AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್, ವಿಷ್ಣುವರ್ಧನ್ ಒಟ್ಟಾಗಿ ನಟಿಸಿದ್ದ ಸಿನಿಮಾದ ಅಪರೂಪದ ದೃಶ್ಯ ವೈರಲ್

ವಿಷ್ಣುವರ್ಧನ್ ಹಾಗೂ ರಜನಿಕಾಂತ್ 1986ರಲ್ಲಿ ತೆರೆಗೆ ಬಂದ ‘ವಿಡುದಲೈ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತು. ಶಿವಾಜಿ ಗಣೇಶನ್, ರಜನಿಕಾಂತ್, ವಿಷ್ಣುವರ್ಧನ್​ ಈ ಚಿತ್ರದಲ್ಲಿ ನಟಿಸಿದ್ದರು.

ರಜನಿಕಾಂತ್, ವಿಷ್ಣುವರ್ಧನ್ ಒಟ್ಟಾಗಿ ನಟಿಸಿದ್ದ ಸಿನಿಮಾದ ಅಪರೂಪದ ದೃಶ್ಯ ವೈರಲ್
ವಿಷ್ಣು-ರಜನಿ
TV9 Web
| Edited By: |

Updated on:May 12, 2023 | 12:06 PM

Share

ರಜನಿಕಾಂತ್ ಹಾಗೂ ವಿಷ್ಣುವರ್ಧನ್ (Vishnuvardhan) ಮಧ್ಯೆ ಒಳ್ಳೆಯ ಗೆಳೆತನ ಇತ್ತು. ವಿಷ್ಣುವರ್ಧನ್ ಅವರನ್ನು ಕಂಡರೆ ರಜನಿಕಾಂತ್​ಗೆ ಎಲ್ಲಿಲ್ಲದ ಪ್ರೀತಿ. ಈಗ ರಜನಿಕಾಂತ್ ಅವರ ಜೊತೆಗಿನ ಗೆಳೆತನ ವಿವರಿಸುವ ಅಪರೂಪದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ತಮಿಳಿನ ‘ವಿಡುದಲೈ’ ಸಿನಿಮಾದ (Viduthalai Movie) ದೃಶ್ಯ. ಈ ವಿಡಿಯೋನ ಅಭಿಮಾನಿಗಳು ರೀ-ಶೇರ್ ಮಾಡಿಕೊಳ್ಳುತ್ತಿದ್ದಾರೆ. ವಿಷ್ಣು ದಾದಾ ಅವರ ನೆನಪು ಅಭಿಮಾನಿಗಳಿಗೆ ಅತಿಯಾಗಿ ಕಾಡುತ್ತಿದೆ.

ವಿಷ್ಣುವರ್ಧನ್ ಹಾಗೂ ರಜನಿಕಾಂತ್ 1986ರಲ್ಲಿ ತೆರೆಗೆ ಬಂದ ‘ವಿಡುದಲೈ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತು. ಶಿವಾಜಿ ಗಣೇಶನ್, ರಜನಿಕಾಂತ್, ವಿಷ್ಣುವರ್ಧನ್​ ಈ ಚಿತ್ರದಲ್ಲಿ ನಟಿಸಿದ್ದರು. ಕೆ. ವಿಜಯನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾದ ಒಂದು ದೃಶ್ಯ ಎಲ್ಲರ ಗಮನ ಸೆಳೆಯುತ್ತಿದೆ.

ವಿಷ್ಣವರ್ಧನ್​ ಮೇಲೆ ರೌಡಿಗಳು ದಾಳಿ ಮಾಡಿರುತ್ತಾರೆ. ಇದರಿಂದ ಅವರು ತೀವ್ರವಾಗಿ ಗಾಯಗೊಂಡಿರುತ್ತಾರೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತದೆ. ಆ ಸಂದರ್ಭದಲ್ಲಿ ವಿಷ್ಣುನ ನೋಡಿಕೊಳ್ಳೋದು ರಜನಿಕಾಂತ್. ವಿಷ್ಣುವರ್ಧನ್ ಸಂಪೂರ್ಣವಾಗಿ ಚೇತರಿಕೆಕಂಡ ನಂತರದಲ್ಲಿ ರಜನಿ ಸಿಗರೇಟ್ ಹಚ್ಚುತ್ತಾರೆ. ಒಂದು ಬಾರಿ ಅದನ್ನು ಸೇದಿ ವಿಷ್ಣು ಬಾಯಿಗೆ ಇಡುತ್ತಾರೆ. ಈ ವಿಡಿಯೋ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಅವಿನಾಶ್-ಮಾಳವಿಕಾ ಜೀವನದಲ್ಲಿ ವಿಷ್ಣುವರ್ಧನ್​ಗೆ ಏಕಷ್ಟು ಪ್ರಾಧಾನ್ಯತೆ? ದೇವರ ಕೋಣೆಯಲ್ಲಿ ವಿಷ್ಣು ಫೋಟೊ ಏಕೆ?

1977ರಲ್ಲಿ ತೆರೆಗೆ ಬಂದ ‘ಸಹೋದರರ ಸವಾಲ್​’, ‘ಗಲಾಟೆ ಸಂಸಾರ’, ‘ಕಿಲಾಡಿ ಕಿಟ್ಟು’ (1978) ಚಿತ್ರಗಳಲ್ಲೂ ವಿಷ್ಣುವರ್ಧನ್ ಹಾಗೂ ರಜನಿಕಾಂತ್ ಒಟ್ಟಾಗಿ ತೆರೆಹಂಚಿಕೊಂಡಿದ್ದರು. ಈ ಕಾರಣಕ್ಕೆ ವಿಷ್ಣುವರ್ಧನ್ ಹಾಗೂ ರಜನಿ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆಯಿತು.

ವಿಷ್ಣುವರ್ಧನ್ ಅವರು ಕೇವಲ ಕನ್ನಡಕ್ಕೆ ಮಾತ್ರ ಸೀಮಿತ ಆಗಿರಲಿಲ್ಲ. ಅವರು ಹಿಂದಿ, ತಮಿಳು, ತೆಲುಗು ಸಿನಿಮಾಗಳಲ್ಲೂ ಗುರುತಿಸಿಕೊಂಡಿದ್ದರು. ‘ಅಲೈಗಳ್​’, ‘ಶ್ರೀ ರಾಘವೇಂದ್ರ’ ಮೊದಲಾದ ತಮಿಳು ಸಿನಿಮಾಗಳಲ್ಲೂ ಅವರು ನಟಿಸಿದ್ದರು.

(ವಿಶೇಷ ಸೂಚನೆ: ಧೂಮಪಾನ ಆರೋಗ್ಯಕ್ಕೆ ಹಾನಿಕರ. ಟಿವಿ9 ಕನ್ನಡ ಧೂಮಪಾನ ಮಾಡುವುದನ್ನು ಪ್ರಚೋದಿಸುವುದಿಲ್ಲ.)

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:03 pm, Fri, 12 May 23

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?