AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinod Prabhakar: ಮಾಡರ್ನ್​ ಮಹಾಲಕ್ಷ್ಮಿಗೆ ಮಾಲಾಶ್ರೀ ಸಾತ್​; ‘ಲಂಕಾಸುರ’ ಚಿತ್ರದ ಹೊಸ ಹಾಡು ರಿಲೀಸ್​ ಮಾಡಿದ ಸ್ಟಾರ್​ ನಟಿ

Lankasura Movie | Modern Mahalakshmi Song: ‘ಲಂಕಾಸುರ’ ಸಿನಿಮಾದಲ್ಲಿ 4 ಹಾಡುಗಳಿವೆ. ಎಲ್ಲಾ ಹಾಡುಗಳನ್ನು ಚೇತನ್ ಕುಮಾರ್ ಬರೆದಿದ್ದಾರೆ. ‘ಮಾರ್ಡನ್ ಮಹಾಲಕ್ಷ್ಮಿ..’ ಹಾಡಿಗೆ ಸಂಗೀತ ನಿರ್ದೇಶಕ ವಿಜೇತ್ ಕೃಷ್ಣ ಧ್ವನಿ ನೀಡಿದ್ದಾರೆ.

Vinod Prabhakar: ಮಾಡರ್ನ್​ ಮಹಾಲಕ್ಷ್ಮಿಗೆ ಮಾಲಾಶ್ರೀ ಸಾತ್​; ‘ಲಂಕಾಸುರ’ ಚಿತ್ರದ ಹೊಸ ಹಾಡು ರಿಲೀಸ್​ ಮಾಡಿದ ಸ್ಟಾರ್​ ನಟಿ
‘ಲಂಕಾಸುರ’ ಸುದ್ದಿಗೋಷ್ಠಿ
ಮದನ್​ ಕುಮಾರ್​
|

Updated on: Feb 13, 2023 | 7:16 AM

Share

ನಟ ವಿನೋದ್ ಪ್ರಭಾಕರ್ (Vinod Prabhakar) ಅವರ ‘ಲಂಕಾಸುರ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅವರು ಹೀರೋ ಆಗಿ ನಟಿಸುವುದರ ಜೊತೆಗೆ ತಮ್ಮದೇ ‘ಟೈಗರ್​ ಟಾಕೀಸ್​’ ಸಂಸ್ಥೆ ಮೂಲಕ ಬಂಡವಾಳ ಕೂಡ ಹೂಡಿ​ದ್ದಾರೆ. ಟೀಸರ್​ ಮತ್ತು ಹಾಡುಗಳ ಮೂಲಕ ಈ ಸಿನಿಮಾ ಗಮನ ಸೆಳೆಯುತ್ತಿದೆ. ‘ಲಂಕಾಸುರ’ (Lankasura Movie) ಚಿತ್ರದ ‘ಮಾಡರ್ನ್​ ಮಹಾಲಕ್ಷ್ಮಿ..’ ಹಾಡನ್ನು ಇತ್ತೀಚೆಗೆ ರಿಲೀಸ್​ ಮಾಡಲಾಯಿತು. ಹಿರಿಯ ನಟಿ ಮಾಲಾಶ್ರೀ (Malashree) ಅವರಿಂದ ಈ ಸಾಂಗ್​ ಬಿಡುಗಡೆ ಆಗಿದ್ದು ವಿಶೇಷ. ಈ ಕಾರ್ಯಕ್ರಮದಲ್ಲಿ ಹಿರಿಯ ನಟಿ ಶ್ರುತಿ, ಶ್ರೀನಗರ ಕಿಟ್ಟಿ, ಹಿರಿಯ ನಿರ್ಮಾಪಕ ಎಂ.ಜಿ. ರಾಮಮೂರ್ತಿ, ಖ್ಯಾತ ನಿರ್ದೇಶಕ ಗುರು ದೇಶಪಾಂಡೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ‘2ಎ ಮ್ಯೂಸಿಕ್​’ ಮೂಲಕ ಈ ಹಾಡು ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ಪ್ರಮೋದ್​ ಕುಮಾರ್​ ನಿರ್ದೇಶನ ಮಾಡಿದ್ದಾರೆ.

‘ಬಹದ್ದೂರ್​’ ಚೇತನ್​ ಕುಮಾರ್​ ಅವರು ‘ಮಾಡರ್ನ್​ ಮಹಾಲಕ್ಷ್ಮಿ’ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ವಿಜೇತ್​ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಾಂಗ್​ ಬಿಡುಗಡೆ ಮಾಡಿದ ಮಾಲಾಶ್ರೀ ಅವರು ಇಡೀ ತಂಡಕ್ಕೆ ಶುಭ ಹಾರೈಕೆ ತಿಳಿಸಿದ್ದಾರೆ. ‘ನಾನು ವಿನೋದ್ ಪ್ರಭಾಕರ್ ಅವರ ದೊಡ್ಡ ಅಭಿಮಾನಿ. ಅವರು ಮಾಡುವ ಸಾಹಸ ಸನ್ನಿವೇಶಗಳು ನನಗೆ ಸಖತ್​ ಇಷ್ಟ. ಟೈಗರ್ ಟಾಕೀಸ್ ಮೂಲಕ ಲಂಕಾಸುರ ಚಿತ್ರವನ್ನು ನಿರ್ಮಾಣ ಮಾಡಿರುವ ವಿನೋದ್ ಪ್ರಭಾಕರ್ ಹಾಗೂ ಅವರ ಪತ್ನಿ ನಿಶಾ ಅವರಿಗೆ ಒಳ್ಳೆಯದಾಗಲಿ. ಈ ಸಿನಿಮಾಗೆ ದೊಡ್ಡ ಯಶಸ್ಸು ಸಿಗಲಿ’ ಎಂದು ಮಾಲಾಶ್ರೀ ಶುಭ ಕೋರಿದ್ದಾರೆ.

ಇದನ್ನೂ ಓದಿ: ತಂದೆ ‘ಟೈಗರ್​’ ಪ್ರಭಾಕರ್​ ಹೆಸರಿನಲ್ಲಿ ನಿರ್ಮಾಣ ಸಂಸ್ಥೆ ಆರಂಭಿಸಿದ ವಿನೋದ್​ ಪ್ರಭಾಕರ್​ಗೆ ರವಿಚಂದ್ರನ್​ ವಿಶ್​

ಇದನ್ನೂ ಓದಿ
Image
‘ಲಕ್ಕಿ ಮ್ಯಾನ್​​ ಸಿನಿಮಾವನ್ನು ಎಲ್ಲರೂ ತಬ್ಬಿಕೊಳ್ಳಿ,​ ಮತ್ತೆ ಬೇಕು ಅಂದ್ರೂ ಇದು ಸಿಗಲ್ಲ’; ಕಿಚ್ಚ ಸುದೀಪ್​
Image
ಮುಖ ತೋರಿಸದೇ ಫೇಮಸ್​ ಆದ ಭಾಸ್ಕರ್​; ಕಿಚ್ಚ ಸುದೀಪ್​ ಬದುಕಿನಲ್ಲೂ ಇದ್ದಾನೆ ಅಂಥ ಒಬ್ಬ ವ್ಯಕ್ತಿ
Image
‘ವಿಕ್ರಾಂತ್​ ರೋಣ’ ಸೂಪರ್​ ಹಿಟ್​; ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ‘ಕಬ್ಜ’ ಮೇಲೆ ಹೆಚ್ಚಿತು ನಿರೀಕ್ಷೆ
Image
Vikrant Rona: ದೆಹಲಿಯಲ್ಲಿ ವೀರೇಂದ್ರ ಹೆಗ್ಗಡೆ ಭೇಟಿ ಮಾಡಿದ ಕಿಚ್ಚ ಸುದೀಪ್​; ಇಲ್ಲಿವೆ ಫೋಟೋಗಳು

‘ಲಂಕಾಸುರ’ ಸಿನಿಮಾದಲ್ಲಿ 4 ಹಾಡುಗಳಿವೆ. ಎಲ್ಲಾ ಹಾಡುಗಳನ್ನು ಚೇತನ್ ಕುಮಾರ್ ಬರೆದಿದ್ದಾರೆ. ‘ಮಾರ್ಡನ್ ಮಹಾಲಕ್ಷ್ಮಿ..’ ಹಾಡಿಗೆ ಸಂಗೀತ ನಿರ್ದೇಶಕ ವಿಜೇತ್ ಕೃಷ್ಣ ಧ್ವನಿ ನೀಡಿದ್ದಾರೆ. ಭಜರಂಗಿ ಮೋಹನ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

‘ಕೊರೊನಾ ಲಾಕ್​ಡೌನ್​ ಬರುವ ಮುಂಚೆ ರಾಘವ ಮುನಿಸ್ವಾಮಿ ಅವರು ನನಗೆ ಅಡ್ವಾನ್ಸ್ ನೀಡಿ, ‘ಲಂಕಾಸುರ’ ಚಿತ್ರ ಶುರು ಮಾಡಿದ್ದರು. ಆನಂತರ ಕಾರಣಾಂತರದಿಂದ ನಾವೇ ಟೈಗರ್ ಟಾಕೀಸ್ ಸಂಸ್ಥೆ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೆವು. ನನ್ನ ಇಡೀ ಚಿತ್ರತಂಡದ ಸಹಕಾರವನ್ನು ನಾನು  ಮರೆಯಲ್ಲ. ಎಲ್ಲರೂ ಇಷ್ಟಪಡುವ ಚಿತ್ರ ಮಾಡಿದ್ದೇವೆ‌. ನೋಡಿ ಪ್ರೋತ್ಸಾಹಿಸಿ’ ಎಂದು ವಿನೋದ್ ಪ್ರಭಾಕರ್ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?