AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಂಟೇಜ್ ಯಶ್ ಈಸ್ ಬ್ಯಾಕ್’; ‘ಟಾಕ್ಸಿಕ್ ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

‘ಟಾಕ್ಸಿಕ್’ ಟೀಸರ್​​ನಲ್ಲಿ ಬರೋ ಡೈಲಾಗ್​​ಗಳು ಅಭಿಮಾನಿಗಳಿಗೆ ಇಷ್ಟ ಆಗಿವೆ. ‘ಹಠ ಬಿಟ್ಟುಬಿಡು’ ಎಂದು ಹೇಳಿದಾಗ ಅದು ಸಾಧ್ಯವೇ ಇಲ್ಲ ಎಂದು ಯಶ್ ಹೇಳುತ್ತಾರೆ. ಯಶ್ ಅವರು ಹುಟ್ಟುಗುಣ ಇದು. ಈ ಗುಣಕ್ಕೆ ಹೋಲಿಕೆ ಆಗುತ್ತದೆ ಎಂದು ಅನೇಕರು ಹೇಳಿದ್ದಾರೆ. ಈ ಕಾರಣದಿಂದಲೂ ಟೀಸರ್ ಇಷ್ಟ ಆಗಿದೆ.

‘ವಿಂಟೇಜ್ ಯಶ್ ಈಸ್ ಬ್ಯಾಕ್’; ‘ಟಾಕ್ಸಿಕ್ ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್
ಯಶ್
ರಾಜೇಶ್ ದುಗ್ಗುಮನೆ
|

Updated on: Feb 20, 2026 | 1:14 PM

Share

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ (Toxic Teaser) ರಿಲೀಸ್ ಆಗಿ ಧೂಳೆಬ್ಬಿಸಿದೆ. ಈ ಟೀಸರ್ ಲಕ್ಷ ಲಕ್ಷ ವೀಕ್ಷಣೆ ಕಾಣುತ್ತಿದೆ. ಯಶ್ ಅಭಿಮಾನಿಗಳಂತೂ ಹಬ್ಬ ಮಾಡುತ್ತಿದ್ದಾರೆ. ‘ಟಾಕ್ಸಿಕ್’ ಟೀಸರ್ ನೋಡಿ ರಾಕಿಂಗ್ ಸ್ಟಾರ್ಸ್ ಫ್ಯಾನ್ಸ್ ಖುಷ್ ಆಗಿದ್ದಾರೆ. ‘ವಿಂಟೇಜ್ ಯಶ್ ಮರಳಿದ’ ಎಂದು ಸಂಭ್ರಮಿಸುತ್ತಿದ್ದಾರೆ. ಹಾಗಾದರೆ, ಯಶ್ ಅಭಿಮಾನಿಗಳಿಗೆ ಇಷ್ಟ ಆದ ಅಂಶಗಳು ಯಾವವು? ಆ ಬಗ್ಗೆ ಇಲ್ಲಿದೆ ವಿವರ.

ಯಶ್ ಅವರು ಒಳ್ಳೆಯ ನಟ ಮಾತ್ರವಲ್ಲ, ಒಳ್ಳೆಯ ಡ್ಯಾನ್ಸರ್ ಕೂಡ ಹೌದು. ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಚಿತ್ರದಲ್ಲಿ ಸಖತ್ ಆ್ಯಕ್ಷನ್ ಮೆರೆದಿದ್ದರು. ಇಲ್ಲಿ ಡ್ಯಾನ್ಸ್ ಮಾಡೋಕೆ ಅಷ್ಟಾಗಿ ಅವಕಾಶ ಸಿಕ್ಕಿರಲಿಲ್ಲ. ಈಗ ‘ಟಾಕ್ಸಿಕ್’ ಟೀಸರ್​​ನಲ್ಲಿ ಒಂದು ಕಡೆ ಯಶ್ ಡ್ಯಾನ್ಸ್ ಮಾಡಿದ್ದಾರೆ. ಈ ಡ್ಯಾನ್ಸ್ ಸ್ಟೆಪ್ ಗಮನ ಸೆಳೆದಿದೆ. ‘ಟಾಕ್ಸಿಕ್’ ಟೀಸರ್​​ನ ಜನರು ಬಹುವಾಗಿ ಮೆಚ್ಚಿಕೊಳ್ಳಲು ಇದು ಕೂಡ ಒಂದು ಕಾರಣ.

ಇದನ್ನೂ ಓದಿ: ‘ಟಾಕ್ಸಿಕ್’ ಟೀಸರ್ ಡೈಲಾಗ್ ಮೂಲಕ ‘ಧುರಂಧರ್ 2’ಗೆ ಎಚ್ಚರಿಕೆ ಕೊಟ್ಟ ಯಶ್

‘ಟಾಕ್ಸಿಕ್’ ಟೀಸರ್​​ನಲ್ಲಿ ಬರೋ ಡೈಲಾಗ್​​ಗಳು ಅಭಿಮಾನಿಗಳಿಗೆ ಇಷ್ಟ ಆಗಿವೆ. ‘ಹಠ ಬಿಟ್ಟುಬಿಡು’ ಎಂದು ಹೇಳಿದಾಗ ಅದು ಸಾಧ್ಯವೇ ಇಲ್ಲ ಎಂದು ಯಶ್ ಹೇಳುತ್ತಾರೆ. ಯಶ್ ಅವರು ಹುಟ್ಟುಗುಣ ಇದು. ಈ ಗುಣಕ್ಕೆ ಹೋಲಿಕೆ ಆಗುತ್ತದೆ ಎಂದು ಅನೇಕರು ಹೇಳಿದ್ದಾರೆ. ಈ ಕಾರಣದಿಂದಲೂ ಟೀಸರ್ ಇಷ್ಟ ಆಗಿದೆ.

‘ಟಾಕ್ಸಿಕ್’ ಟೀಸರ್​​ನಲ್ಲಿ ರಕ್ತವನ್ನು ಹೆಚ್ಚೇ ತೋರಿಸಲಾಗಿದೆ. ಇದು ಕೆಲವರಿಗೆ ಇಷ್ಟ ಆಗಿಲ್ಲ. ಈ ಬಗ್ಗೆ ಕೊಂಕು ತೆಗೆದಿದ್ದಾರೆ. ಈ ರೀತಿ ಕೊಂಕು ತೆಗೆಯೋ ಎಲ್ಲರಿಗೂ ಯಶ್ ಅಭಿಮಾನಿಗಳು ತಿರುಗೇಟು ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ