರಾಜ್​​ಕುಮಾರ್ (Vinay Rajkumar) ಅವರ ಜನ್ಮದಿನ. ಈ ಹಿನ್ನೆಲೆಯಲ್ಲಿ ‘ಪೆಪೆ’ ಚಿತ್ರದಲ್ಲಿನ (Pepe Movie) ವಿನಯ್​ ರಾಜ್​ಕುಮಾರ್ ಅವರ ಹೊಸ ಲುಕ್ ಅನಾವರಣಗೊಂಡಿದೆ. ಭಿನ್ನ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುವ ವಿನಯ್​ ರಾಜ್​ಕುಮಾರ್ ಅವರು ಈ ಬಾರಿ ರಕ್ತಸಿಕ್ತ ಲುಕ್​ನಲ್ಲಿ ಮಿಂಚಿದ್ದಾರೆ. ‘ಪೆಪೆ’ ಸಿನಿಮಾದ ಟೀಸರ್​​ ಸಖತ್ ವೈರಲ್ ಆಗುತ್ತಿದೆ.

‘ಸೋಲ್ ಆಫ್ ಪೆಪೆ’ ಹೆಸರಿನಲ್ಲಿ ಎರಡು ನಿಮಿಷದ ವಿಡಿಯೋವನ್ನು ಪಿಆರ್​ಕೆ ಆಡಿಯೋ ಮೂಲಕ ಹಂಚಿಕೊಳ್ಳಲಾಗಿದೆ. ವಿನಯ್ ಅವರು ರಗಡ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಮುಖ ರಕ್ತಸಿಕ್ತವಾಗಿದೆ. ಅವರನ್ನು ಪರಿಚಯಿಸುವುದಕ್ಕೂ ಮೊದಲು ಟೀಸರ್​ನಲ್ಲಿ ಒಂದಷ್ಟು ವಿವರಣೆಗಳನ್ನು ನೀಡಲಾಗಿದೆ. ಈ ಟೀಸರ್​ ನೋಡಿದ ವಿನಯ್​ ರಾಜ್​ಕುಮಾರ್ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಇದನ್ನೂ ಓದಿ
Image
ಸೋಶಿಯಲ್ ಮೀಡಿಯಾದಲ್ಲಿ ಹೀಟ್ ಹೆಚ್ಚಿಸಿದ ಸಮಂತಾ; ಹೊಸ ಫೋಟೋ ಇಲ್ಲಿದೆ
Image
ಮೋಹನ್​ ಜುನೇಜ ನಿಧನ: ‘ಕೆಜಿಎಫ್​ 2’ ನಟನ ಕುಟುಂಬಕ್ಕೆ 50 ಸಾವಿರ ರೂ. ನೀಡಿದ ‘ಹೊಂಬಾಳೆ ಫಿಲ್ಮ್ಸ್​’
Image
ಭಾರತದಲ್ಲಿ ಭರ್ಜರಿ ಓಪನಿಂಗ್ ಪಡೆದ ಹಾಲಿವುಡ್ ಸಿನಿಮಾ ‘ಡಾಕ್ಟರ್ ಸ್ಟ್ರೇಂಜ್​’ ಸೀಕ್ವೆಲ್; ಮೊದಲ ದಿನ ಗಳಿಸಿದ್ದೆಷ್ಟು?
Image
Mohan Juneja: ಖ್ಯಾತ ನಟ ಮೋಹನ್​ ಜುನೇಜ ನಿಧನ; ‘ಕೆಜಿಎಫ್​’ ಚಿತ್ರದಲ್ಲಿ ಅಭಿನಯಿಸಿದ್ದ ಜನಪ್ರಿಯ ಕಲಾವಿದ ಇನ್ನಿಲ್ಲ

ಮಲೆನಾಡಿನಲ್ಲಿ ನಡೆಯುವ ಗ್ಯಾಂಗ್​​ಸ್ಟರ್ ಕಥೆಯನ್ನು ‘ಪೆಪೆ’ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಸಂಪೂರ್ಣವಾಗಿ ಹಳ್ಳಿ ಸೊಗಡಿನ ಆಕ್ಷನ್ ಸಿನಿಮಾ ಇದಾಗಿದೆ.  ಶ್ರೀಲೇಶ್‌ ಎಸ್‌. ನಾಯರ್‌ ನಿರ್ದೇಶನದ ಈ ಸಿನಿಮಾವನ್ನು ಉದಯ್‌ ಶಂಕರ್‌ ಎಸ್‌. ನಿರ್ಮಾಣ ಮಾಡಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಸಂಗೀತ, ನವೀನ್ ಕುಮಾರ್ ಛಾಯಾಗ್ರಹಣ ಸಿನಿಮಾಕ್ಕಿದೆ. ಈ ಹಿಂದೆ ಕೆಲ ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿರುವ ವಿನಯ್ ರಾಜ್​​ಕುಮಾರ್ ಗ್ಯಾಂಗ್​​ಸ್ಟರ್ ಅವತಾರದಲ್ಲಿ ಕಾಣಿಸಿಕೊಂಡಿದ್ದಕ್ಕೆ ಅಭಿಮಾನಿಗಳಿಗೆ ಕುತೂಹಲ ಹೆಚ್ಚಾಗಿದೆ.

ವಿನಯ್ ರಾಜ್​ಕುಮಾರ್ ಜನ್ಮದಿನಕ್ಕೆ ಅವರ ಅಭಿಮಾನಿಗಳ ಕಡೆಯಿಂದ ಶುಭಾಶಯ ಬರುತ್ತಿದೆ. ಬರ್ತ್​ಡೇ ದಿನ ರಾಘವೇಂದ್ರ ರಾಜ್​ಕುಮಾರ್ ಅವರು ಪುತ್ರನಿಗೆ ವಿಶ್ ಮಾಡಿದ್ದಾರೆ. ಬಾಲ್ಯದ ಫೋಟೋಗಳನ್ನು ಸೇರಿಸಿ ಒಂದು ವಿಡಿಯೋ​ ಮಾಡಿ ಅವರು ಪೋಸ್ಟ್ ಮಾಡಿದ್ದಾರೆ.

ಇನ್ನು, ಬರ್ತ್​ಡೇ ದಿನ ‘ಅಂದೊಂದಿತ್ತು ಕಾಲ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ವಿನಯ್​ಗೆ ಜತೆಯಾಗಿ ಅದಿತಿ ಪ್ರಭುದೇವ ಅವರು ಕಾಣಿಸಿಕೊಂಡಿದ್ದಾರೆ. ಈ ಟೀಸರ್ ಲಕ್ಷಾಂತರಬಾರಿ ವೀಕ್ಷಣೆ ಕಂಡಿದೆ. ರಾಘವೇಂದ್ರ ರಾಜ್​ಕುಮಾರ್ ಅವರು ಎರಡೂ ಟೀಸರ್​ಗಳನ್ನು ಹಂಚಿಕೊಂಡು ಮಗನಿಗೆ ವಿಶ್ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?