AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾ , ಇಂಟರ್‌ ನ್ಯಾಷನಲ್‌ ದಾಖಲೆಗಳ ಪುಸ್ತಕ ಸೇರಿದ ಡಾ.ವಿಷ್ಣುವರ್ಧನ್‌ ಕಟೌಟ್ ಜಾತ್ರೆ

Vishnuvardhan: ಅಗಲಿ 13 ವರ್ಷಗಳಾದರೂ ವಿಷ್ಣುವರ್ಧನ್ ಹೆಸರು ಹಸಿರಾಗಿರುವಂತೆ ಅಭಿಮಾನಿಗಳು ನೋಡಿಕೊಂಡಿದ್ದಾರೆ. ಇದೀಗ ಅವರಿಲ್ಲದ ಹೊತ್ತಿನಲ್ಲಿ ಅವರ ಹೆಸರು ದಾಖಲೆ ಪುಸ್ತಕ ಸೇರುವಂತೆ ಅಭಿಮಾನಿಗಳು ಮಾಡಿದ್ದಾರೆ.

ಏಷ್ಯಾ , ಇಂಟರ್‌ ನ್ಯಾಷನಲ್‌ ದಾಖಲೆಗಳ ಪುಸ್ತಕ ಸೇರಿದ ಡಾ.ವಿಷ್ಣುವರ್ಧನ್‌ ಕಟೌಟ್ ಜಾತ್ರೆ
ವಿಷ್ಣುವರ್ಧನ್ ಕಟೌಟ್ ಜಾತ್ರೆ
ಮಂಜುನಾಥ ಸಿ.
|

Updated on: Jun 01, 2023 | 10:45 PM

Share

ವಿಷ್ಣುವರ್ಧನ್ (Vishnuvardhan) ಅಗಲಿ 13 ವರ್ಷಗಳಾದರೂ ಅಭಿಮಾನಿಗಳು (Fans) ಇಂದಿಗೂ ಅವರನ್ನು ಸ್ಮರಿಸುತ್ತಲೇ ಇರುತ್ತಾರೆ. ಅವರ ಸಿನಿಮಾಗಳು, ಅವರ ವ್ಯಕ್ತಿತ್ವ ಅವರನ್ನು ಸದಾ ಜೀವಂತವಾಗಿಟ್ಟಿವೆ. ಇದರ ನಡುವೆ ಅವರ ಅಭಿಮಾನಿಗಳು ಸ್ವಶ್ರಮದಿಂದ ತಮ್ಮ ಮೆಚ್ಚಿನ ನಟನ ಹೆಸರು ಸದಾ ಹಸಿರಾಗಿರುವಂತೆ ವಿವಿಧ ಕಾರ್ಯಕ್ರಮಗಳನ್ನು ಮಾಡುತ್ತಲೇ ಬಂದಿದ್ದಾರೆ. ಅಂಥಹದ್ದೇ ಒಂದು ಕಾರ್ಯ, ಏಷ್ಯಾ ಬುಕ್‌ ಆಫ್‌ ರೆಕಾರ್ಡ್ (Asia Book Of Record) ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್‌ ನಲ್ಲಿ (International Book Of Record) ದಾಖಲಾಗಿ ವಿಷ್ಣು ಅಭಿಮಾನಿಗಳಿಗೆ ಹೆಮ್ಮೆ ಮೂಡಿಸಿದೆ.

ಡಾ.ವಿಷ್ಣುವರ್ಧನ್‌ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 50 ವರ್ಷಗಳಾದ ಹಿನ್ನಲೆಯಲ್ಲಿ ಅವರ 50 ಸೇನಾನಿಗಳು ಡಾ.ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ 2022 ರ ಸೆಪ್ಟೆಂಬರ್‌ 18 ರಂದು ಬೆಂಗಳೂರಿನ ಡಾ.ವಿಷ್ಣು ಪುಣ್ಯಭೂಮಿಯಲ್ಲಿ 51 ಬೃಹತ್‌ ಕಟೌಟ್‌ಗಳನ್ನು ಸ್ಥಾಪಿಸಿ “ಕಟೌಟ್‌ ಜಾತ್ರೆ” ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆ ಕಟೌಟ್‌ಗಳಿಗೆ ಬೃಹತ್‌ ಹಾರಗಳನ್ನು ಸಹ ಹಾಕಿಸಿದ್ದರು. ಇಡೀ ಕಾರ್ಯಕ್ರಮಕ್ಕೆ ಅಂದಾಜು 40 ಲಕ್ಷದಷ್ಟು ಹಣ ಖರ್ಚಾಗಿತ್ತು. ಪೊಲೀಸ್‌ ಇಲಾಖೆಯ ಪ್ರಕಾರ ಎರಡೂವರೆ ಲಕ್ಷ ಕನ್ನಡಿಗರು ಈ ಕಟೌಟ್‌ ಜಾತ್ರೆಯಲ್ಲಿ ಭಾಗವಹಿಸಿದ್ದರು.

ಅಂದೇ ಈ ಕಟೌಟ್‌ ಜಾತ್ರೆಯನ್ನು ಏಷ್ಯಾ ಬುಕ್‌ ಆಫ್‌ ರೆಕಾರ್ಡ್ ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್‌ ನಲ್ಲಿ ದಾಖಲಿಸಲು ಮನವಿಯನ್ನು ಸಲ್ಲಿಸಲಾಗಿತ್ತು. ಆ ಸಂಸ್ಥೆಗಳು ನಮ್ಮ ದಾಖಲೆ ಸಂಬಂಧ ಅನೇಕ ಹಂತದ ಪರೀಕ್ಷೆಗಳನ್ನು ನಡೆಸಿದರಲ್ಲದೆ, ಖುದ್ದಾಗಿ ಸ್ಥಳ ಪರಿಶೀಲನೆಯನ್ನು ಸಹ ಮಾಡಿದ್ದರು. ಇದೀಗ ಆ ಎಲ್ಲಾ ಹಂತದ ಪರೀಕ್ಷೆಗಳೂ ಮುಗಿದಿದ್ದು, ಈ ಕಟೌಟ್ ಜಾತ್ರೆಯು ಏಷ್ಯಾ ಬುಕ್‌ ಆಫ್‌ ರೆಕಾರ್ಡ್‌ ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್‌ ನಲ್ಲಿ ದಾಖಲೆಯಾಗಿ ದಾಖಲೆಯಾಗಿದೆ. ಆ ಎರಡೂ ದಾಖಲೆಗಳ ಸರ್ಟಿಫಿಕೇಟ್‌ ಮತ್ತು ಪದಕಗಳು ಸಂಬಂಧಿಸಿದವರಿಗೆ ತಲುಪಿವೆ.

ಇದನ್ನೂ ಓದಿ: ಅಂತ ಸಿನಿಮಾದಲ್ಲಿ ರಾಜ್​ಕುಮಾರ್, ವಿಷ್ಣುವರ್ಧನ್ ನಟಿಸಲಿಲ್ಲ ಏಕೆ?

ತೆರೆಮುಂದೆ ತೆರೆಹಿಂದೆ ನುಡಿದಂತೆ ನಡೆದ ಮೇರುನಟನ ಹೆಸರಲ್ಲಿ ಇಂತಹದ್ದೊಂದು ದಾಖಲೆಯನ್ನು ಅವರಿಲ್ಲದ ಹೊತ್ತಿನಲ್ಲಿ ಸ್ಥಾಪಿಸಲು ಸಾಧ್ಯವಾಗಿದ್ದಕ್ಕೆ ನಿಜಕ್ಕೂ ಹೆಮ್ಮೆಪಡುತ್ತೇವೆ. ಈ ದಾಖಲೆಯು ಡಾ.ವಿಷ್ಣುವರ್ಧನ್‌ ಅವರ ಅಗಲಿಕೆಯ 13 ವರ್ಷಗಳ ನಂತರವೂ ಅವರ ನೆನಪನ್ನು ಹಸಿರಾಗಿಡುವ ಕೆಲಸವನ್ನು ಅವರ ಅಭಿಮಾನಿಗಳು ನಿರಂತರವಾಗಿ ಮಾಡುತ್ತಿರುವುದರ ದ್ಯೋತಕವಾಗಿದೆ. ಈ ಕಟೌಟ್‌ ಜಾತ್ರೆಗೆ ಬೆನ್ನೆಲುಬಾಗಿ ನಿಂತ 50 ಸೇನಾನಿಗಳಿಗೆ, ಯೋಜನೆ ಕಾರ್ಯಸಾಧುಗೊಳಿಸಿದ ಆನಂದ್‌ ರಾಚ್‌, ಕಟೌಟ್‌ ವಿನ್ಯಾಸ ಮಾಡಿದ ರಾಜುವಿಷ್ಣು ಮತ್ತು ಈ ಸಂಸ್ಥೆಗಳ ಜೊತೆ ಸಂವಹನ ನಡೆಸಿ, ಸಾಧ್ಯವಾಗಿಸಿದ ಸಾಹಿತಿ ಜನಾರ್ಧನ್‌ ರಾವ್‌ ಅವರಿಗೆ ಧನ್ಯವಾದಗಳನ್ನು ಅರ್ಪಿಸಲು ಇಚ್ಚಿಸುತ್ತೇನೆ ಎಂದಿದ್ದಾರೆ ವಿಷ್ಣುಸೇನೆಯ ಮುಖಂಡ ವೀರಕಪುತ್ರ ಶ್ರೀನಿವಾಸ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ