AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinod Prabhakar: ಮಾಡರ್ನ್​ ಮಹಾಲಕ್ಷ್ಮಿಗೆ ಮಾಲಾಶ್ರೀ ಸಾತ್​; ‘ಲಂಕಾಸುರ’ ಚಿತ್ರದ ಹೊಸ ಹಾಡು ರಿಲೀಸ್​ ಮಾಡಿದ ಸ್ಟಾರ್​ ನಟಿ

Lankasura Movie | Modern Mahalakshmi Song: ‘ಲಂಕಾಸುರ’ ಸಿನಿಮಾದಲ್ಲಿ 4 ಹಾಡುಗಳಿವೆ. ಎಲ್ಲಾ ಹಾಡುಗಳನ್ನು ಚೇತನ್ ಕುಮಾರ್ ಬರೆದಿದ್ದಾರೆ. ‘ಮಾರ್ಡನ್ ಮಹಾಲಕ್ಷ್ಮಿ..’ ಹಾಡಿಗೆ ಸಂಗೀತ ನಿರ್ದೇಶಕ ವಿಜೇತ್ ಕೃಷ್ಣ ಧ್ವನಿ ನೀಡಿದ್ದಾರೆ.

Vinod Prabhakar: ಮಾಡರ್ನ್​ ಮಹಾಲಕ್ಷ್ಮಿಗೆ ಮಾಲಾಶ್ರೀ ಸಾತ್​; ‘ಲಂಕಾಸುರ’ ಚಿತ್ರದ ಹೊಸ ಹಾಡು ರಿಲೀಸ್​ ಮಾಡಿದ ಸ್ಟಾರ್​ ನಟಿ
‘ಲಂಕಾಸುರ’ ಸುದ್ದಿಗೋಷ್ಠಿ
ಮದನ್​ ಕುಮಾರ್​
|

Updated on: Feb 13, 2023 | 7:16 AM

Share

ನಟ ವಿನೋದ್ ಪ್ರಭಾಕರ್ (Vinod Prabhakar) ಅವರ ‘ಲಂಕಾಸುರ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅವರು ಹೀರೋ ಆಗಿ ನಟಿಸುವುದರ ಜೊತೆಗೆ ತಮ್ಮದೇ ‘ಟೈಗರ್​ ಟಾಕೀಸ್​’ ಸಂಸ್ಥೆ ಮೂಲಕ ಬಂಡವಾಳ ಕೂಡ ಹೂಡಿ​ದ್ದಾರೆ. ಟೀಸರ್​ ಮತ್ತು ಹಾಡುಗಳ ಮೂಲಕ ಈ ಸಿನಿಮಾ ಗಮನ ಸೆಳೆಯುತ್ತಿದೆ. ‘ಲಂಕಾಸುರ’ (Lankasura Movie) ಚಿತ್ರದ ‘ಮಾಡರ್ನ್​ ಮಹಾಲಕ್ಷ್ಮಿ..’ ಹಾಡನ್ನು ಇತ್ತೀಚೆಗೆ ರಿಲೀಸ್​ ಮಾಡಲಾಯಿತು. ಹಿರಿಯ ನಟಿ ಮಾಲಾಶ್ರೀ (Malashree) ಅವರಿಂದ ಈ ಸಾಂಗ್​ ಬಿಡುಗಡೆ ಆಗಿದ್ದು ವಿಶೇಷ. ಈ ಕಾರ್ಯಕ್ರಮದಲ್ಲಿ ಹಿರಿಯ ನಟಿ ಶ್ರುತಿ, ಶ್ರೀನಗರ ಕಿಟ್ಟಿ, ಹಿರಿಯ ನಿರ್ಮಾಪಕ ಎಂ.ಜಿ. ರಾಮಮೂರ್ತಿ, ಖ್ಯಾತ ನಿರ್ದೇಶಕ ಗುರು ದೇಶಪಾಂಡೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ‘2ಎ ಮ್ಯೂಸಿಕ್​’ ಮೂಲಕ ಈ ಹಾಡು ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ಪ್ರಮೋದ್​ ಕುಮಾರ್​ ನಿರ್ದೇಶನ ಮಾಡಿದ್ದಾರೆ.

‘ಬಹದ್ದೂರ್​’ ಚೇತನ್​ ಕುಮಾರ್​ ಅವರು ‘ಮಾಡರ್ನ್​ ಮಹಾಲಕ್ಷ್ಮಿ’ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ವಿಜೇತ್​ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಾಂಗ್​ ಬಿಡುಗಡೆ ಮಾಡಿದ ಮಾಲಾಶ್ರೀ ಅವರು ಇಡೀ ತಂಡಕ್ಕೆ ಶುಭ ಹಾರೈಕೆ ತಿಳಿಸಿದ್ದಾರೆ. ‘ನಾನು ವಿನೋದ್ ಪ್ರಭಾಕರ್ ಅವರ ದೊಡ್ಡ ಅಭಿಮಾನಿ. ಅವರು ಮಾಡುವ ಸಾಹಸ ಸನ್ನಿವೇಶಗಳು ನನಗೆ ಸಖತ್​ ಇಷ್ಟ. ಟೈಗರ್ ಟಾಕೀಸ್ ಮೂಲಕ ಲಂಕಾಸುರ ಚಿತ್ರವನ್ನು ನಿರ್ಮಾಣ ಮಾಡಿರುವ ವಿನೋದ್ ಪ್ರಭಾಕರ್ ಹಾಗೂ ಅವರ ಪತ್ನಿ ನಿಶಾ ಅವರಿಗೆ ಒಳ್ಳೆಯದಾಗಲಿ. ಈ ಸಿನಿಮಾಗೆ ದೊಡ್ಡ ಯಶಸ್ಸು ಸಿಗಲಿ’ ಎಂದು ಮಾಲಾಶ್ರೀ ಶುಭ ಕೋರಿದ್ದಾರೆ.

ಇದನ್ನೂ ಓದಿ: ತಂದೆ ‘ಟೈಗರ್​’ ಪ್ರಭಾಕರ್​ ಹೆಸರಿನಲ್ಲಿ ನಿರ್ಮಾಣ ಸಂಸ್ಥೆ ಆರಂಭಿಸಿದ ವಿನೋದ್​ ಪ್ರಭಾಕರ್​ಗೆ ರವಿಚಂದ್ರನ್​ ವಿಶ್​

ಇದನ್ನೂ ಓದಿ
Image
‘ಲಕ್ಕಿ ಮ್ಯಾನ್​​ ಸಿನಿಮಾವನ್ನು ಎಲ್ಲರೂ ತಬ್ಬಿಕೊಳ್ಳಿ,​ ಮತ್ತೆ ಬೇಕು ಅಂದ್ರೂ ಇದು ಸಿಗಲ್ಲ’; ಕಿಚ್ಚ ಸುದೀಪ್​
Image
ಮುಖ ತೋರಿಸದೇ ಫೇಮಸ್​ ಆದ ಭಾಸ್ಕರ್​; ಕಿಚ್ಚ ಸುದೀಪ್​ ಬದುಕಿನಲ್ಲೂ ಇದ್ದಾನೆ ಅಂಥ ಒಬ್ಬ ವ್ಯಕ್ತಿ
Image
‘ವಿಕ್ರಾಂತ್​ ರೋಣ’ ಸೂಪರ್​ ಹಿಟ್​; ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ‘ಕಬ್ಜ’ ಮೇಲೆ ಹೆಚ್ಚಿತು ನಿರೀಕ್ಷೆ
Image
Vikrant Rona: ದೆಹಲಿಯಲ್ಲಿ ವೀರೇಂದ್ರ ಹೆಗ್ಗಡೆ ಭೇಟಿ ಮಾಡಿದ ಕಿಚ್ಚ ಸುದೀಪ್​; ಇಲ್ಲಿವೆ ಫೋಟೋಗಳು

‘ಲಂಕಾಸುರ’ ಸಿನಿಮಾದಲ್ಲಿ 4 ಹಾಡುಗಳಿವೆ. ಎಲ್ಲಾ ಹಾಡುಗಳನ್ನು ಚೇತನ್ ಕುಮಾರ್ ಬರೆದಿದ್ದಾರೆ. ‘ಮಾರ್ಡನ್ ಮಹಾಲಕ್ಷ್ಮಿ..’ ಹಾಡಿಗೆ ಸಂಗೀತ ನಿರ್ದೇಶಕ ವಿಜೇತ್ ಕೃಷ್ಣ ಧ್ವನಿ ನೀಡಿದ್ದಾರೆ. ಭಜರಂಗಿ ಮೋಹನ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

‘ಕೊರೊನಾ ಲಾಕ್​ಡೌನ್​ ಬರುವ ಮುಂಚೆ ರಾಘವ ಮುನಿಸ್ವಾಮಿ ಅವರು ನನಗೆ ಅಡ್ವಾನ್ಸ್ ನೀಡಿ, ‘ಲಂಕಾಸುರ’ ಚಿತ್ರ ಶುರು ಮಾಡಿದ್ದರು. ಆನಂತರ ಕಾರಣಾಂತರದಿಂದ ನಾವೇ ಟೈಗರ್ ಟಾಕೀಸ್ ಸಂಸ್ಥೆ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೆವು. ನನ್ನ ಇಡೀ ಚಿತ್ರತಂಡದ ಸಹಕಾರವನ್ನು ನಾನು  ಮರೆಯಲ್ಲ. ಎಲ್ಲರೂ ಇಷ್ಟಪಡುವ ಚಿತ್ರ ಮಾಡಿದ್ದೇವೆ‌. ನೋಡಿ ಪ್ರೋತ್ಸಾಹಿಸಿ’ ಎಂದು ವಿನೋದ್ ಪ್ರಭಾಕರ್ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ