AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್, ವಿಷ್ಣುವರ್ಧನ್ ಒಟ್ಟಾಗಿ ನಟಿಸಿದ್ದ ಸಿನಿಮಾದ ಅಪರೂಪದ ದೃಶ್ಯ ವೈರಲ್

ವಿಷ್ಣುವರ್ಧನ್ ಹಾಗೂ ರಜನಿಕಾಂತ್ 1986ರಲ್ಲಿ ತೆರೆಗೆ ಬಂದ ‘ವಿಡುದಲೈ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತು. ಶಿವಾಜಿ ಗಣೇಶನ್, ರಜನಿಕಾಂತ್, ವಿಷ್ಣುವರ್ಧನ್​ ಈ ಚಿತ್ರದಲ್ಲಿ ನಟಿಸಿದ್ದರು.

ರಜನಿಕಾಂತ್, ವಿಷ್ಣುವರ್ಧನ್ ಒಟ್ಟಾಗಿ ನಟಿಸಿದ್ದ ಸಿನಿಮಾದ ಅಪರೂಪದ ದೃಶ್ಯ ವೈರಲ್
ವಿಷ್ಣು-ರಜನಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:May 12, 2023 | 12:06 PM

ರಜನಿಕಾಂತ್ ಹಾಗೂ ವಿಷ್ಣುವರ್ಧನ್ (Vishnuvardhan) ಮಧ್ಯೆ ಒಳ್ಳೆಯ ಗೆಳೆತನ ಇತ್ತು. ವಿಷ್ಣುವರ್ಧನ್ ಅವರನ್ನು ಕಂಡರೆ ರಜನಿಕಾಂತ್​ಗೆ ಎಲ್ಲಿಲ್ಲದ ಪ್ರೀತಿ. ಈಗ ರಜನಿಕಾಂತ್ ಅವರ ಜೊತೆಗಿನ ಗೆಳೆತನ ವಿವರಿಸುವ ಅಪರೂಪದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ತಮಿಳಿನ ‘ವಿಡುದಲೈ’ ಸಿನಿಮಾದ (Viduthalai Movie) ದೃಶ್ಯ. ಈ ವಿಡಿಯೋನ ಅಭಿಮಾನಿಗಳು ರೀ-ಶೇರ್ ಮಾಡಿಕೊಳ್ಳುತ್ತಿದ್ದಾರೆ. ವಿಷ್ಣು ದಾದಾ ಅವರ ನೆನಪು ಅಭಿಮಾನಿಗಳಿಗೆ ಅತಿಯಾಗಿ ಕಾಡುತ್ತಿದೆ.

ವಿಷ್ಣುವರ್ಧನ್ ಹಾಗೂ ರಜನಿಕಾಂತ್ 1986ರಲ್ಲಿ ತೆರೆಗೆ ಬಂದ ‘ವಿಡುದಲೈ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತು. ಶಿವಾಜಿ ಗಣೇಶನ್, ರಜನಿಕಾಂತ್, ವಿಷ್ಣುವರ್ಧನ್​ ಈ ಚಿತ್ರದಲ್ಲಿ ನಟಿಸಿದ್ದರು. ಕೆ. ವಿಜಯನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾದ ಒಂದು ದೃಶ್ಯ ಎಲ್ಲರ ಗಮನ ಸೆಳೆಯುತ್ತಿದೆ.

ವಿಷ್ಣವರ್ಧನ್​ ಮೇಲೆ ರೌಡಿಗಳು ದಾಳಿ ಮಾಡಿರುತ್ತಾರೆ. ಇದರಿಂದ ಅವರು ತೀವ್ರವಾಗಿ ಗಾಯಗೊಂಡಿರುತ್ತಾರೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತದೆ. ಆ ಸಂದರ್ಭದಲ್ಲಿ ವಿಷ್ಣುನ ನೋಡಿಕೊಳ್ಳೋದು ರಜನಿಕಾಂತ್. ವಿಷ್ಣುವರ್ಧನ್ ಸಂಪೂರ್ಣವಾಗಿ ಚೇತರಿಕೆಕಂಡ ನಂತರದಲ್ಲಿ ರಜನಿ ಸಿಗರೇಟ್ ಹಚ್ಚುತ್ತಾರೆ. ಒಂದು ಬಾರಿ ಅದನ್ನು ಸೇದಿ ವಿಷ್ಣು ಬಾಯಿಗೆ ಇಡುತ್ತಾರೆ. ಈ ವಿಡಿಯೋ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಅವಿನಾಶ್-ಮಾಳವಿಕಾ ಜೀವನದಲ್ಲಿ ವಿಷ್ಣುವರ್ಧನ್​ಗೆ ಏಕಷ್ಟು ಪ್ರಾಧಾನ್ಯತೆ? ದೇವರ ಕೋಣೆಯಲ್ಲಿ ವಿಷ್ಣು ಫೋಟೊ ಏಕೆ?

1977ರಲ್ಲಿ ತೆರೆಗೆ ಬಂದ ‘ಸಹೋದರರ ಸವಾಲ್​’, ‘ಗಲಾಟೆ ಸಂಸಾರ’, ‘ಕಿಲಾಡಿ ಕಿಟ್ಟು’ (1978) ಚಿತ್ರಗಳಲ್ಲೂ ವಿಷ್ಣುವರ್ಧನ್ ಹಾಗೂ ರಜನಿಕಾಂತ್ ಒಟ್ಟಾಗಿ ತೆರೆಹಂಚಿಕೊಂಡಿದ್ದರು. ಈ ಕಾರಣಕ್ಕೆ ವಿಷ್ಣುವರ್ಧನ್ ಹಾಗೂ ರಜನಿ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆಯಿತು.

ವಿಷ್ಣುವರ್ಧನ್ ಅವರು ಕೇವಲ ಕನ್ನಡಕ್ಕೆ ಮಾತ್ರ ಸೀಮಿತ ಆಗಿರಲಿಲ್ಲ. ಅವರು ಹಿಂದಿ, ತಮಿಳು, ತೆಲುಗು ಸಿನಿಮಾಗಳಲ್ಲೂ ಗುರುತಿಸಿಕೊಂಡಿದ್ದರು. ‘ಅಲೈಗಳ್​’, ‘ಶ್ರೀ ರಾಘವೇಂದ್ರ’ ಮೊದಲಾದ ತಮಿಳು ಸಿನಿಮಾಗಳಲ್ಲೂ ಅವರು ನಟಿಸಿದ್ದರು.

(ವಿಶೇಷ ಸೂಚನೆ: ಧೂಮಪಾನ ಆರೋಗ್ಯಕ್ಕೆ ಹಾನಿಕರ. ಟಿವಿ9 ಕನ್ನಡ ಧೂಮಪಾನ ಮಾಡುವುದನ್ನು ಪ್ರಚೋದಿಸುವುದಿಲ್ಲ.)

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:03 pm, Fri, 12 May 23

ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್