AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್, ವಿಷ್ಣುವರ್ಧನ್ ಒಟ್ಟಾಗಿ ನಟಿಸಿದ್ದ ಸಿನಿಮಾದ ಅಪರೂಪದ ದೃಶ್ಯ ವೈರಲ್

ವಿಷ್ಣುವರ್ಧನ್ ಹಾಗೂ ರಜನಿಕಾಂತ್ 1986ರಲ್ಲಿ ತೆರೆಗೆ ಬಂದ ‘ವಿಡುದಲೈ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತು. ಶಿವಾಜಿ ಗಣೇಶನ್, ರಜನಿಕಾಂತ್, ವಿಷ್ಣುವರ್ಧನ್​ ಈ ಚಿತ್ರದಲ್ಲಿ ನಟಿಸಿದ್ದರು.

ರಜನಿಕಾಂತ್, ವಿಷ್ಣುವರ್ಧನ್ ಒಟ್ಟಾಗಿ ನಟಿಸಿದ್ದ ಸಿನಿಮಾದ ಅಪರೂಪದ ದೃಶ್ಯ ವೈರಲ್
ವಿಷ್ಣು-ರಜನಿ
TV9 Web
| Edited By: |

Updated on:May 12, 2023 | 12:06 PM

Share

ರಜನಿಕಾಂತ್ ಹಾಗೂ ವಿಷ್ಣುವರ್ಧನ್ (Vishnuvardhan) ಮಧ್ಯೆ ಒಳ್ಳೆಯ ಗೆಳೆತನ ಇತ್ತು. ವಿಷ್ಣುವರ್ಧನ್ ಅವರನ್ನು ಕಂಡರೆ ರಜನಿಕಾಂತ್​ಗೆ ಎಲ್ಲಿಲ್ಲದ ಪ್ರೀತಿ. ಈಗ ರಜನಿಕಾಂತ್ ಅವರ ಜೊತೆಗಿನ ಗೆಳೆತನ ವಿವರಿಸುವ ಅಪರೂಪದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ತಮಿಳಿನ ‘ವಿಡುದಲೈ’ ಸಿನಿಮಾದ (Viduthalai Movie) ದೃಶ್ಯ. ಈ ವಿಡಿಯೋನ ಅಭಿಮಾನಿಗಳು ರೀ-ಶೇರ್ ಮಾಡಿಕೊಳ್ಳುತ್ತಿದ್ದಾರೆ. ವಿಷ್ಣು ದಾದಾ ಅವರ ನೆನಪು ಅಭಿಮಾನಿಗಳಿಗೆ ಅತಿಯಾಗಿ ಕಾಡುತ್ತಿದೆ.

ವಿಷ್ಣುವರ್ಧನ್ ಹಾಗೂ ರಜನಿಕಾಂತ್ 1986ರಲ್ಲಿ ತೆರೆಗೆ ಬಂದ ‘ವಿಡುದಲೈ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತು. ಶಿವಾಜಿ ಗಣೇಶನ್, ರಜನಿಕಾಂತ್, ವಿಷ್ಣುವರ್ಧನ್​ ಈ ಚಿತ್ರದಲ್ಲಿ ನಟಿಸಿದ್ದರು. ಕೆ. ವಿಜಯನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾದ ಒಂದು ದೃಶ್ಯ ಎಲ್ಲರ ಗಮನ ಸೆಳೆಯುತ್ತಿದೆ.

ವಿಷ್ಣವರ್ಧನ್​ ಮೇಲೆ ರೌಡಿಗಳು ದಾಳಿ ಮಾಡಿರುತ್ತಾರೆ. ಇದರಿಂದ ಅವರು ತೀವ್ರವಾಗಿ ಗಾಯಗೊಂಡಿರುತ್ತಾರೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತದೆ. ಆ ಸಂದರ್ಭದಲ್ಲಿ ವಿಷ್ಣುನ ನೋಡಿಕೊಳ್ಳೋದು ರಜನಿಕಾಂತ್. ವಿಷ್ಣುವರ್ಧನ್ ಸಂಪೂರ್ಣವಾಗಿ ಚೇತರಿಕೆಕಂಡ ನಂತರದಲ್ಲಿ ರಜನಿ ಸಿಗರೇಟ್ ಹಚ್ಚುತ್ತಾರೆ. ಒಂದು ಬಾರಿ ಅದನ್ನು ಸೇದಿ ವಿಷ್ಣು ಬಾಯಿಗೆ ಇಡುತ್ತಾರೆ. ಈ ವಿಡಿಯೋ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಅವಿನಾಶ್-ಮಾಳವಿಕಾ ಜೀವನದಲ್ಲಿ ವಿಷ್ಣುವರ್ಧನ್​ಗೆ ಏಕಷ್ಟು ಪ್ರಾಧಾನ್ಯತೆ? ದೇವರ ಕೋಣೆಯಲ್ಲಿ ವಿಷ್ಣು ಫೋಟೊ ಏಕೆ?

1977ರಲ್ಲಿ ತೆರೆಗೆ ಬಂದ ‘ಸಹೋದರರ ಸವಾಲ್​’, ‘ಗಲಾಟೆ ಸಂಸಾರ’, ‘ಕಿಲಾಡಿ ಕಿಟ್ಟು’ (1978) ಚಿತ್ರಗಳಲ್ಲೂ ವಿಷ್ಣುವರ್ಧನ್ ಹಾಗೂ ರಜನಿಕಾಂತ್ ಒಟ್ಟಾಗಿ ತೆರೆಹಂಚಿಕೊಂಡಿದ್ದರು. ಈ ಕಾರಣಕ್ಕೆ ವಿಷ್ಣುವರ್ಧನ್ ಹಾಗೂ ರಜನಿ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆಯಿತು.

ವಿಷ್ಣುವರ್ಧನ್ ಅವರು ಕೇವಲ ಕನ್ನಡಕ್ಕೆ ಮಾತ್ರ ಸೀಮಿತ ಆಗಿರಲಿಲ್ಲ. ಅವರು ಹಿಂದಿ, ತಮಿಳು, ತೆಲುಗು ಸಿನಿಮಾಗಳಲ್ಲೂ ಗುರುತಿಸಿಕೊಂಡಿದ್ದರು. ‘ಅಲೈಗಳ್​’, ‘ಶ್ರೀ ರಾಘವೇಂದ್ರ’ ಮೊದಲಾದ ತಮಿಳು ಸಿನಿಮಾಗಳಲ್ಲೂ ಅವರು ನಟಿಸಿದ್ದರು.

(ವಿಶೇಷ ಸೂಚನೆ: ಧೂಮಪಾನ ಆರೋಗ್ಯಕ್ಕೆ ಹಾನಿಕರ. ಟಿವಿ9 ಕನ್ನಡ ಧೂಮಪಾನ ಮಾಡುವುದನ್ನು ಪ್ರಚೋದಿಸುವುದಿಲ್ಲ.)

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:03 pm, Fri, 12 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್