AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್, ವಿಷ್ಣುವರ್ಧನ್ ಒಟ್ಟಾಗಿ ನಟಿಸಿದ್ದ ಸಿನಿಮಾದ ಅಪರೂಪದ ದೃಶ್ಯ ವೈರಲ್

ವಿಷ್ಣುವರ್ಧನ್ ಹಾಗೂ ರಜನಿಕಾಂತ್ 1986ರಲ್ಲಿ ತೆರೆಗೆ ಬಂದ ‘ವಿಡುದಲೈ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತು. ಶಿವಾಜಿ ಗಣೇಶನ್, ರಜನಿಕಾಂತ್, ವಿಷ್ಣುವರ್ಧನ್​ ಈ ಚಿತ್ರದಲ್ಲಿ ನಟಿಸಿದ್ದರು.

ರಜನಿಕಾಂತ್, ವಿಷ್ಣುವರ್ಧನ್ ಒಟ್ಟಾಗಿ ನಟಿಸಿದ್ದ ಸಿನಿಮಾದ ಅಪರೂಪದ ದೃಶ್ಯ ವೈರಲ್
ವಿಷ್ಣು-ರಜನಿ
TV9 Web
| Edited By: |

Updated on:May 12, 2023 | 12:06 PM

Share

ರಜನಿಕಾಂತ್ ಹಾಗೂ ವಿಷ್ಣುವರ್ಧನ್ (Vishnuvardhan) ಮಧ್ಯೆ ಒಳ್ಳೆಯ ಗೆಳೆತನ ಇತ್ತು. ವಿಷ್ಣುವರ್ಧನ್ ಅವರನ್ನು ಕಂಡರೆ ರಜನಿಕಾಂತ್​ಗೆ ಎಲ್ಲಿಲ್ಲದ ಪ್ರೀತಿ. ಈಗ ರಜನಿಕಾಂತ್ ಅವರ ಜೊತೆಗಿನ ಗೆಳೆತನ ವಿವರಿಸುವ ಅಪರೂಪದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ತಮಿಳಿನ ‘ವಿಡುದಲೈ’ ಸಿನಿಮಾದ (Viduthalai Movie) ದೃಶ್ಯ. ಈ ವಿಡಿಯೋನ ಅಭಿಮಾನಿಗಳು ರೀ-ಶೇರ್ ಮಾಡಿಕೊಳ್ಳುತ್ತಿದ್ದಾರೆ. ವಿಷ್ಣು ದಾದಾ ಅವರ ನೆನಪು ಅಭಿಮಾನಿಗಳಿಗೆ ಅತಿಯಾಗಿ ಕಾಡುತ್ತಿದೆ.

ವಿಷ್ಣುವರ್ಧನ್ ಹಾಗೂ ರಜನಿಕಾಂತ್ 1986ರಲ್ಲಿ ತೆರೆಗೆ ಬಂದ ‘ವಿಡುದಲೈ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತು. ಶಿವಾಜಿ ಗಣೇಶನ್, ರಜನಿಕಾಂತ್, ವಿಷ್ಣುವರ್ಧನ್​ ಈ ಚಿತ್ರದಲ್ಲಿ ನಟಿಸಿದ್ದರು. ಕೆ. ವಿಜಯನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾದ ಒಂದು ದೃಶ್ಯ ಎಲ್ಲರ ಗಮನ ಸೆಳೆಯುತ್ತಿದೆ.

ವಿಷ್ಣವರ್ಧನ್​ ಮೇಲೆ ರೌಡಿಗಳು ದಾಳಿ ಮಾಡಿರುತ್ತಾರೆ. ಇದರಿಂದ ಅವರು ತೀವ್ರವಾಗಿ ಗಾಯಗೊಂಡಿರುತ್ತಾರೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತದೆ. ಆ ಸಂದರ್ಭದಲ್ಲಿ ವಿಷ್ಣುನ ನೋಡಿಕೊಳ್ಳೋದು ರಜನಿಕಾಂತ್. ವಿಷ್ಣುವರ್ಧನ್ ಸಂಪೂರ್ಣವಾಗಿ ಚೇತರಿಕೆಕಂಡ ನಂತರದಲ್ಲಿ ರಜನಿ ಸಿಗರೇಟ್ ಹಚ್ಚುತ್ತಾರೆ. ಒಂದು ಬಾರಿ ಅದನ್ನು ಸೇದಿ ವಿಷ್ಣು ಬಾಯಿಗೆ ಇಡುತ್ತಾರೆ. ಈ ವಿಡಿಯೋ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಅವಿನಾಶ್-ಮಾಳವಿಕಾ ಜೀವನದಲ್ಲಿ ವಿಷ್ಣುವರ್ಧನ್​ಗೆ ಏಕಷ್ಟು ಪ್ರಾಧಾನ್ಯತೆ? ದೇವರ ಕೋಣೆಯಲ್ಲಿ ವಿಷ್ಣು ಫೋಟೊ ಏಕೆ?

1977ರಲ್ಲಿ ತೆರೆಗೆ ಬಂದ ‘ಸಹೋದರರ ಸವಾಲ್​’, ‘ಗಲಾಟೆ ಸಂಸಾರ’, ‘ಕಿಲಾಡಿ ಕಿಟ್ಟು’ (1978) ಚಿತ್ರಗಳಲ್ಲೂ ವಿಷ್ಣುವರ್ಧನ್ ಹಾಗೂ ರಜನಿಕಾಂತ್ ಒಟ್ಟಾಗಿ ತೆರೆಹಂಚಿಕೊಂಡಿದ್ದರು. ಈ ಕಾರಣಕ್ಕೆ ವಿಷ್ಣುವರ್ಧನ್ ಹಾಗೂ ರಜನಿ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆಯಿತು.

ವಿಷ್ಣುವರ್ಧನ್ ಅವರು ಕೇವಲ ಕನ್ನಡಕ್ಕೆ ಮಾತ್ರ ಸೀಮಿತ ಆಗಿರಲಿಲ್ಲ. ಅವರು ಹಿಂದಿ, ತಮಿಳು, ತೆಲುಗು ಸಿನಿಮಾಗಳಲ್ಲೂ ಗುರುತಿಸಿಕೊಂಡಿದ್ದರು. ‘ಅಲೈಗಳ್​’, ‘ಶ್ರೀ ರಾಘವೇಂದ್ರ’ ಮೊದಲಾದ ತಮಿಳು ಸಿನಿಮಾಗಳಲ್ಲೂ ಅವರು ನಟಿಸಿದ್ದರು.

(ವಿಶೇಷ ಸೂಚನೆ: ಧೂಮಪಾನ ಆರೋಗ್ಯಕ್ಕೆ ಹಾನಿಕರ. ಟಿವಿ9 ಕನ್ನಡ ಧೂಮಪಾನ ಮಾಡುವುದನ್ನು ಪ್ರಚೋದಿಸುವುದಿಲ್ಲ.)

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:03 pm, Fri, 12 May 23

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ