AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gramayana: ಮತ್ತೆ ಶುರುವಾಯ್ತು ವಿನಯ್ ರಾಜ್​ಕುಮಾರ್ ಗ್ರಾಮಾಯಣ: ಈ ಬಾರಿ ಯಾರು ನಿರ್ಮಾಪಕರು

Vinay Rajkumar: ವಿನಯ್ ರಾಜ್​ಕುಮಾರ್ ನಟಸುತ್ತಿದ್ದ ಗ್ರಾಮಾಯಣ ಸಿನಿಮಾ ಈಗ ಮತ್ತೆ ಪ್ರಾರಂಭವಾಗುತ್ತಿದೆ. ನಿರ್ಮಾಪಕರು ಬದಲಾಗಿದ್ದು ಬಹು ಅದ್ಧೂರಿಯಾಗಿ ಸಿನಿಮಾಕ್ಕೆ ಮರು ಆರಂಭ ನೀಡುತ್ತಿದ್ದಾರೆ.

Gramayana: ಮತ್ತೆ ಶುರುವಾಯ್ತು ವಿನಯ್ ರಾಜ್​ಕುಮಾರ್ ಗ್ರಾಮಾಯಣ: ಈ ಬಾರಿ ಯಾರು ನಿರ್ಮಾಪಕರು
ಗ್ರಾಮಾಯಣ
ಮಂಜುನಾಥ ಸಿ.
| Updated By: Digi Tech Desk|

Updated on:Jun 07, 2023 | 11:07 AM

Share

ವಿನಯ್ ರಾಜ್​ಕುಮಾರ್ (Vinay Rajkumar) ನಟನೆಯ ಗ್ರಾಮಾಯಣ (Gramayana) ಸಿನಿಮಾದ ಮುಹೂರ್ತ ಜೂನ್ 8 ರಂದು ನಡೆಯಲಿದೆ. ಇದೇನಿದು ಗ್ರಾಮಾಯಣ ಸಿನಿಮಾದ ಮುಹೂರ್ತ ಈಗ ನಡೆಯುತ್ತಿದೆಯೇ? ಈ ಸಿನಿಮಾ ಶುರುವಾಗಿ ಚಿತ್ರೀಕರಣವೂ ಮುಗಿದಿರಬೇಕಲ್ಲವೆ ಎಂಬ ಅನುಮಾನ ಸಹಜ. ಗ್ರಾಮಾಯಣ ಸಿನಿಮಾದ ಮುಹೂರ್ತ ನಾಲ್ಕು ವರ್ಷದ ಹಿಂದೆಯೇ ನಡೆದಿತ್ತು. ಕೋವಿಡ್ ಗೂ ಮುನ್ನ ಸಿನಿಮಾದ ಚಿತ್ರೀಕರಣ ಸಹ ಕೆಲವು ದಿನಗಳ ಕಾಲ ನಡೆದು ಒಂದು ಪ್ರೋಮೋ ಸಹ ಬಿಡುಗಡೆ ಆಗಿತ್ತು. ಆದರೆ ಆ ಬಳಿಕ ಸಿನಿಮಾ ನಿಂತುಹೋಗಿತ್ತು. ಈಗ ಮತ್ತೆ ಸಿನಿಮಾಕ್ಕೆ ಚಾಲನೆ ಸಿಗುತ್ತದೆ. ಗ್ರಾಮಾಯಣ ಸಿನಿಮಾಕ್ಕೆ ಈಗ ಮತ್ತೊಮ್ಮೆ ಚಾಲನೆ ದೊರೆಯುತ್ತಿದ್ದು ಈಗ ಬೇರೆ ನಿರ್ಮಾಪಕರು ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ನಿಂತು ಹೋಗಿದ್ದ ಸಿನಿಮಾಕ್ಕೆ ನಿರ್ದೇಶಕ ಕೆಪಿ ಶ್ರೀಕಾಂತ್ ಹಾಗೂ ಲಹರಿ ಫಿಲಮ್ಸ್​ನ ಮನೋಹರ್ ಅವರುಗಳು ಜಂಟಿಯಾಗಿ ಈ ಸಿನಿಮಾಕ್ಕೆ ಕೈ ಹಾಕಿದ್ದು ಸಿನಿಮಾಕ್ಕೆ ಮತ್ತೊಮ್ಮೆ ಮುಹೂರ್ತ ಮಾಡಿ ಹೊಸದಾಗಿ ಚಿತ್ರೀಕರಣ ಶುರು ಮಾಡುತ್ತಿದ್ದಾರೆ. ಈ ಹಿಂದೆ ಗ್ರಾಮಾಯಣ ಸಿನಿಮಾಕ್ಕೆ ಇದ್ದ ತಾಂತ್ರಿಕ ವರ್ಗವೇ ಈ ಬಾರಿಯೂ ಮುಂದುವರೆಯಲಿದೆ ಎನ್ನಲಾಗುತ್ತಿದೆ.

ಗ್ರಾಮಾಯಣ ಸಿನಿಮಾಕ್ಕೆ ಅದ್ಧೂರಿಯಾಗಿ ಮುಹೂರ್ತವನ್ನು ನಿರ್ಮಾಪಕರು ಮಾಡುತ್ತಿದ್ದಾರೆ. ಜೂನ್ 8 ರಂದು ಬಂಡೆ ಮಕಾಳಮ್ಮ ದೇವಾಲಯದಲ್ಲಿ ಸಿನಿಮಾದ ಮುಹೂರ್ತ ನಡೆಯಲಿದ್ದು ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಡಿಕೆ ಶಿವಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್​ಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ್, ಉಪೇಂದ್ರ, ರಾಜ್ ಬಿ ಶೆಟ್ಟಿ, ವಿಜಯ್ ರಾಘವೇಂದ್ರ, ಶ್ರೀಮುರಳಿ, ಧ್ರುವ ಸರ್ಜಾ ಅವರುಗಳು ಭಾಗಿಯಾಗಲಿದ್ದಾರೆ. ಜೊತೆಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಕೆ.ಪಿ.ಶ್ರೀಕಾಂತ್ ಹಾಗೂ ಮನೋಹರ್ ನಾಯ್ಡು ಅವರುಗಳು ಜಂಟಿಯಾಗಿ ಈಗಾಗಲೇ ಉಪೇಂದ್ರ ನಟನೆಯ ಯುಐ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಇದೀಗ ಇವರಿಬ್ಬರೂ ಜಂಟಿಯಾಗಿ ಗ್ರಾಮಾಯಣ ಸಿನಿಮಾಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಹಿಂದೆ ಚಿತ್ರೀಕರಣ ಮಾಡಿದ್ದ ದೃಶ್ಯಗಳನ್ನು ಉಳಿಸಿಕೊಳ್ಳುತ್ತಾರೆಯೇ ಅಥವಾ ಸಂಪೂರ್ಣವಾಗಿ ಹೊಸದಾಗಿ ಚಿತ್ರೀಕರಣ ಮಾಡಲಿದ್ದಾರೆ ಎಂಬುದು ಮುಹೂರ್ತ ದಿನವೇ ತಿಳಿದು ಬರಲಿದೆ.

ಸಿದ್ಧಾರ್ಥ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟ ವಿನಯ್ ರಾಜ್​ಕುಮಾರ್ ಇತ್ತೀಚೆಗೆ ಭಿನ್ನವಾದ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಪೆಪೆ ಹೆಸರಿನ ಸಿನಿಮಾದಲ್ಲಿ ವಿನಯ್ ರಾಜ್​ಕುಮಾರ್ ನಟಿಸಿದ್ದಾರೆ. ಗ್ರಾಮಾಯಣ ಸಿನಿಮಾ ಸಹ ಭಿನ್ನವಾದ ಕತೆಯನ್ನು ಒಳಗೊಂಡಿತ್ತು. ಒಂದು ಹಳ್ಳಿಯಲ್ಲಿ ನಡೆವ ಘಟನೆಗಳನ್ನು ಗ್ರಾಮಾಯಣ ಸಿನಿಮಾ ಒಳಗೊಂಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:49 pm, Tue, 6 June 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ