AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರಿಮಣಿ ಮಾಲಿಕ ನೀನಲ್ಲ’ ಇದು ಹಾಡು ಮಾತ್ರವಲ್ಲ; ಸಿನಿಮಾ ಶೀರ್ಷಿಕೆಯೂ ಹೌದು

‘ಯು ಟರ್ನ್ 2’ ಖ್ಯಾತಿಯ ನಿರ್ದೇಶಕ ಚಂದ್ರು ಓಬಯ್ಯ ಅವರು ‘ಕರಿಮಣಿ ಮಾಲಿಕ ನೀನಲ್ಲ’ ಶೀರ್ಷಿಕೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಇದರ ಟೈಟಲ್​ ಪೋಸ್ಟರ್​ ಅನಾವರಣ ಮಾಡಲಾಗಿದೆ. ಕಲಬುರಗಿಯ ರಮಿಕಾ ಸುತಾರಾ ನಾಯಕಿಯಾಗಿ ಅಭಿನಯಿಸಲಿದ್ದಾರೆ. ಹೀರೋ ಯಾರು ಎಂಬುದು ಶೀಘ್ರದಲ್ಲೇ ತಿಳಿಯಲಿದೆ.

‘ಕರಿಮಣಿ ಮಾಲಿಕ ನೀನಲ್ಲ’ ಇದು ಹಾಡು ಮಾತ್ರವಲ್ಲ; ಸಿನಿಮಾ ಶೀರ್ಷಿಕೆಯೂ ಹೌದು
‘ಕರಿಮಣಿ ಮಾಲಿಕ ನೀನಲ್ಲ’ ಟೈಟಲ್​ ಲಾಂಚ್​
ಮದನ್​ ಕುಮಾರ್​
|

Updated on: Apr 12, 2024 | 4:29 PM

Share

ಸೋಶಿಯಲ್​ ಮೀಡಿಯಾದಲ್ಲಿ ‘ಉಪೇಂದ್ರ’ ಸಿನಿಮಾದ ‘ಓನಲ್ಲ, ನೀನಲ್ಲ, ಕರಿಮಣಿ ಮಾಲಿಕ ನೀನಲ್ಲ’ ಹಾಡು ವೈರಲ್​ ಆಗಿದ್ದು ಗೊತ್ತೇ ಇದೆ. ಇದೇ ಸಾಲನ್ನು ಈಗ ಸಿನಿಮಾ (​Kannada Cinema) ಶೀರ್ಷಿಕೆಯಾಗಿ ಬಳಸಿಕೊಳ್ಳಲಾಗಿದೆ. ‘ಯು ಟರ್ನ್ 2’ ಸಿನಿಮಾದ ಖ್ಯಾತಿಯ ಚಂದ್ರು ಓಬಯ್ಯ ಅವರು ಈ ವೈರಲ್ ಹಾಡಿನ ಲೈನ್​ ಇಟ್ಟುಕೊಂಡು ಹೊಸ ಸಿನಿಮಾದ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಈ ಸಿನಿಮಾದ ಶೀರ್ಷಿಕೆಯನ್ನು ಇತ್ತೀಚೆಗೆ ಅನಾವರಣ ಮಾಡಲಾಗಿದೆ. ‘ಕರಿಮಣಿ ಮಾಲಿಕ ನೀನಲ್ಲ’ (​Karimani Malika Neenalla) ಸಿನಿಮಾದ ಶೀರ್ಷಿಕೆಯನ್ನು ಮ್ಯೂಸಿಕ್ ಅಡ್ಡಾದ ಲೋಕೇಶ್ ಲಾಂಚ್ ಮಾಡಿದ್ದಾರೆ.

ಟೈಟಲ್​ ರಿಲೀಸ್​ ಕಾರ್ಯಕ್ರಮದಲ್ಲಿ ಚಂದ್ರು ಓಬಯ್ಯ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ‘ನಾನು ಯುಟರ್ನ್ 2 ಸಿನಿಮಾದ ಬಳಿಕ ರಾಮು ಆ್ಯಂಡ್ ರಾಮು ಚಿತ್ರವನ್ನು ಮಾಡಿದ್ದೇನೆ. ಅದು ಸೆನ್ಸಾರ್ ಪ್ರಕ್ರಿಯೆಯ ಹಂತದಲ್ಲಿದೆ. ಅಲ್ಲದೇ ‘ಪ್ಯಾಟಿ ಹುಡ್ಗಿ ಹಳ್ಳಿ ಲೈಫು’ ಚಿತ್ರೀಕರಣ ನಡೆಯುತ್ತಿದೆ. ಈಗ ‘ಕರಿಮಣಿ ಮಾಲಿಕ ನೀನಲ್ಲ’ ಎಂಬ ಶೀರ್ಷಿಕೆ ಇಟ್ಟುಕೊಂಡು ಈ ಸಿನಿಮಾವನ್ನು ಮುಂದಿನ ತಿಂಗಳು ಆರಂಭಿಸುತ್ತಿದ್ದೇನೆ’ ಎಂದು ಅವರು ಹೇಳಿದರು.

‘ಎಳನೀರು ಮಾರುವ ಹುಡುಗ ಮತ್ತು ಹೂವು ಮಾರುವ ಹುಡುಗಿಯ ನಡುವೆ ನಡೆಯುವ ವಿಭಿನ್ನ ಪ್ರೇಮಕಥೆ ಈ ಸಿನಿಮಾದಲ್ಲಿ ಇರಲಿದೆ. ನಾನು ಸಿದ್ಧ ಮಾಡಿಕೊಂಡಿದ್ದ ಕಥೆಗೆ ಈ ಶೀರ್ಷಿಕೆ ಸೂಕ್ತ ಎನಿಸಿತು. ಹಾಗಾಗಿ ಇಟ್ಟಿದ್ದೇನೆ. ಮೇ ತಿಂಗಳಲ್ಲಿ ಚಿತ್ರೀಕರಣ ಆರಂಭಿಸಿ, ಮೈಸೂರು, ಬೆಂಗಳೂರು, ಮಡಿಕೇರಿ ಮುಂತಾದ ಕಡೆಗಳಲ್ಲಿ 40 ದಿನ ಶೂಟಿಂಗ್ ಮಾಡುವ ಪ್ಲ್ಯಾನ್​ ಇದೆ. ಸಿನಿಮಾದಲ್ಲಿ ನಾಲ್ಕು ಹಾಡುಗಳು ಇರಲಿವೆ. ಸಂಗೀತ ನಿರ್ದೇಶನ ಸಹ ನಾನೇ ಮಾಡುತ್ತಿದ್ದೇನೆ’ ಎಂದು ಚಂದ್ರು ಓಬಯ್ಯ ಹೇಳಿದರು.

ಇದನ್ನೂ ಓದಿ: ‘ಕರಿಮಣಿಗೆ ಈಗ ಮತ್ತೆ ಬೆಲೆ ಬಂದಿದೆ’: ವೈರಲ್​ ಹಾಡಿಗೆ ಗುರುಕಿರಣ್ ಪ್ರತಿಕ್ರಿಯೆ

ಈ ಸಿನಿಮಾದಲ್ಲಿ ನಾಯಕಿಯಾಗಿ ರಮಿಕಾ ಸುತಾರಾ ನಟಿಸುತ್ತಿದ್ದಾರೆ. ನಾಯಕನ ಪಾತ್ರಕ್ಕೆ ಕಲಾವಿದನ ಆಯ್ಕೆ ನಡೆಯುತ್ತಿದೆ. ಶೀಘ್ರದಲ್ಲೇ ಹೆಚ್ಚಿನ ವಿವರ ತಿಳಿಸುವುದಾಗಿ ಚಿತ್ರತಂದವರು ಹೇಳಿಕೊಂಡಿದ್ದಾರೆ. ನಾಯಕಿ ರಮಿಕಾ ಸುತಾರಾ ಮಾತನಾಡಿ, ‘ನಾನು ಮೂಲತ: ಕಲಬುರಗಿಯವಳು. ಮೊದಲಿಂದಲೂ ಸಿನಿಮಾ ಬಗ್ಗೆ ಆಸಕ್ತಿಯಿತ್ತು. ಚಾನ್ಸ್​ ಸಿಕ್ಕಿರಲಿಲ್ಲ. ಆ್ಯಕ್ಟಿಂಗ್ ಕ್ಲಾಸ್​ಗೆ ಹೋಗಿದ್ದೇನೆ. ಈ ಸಿನಿಮಾದಲ್ಲಿ ಹೂ ಮಾರುವ ಹುಡುಗಿಯಾಗಿ ನಟಿಸುತ್ತಿದ್ದೇನೆ’ ಎಂದಿದ್ದಾರೆ. ಮತ್ತೊರ್ವ ನಟಿ ಮೀನಾ ಕಿರಣ್ ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ನಾಯಕಿಯ ತಾಯಿ ಪಾತ್ರಕ್ಕೆ ಅವರು ಬಣ್ಣ ಹಚ್ಚುತ್ತಿದ್ದಾರೆ. ಈ ಸಿನಿಮಾಗೆ ವೀನಸ್ ನಾಗರಾಜಮೂರ್ತಿ ಛಾಯಾಗ್ರಹಣ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು