Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಂಧನ’ ಚಿತ್ರದ ಯಶಸ್ಸು ತಡೆಯಲು ನಡೆದಿತ್ತು ಹುನ್ನಾರ; ಆದರೂ ಗೆದ್ದು ಬೀಗಿದ್ದ ವಿಷ್ಣು ಸಿನಿಮಾ

ವಿಷ್ಣುವರ್ಧನ್ ನಟನೆಯ ‘ಬಂಧನ’ ಸಿನಿಮಾ ರಿಲೀಸ್ ಆಗಿದ್ದು 1984ರ ಆಗಸ್ಟ್ 24ರಂದು. ಈ ಸಿನಿಮಾ ರಿಲೀಸ್ ಆಗಿ 40 ವರ್ಷಗಳು ಕಳೆದಿವೆ. ಈಗಲೂ ಸಿನಿಮಾ ಅನೇಕರ ಫೇವರಿಟ್ ಎನಿಸಿಕೊಂಡಿದೆ. ಈ ಸಿನಿಮಾದಿಂದ ವಿಷ್ಣುವರ್ಧನ್ ಅವರು ಗೆಲುವಿನ ನಗೆ ಬೀರಿದ್ದರು.

‘ಬಂಧನ’ ಚಿತ್ರದ ಯಶಸ್ಸು ತಡೆಯಲು ನಡೆದಿತ್ತು ಹುನ್ನಾರ; ಆದರೂ ಗೆದ್ದು ಬೀಗಿದ್ದ ವಿಷ್ಣು ಸಿನಿಮಾ
ಬಂಧನ
Follow us
ರಾಜೇಶ್ ದುಗ್ಗುಮನೆ
|

Updated on: Aug 23, 2024 | 11:39 AM

ವಿಷ್ಣುವರ್ಧನ್ ನಟನೆಯ ‘ಬಂಧನ’ ಸಿನಿಮಾ ರಿಲೀಸ್ ಆಗಿ ನಾಳೆಗೆ (ಆಗಸ್ಟ್ 24) ಬರೋಬ್ಬರಿ 40 ವರ್ಷ. 1984ರಲ್ಲಿ ರಿಲೀಸ್ ಆದ ಈ ಚಿತ್ರ ವಿಷ್ಣುವರ್ಧನ್ ಅವರ ವೃತ್ತಿ ಜೀವನದಲ್ಲಿ ಪ್ರಮುಖ ಎನಿಸಿಕೊಂಡಿತ್ತು. ಈ ಸಿನಿಮಾದಲ್ಲಿ ವಿಷ್ಣು ಹಾಗೂ ಸುಹಾಸಿನಿ ಕೆಮಿಸ್ಟ್ರಿ ಜನರಿಗೆ ಇಷ್ಟ ಆಯಿತು. ಈ ಚಿತ್ರಕ್ಕೆ ರಾಷ್ಟ್ರ, ರಾಜ್ಯ ಹಾಗೂ  ಫಿಲ್ಮ್​ಫೇರ್​ ಪ್ರಶಸ್ತಿಗಳು ಬಂದವು. ಈ ಚಿತ್ರ ಯಶಸ್ಸು ಕಾಣಬಾರದು ಎಂದು ಅನೇಕರು ಹುನ್ನಾರ ನಡೆಸಿದ್ದರು. ಆದರೆ, ಅದನ್ನೂ ಮೀರಿ ಸಿನಿಮಾ ಗೆಲುವು ಕಂಡಿತ್ತು.

‘ಬಂಧನ’ ಚಿತ್ರವನ್ನು ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡಿದ್ದರು. ಈ ಚಿತ್ರವನ್ನು ಅವರೇ ನಿರ್ಮಾಣ ಕೂಡ ಮಾಡಿದ್ದರು. ಉಶಾ ನವರತ್ನರಾಮ್ ಬರೆದ ‘ಬಂಧನ’ ಕಾದಂಬರಿ ಆಧರಿಸಿ ಈ ಸಿನಿಮಾ ಮಾಡಲಾಯಿತು. ಈ ಚಿತ್ರಕ್ಕೆ ಈಗ 40ರ ಸಂಭ್ರಮ. ಈ ಸಿನಿಮಾ 1985ರಲ್ಲಿ ತಮಿಳಿಗೆ ‘ಪ್ರೇಮ ಪಾಶಂ’ ಹೆಸರಲ್ಲಿ ರಿಮೇಕ್ ಆಯಿತು. ‘ಡಾ. ನಂದಿನಿ’ ಎಂಬ ಹೆಸರಲ್ಲಿ ತೆಲುಗಿಗೆ ಈ ಸಿನಿಮಾ ಡಬ್ ಆಯಿತು. ಈ ಚಿತ್ರವನ್ನು ಮಲಯಾಳಂ ಭಾಷೆಗೂ ಡಬ್ ಮಾಡಿ ರಿಲೀಸ್ ಮಾಡಲಾಯಿತು. ಈ ಸಿನಿಮಾದಲ್ಲಿ ಬರೋ ನಂದಿನಿ ಪಾತ್ರ ಸಾಕಷ್ಟು ಜನಪ್ರಿಯತೆ ಪಡೆಯಿತು.

ವಿಷ್ಣು ಅಂದಿನ ಕಾಲಕ್ಕೆ ಆ್ಯಕ್ಷನ್ ಸಿನಿಮಾಗಳನ್ನು ಮಾಡುತ್ತಿದ್ದರು. ಅವರು ಲವ್​​ಸ್ಟೋರಿ ಸಿನಿಮಾ ಮಾಡುತ್ತಾರೆ ಎಂದಾಗ ಅನೇಕರು ನಕ್ಕಿದ್ದರಂತೆ. ಅವರಲ್ಲರಿಗೂ ‘ಬಂಧನ’ ಸಿನಿಮಾದಿಂದ ಉತ್ತರ ಸಿಕ್ಕಿತ್ತು. 25 ಕೇಂದ್ರಗಳಲ್ಲಿ ಈ ಸಿನಿಮಾ 25 ವಾರ ಪ್ರದರ್ಶನ ಕಂಡಿತ್ತು. ಈ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದರೂ ಸಿನಿಮಾನ ತೆಗೆಸಲಾಯಿತು. ಈ ಸಿನಿಮಾಗೆ ಯಶಸ್ಸು ಸಿಗಬಾರದು ಎಂದು ಕೆಲವರು ಬಂದ ಪ್ರೇಕ್ಷಕರಿಗೆ ಥಿಯೇಟರ್​ನಲ್ಲಿ ಖಾರದಪುಡಿ ಎರಚಿದ್ದರು. ಕೆಲವರು ಬ್ಲೇಡ್​ನಲ್ಲಿ ಹೊಡೆಯುವ ಕೆಲಸ ಕೂಡ ಮಾಡಿದರು. ಆದಾಗ್ಯೂ ಸಿನಿಮಾ ಗೆದ್ದಿತ್ತು.

ಇದನ್ನೂ ಓದಿ: ವಿಷ್ಣುವರ್ಧನ್ ಸಸ್ಯಹಾರಿಯೋ, ಮಾಂಸಾಹಾರಿಯೋ? ಅಚ್ಚರಿಯ ವಿಚಾರ ತಿಳಿಸಿದ ಹಿರಿಯ ನಿರ್ದೇಶಕ

ವಿಷ್ಣುವರ್ಧನ್ ಅವರಿಗೆ ಕಪಾಳಕ್ಕೆ ಹೊಡೆಯೋ ದೃಶ್ಯ ಇತ್ತು. ಇದನ್ನು ಮಾಡೋಕೇ ಸುಹಾಸಿನಿ ಒಪ್ಪಿರಲಿಲ್ಲ. ‘ವಿಷ್ಣುವರ್ಧನ್​ಗೆ ಕಪಾಳಕ್ಕೆ ಹೊಡೆಯೋ ದೃಶ್ಯ ಇಟ್ಟಿದೀರಲ್ಲ’ ಎಂದು ರಾಜೇಂದ್ರ ಸಿಂಗ್ ಬಾಬು ಜೊತೆ ಸುಹಾಸಿನಿ ಶೂಟಿಂಗ್​ನ ಮೊದಲ ದಿನವೇ ಜಗಳ ಕೂಡ ಮಾಡಿದ್ದರು. ವಿಷ್ಟು ಅಭಿಮಾನಿಗಳು ಹಾಗೂ ಸಿನಿಪ್ರಿಯರು ಈ ಚಿತ್ರವನ್ನು ಈಗ ನೆನಪಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ