AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ.ವಿಷ್ಣುವರ್ಧನ್ 14ನೇ ಪುಣ್ಯ ಸ್ಮರಣೆ; ಅಭಿಮಾನ್ ಸ್ಟುಡಿಯೋದಲ್ಲಿ ಅಭಿಮಾನಿಗಳಿಂದಲೇ ಪೂಜೆ

ಅಭಿಮಾನಿಗಳು ಬಂದು ವಿಷ್ಣುವರ್ಧನ್ ಸಮಾಧಿ ಬಳಿ ಪೂಜೆ ಸಲ್ಲಿಕೆ ಮಾಡಿದ್ದಾರೆ. ಪುಣ್ಯ ಸಮಾಧಿಗಾಗಿ ಅಭಿಮಾನಿಗಳು ಹೋರಾಟ ಮಾಡುತ್ತಿದ್ದಾರೆ. ಹೀಗಾಗಿ, ಸಮಾಧಿ ಬಳಿ ಯಾವುದೇ ಸಮಸ್ಯೆ ಆಗಬಾರದು ಎಂದು ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

ಡಾ.ವಿಷ್ಣುವರ್ಧನ್ 14ನೇ ಪುಣ್ಯ ಸ್ಮರಣೆ; ಅಭಿಮಾನ್ ಸ್ಟುಡಿಯೋದಲ್ಲಿ ಅಭಿಮಾನಿಗಳಿಂದಲೇ ಪೂಜೆ
ವಿಷ್ಣವುರ್ಧನ್
Follow us
Mangala RR
| Updated By: ರಾಜೇಶ್ ದುಗ್ಗುಮನೆ

Updated on:Dec 30, 2023 | 11:46 AM

ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ (Vishnuvardhan) ಅವರು ನಮ್ಮನ್ನು ಅಗಲಿ 14 ವರ್ಷಗಳು ಕಳೆದಿವೆ. ಅವರ 14ನೇ ವರ್ಷದ ಪುಣ್ಯ ತಿಥಿಯನ್ನು ಇಂದು (ಡಿಸೆಂಬರ್ 30) ನೆರವೇರಿಸಲಾಗಿದೆ. ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆ ನಡೆದ ಅಭಿಮಾನ್ ಸ್ಟುಡಿಯೋದಲ್ಲಿ ಫ್ಯಾನ್ಸ್ ಪೂಜೆ ನೆರವೇರಿಸಿದ್ದಾರೆ. ಪುಣ್ಯ ಸ್ಮರಣೆ ಅಂಗವಾಗಿ ರಕ್ತದಾನ, ನೇತ್ರದಾನ, ಅನ್ನದಾನದಂಥ ಸಾಮಾಜಿಕ ಕೆಲಸಗಳನ್ನು ಮಾಡಲಾಗುತ್ತಿದೆ. ಪೂಜೆ ಮತ್ತು ದೀಪೋತ್ಸವದಂತಹ ಕಾರ್ಯಗಳು ನಡೆಯಲಿವೆ.

ಅಭಿಮಾನಿಗಳು ಬಂದು ವಿಷ್ಣುವರ್ಧನ್ ಸಮಾಧಿ ಬಳಿ ಪೂಜೆ ಸಲ್ಲಿಕೆ ಮಾಡಿದ್ದಾರೆ. ಪುಣ್ಯ ಸಮಾಧಿಗಾಗಿ ಅಭಿಮಾನಿಗಳು ಹೋರಾಟ ಮಾಡುತ್ತಿದ್ದಾರೆ. ಹೀಗಾಗಿ, ಸಮಾಧಿ ಬಳಿ ಯಾವುದೇ ಸಮಸ್ಯೆ ಆಗಬಾರದು ಎಂದು ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಒಂದು ಕೆಎಸ್​ಆರ್​ಪಿ ತುಕಡಿ ಸ್ಥಳದಲ್ಲಿದೆ. ಅಭಿಮಾನಿಗಳು ಗಲಾಟೆ ಹಾಗು ಪ್ರತಿಭಟನೆ ಮಾಡಬಾರದು ಎನ್ನುವ ಕಾರಣಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ವಿಷ್ಣುವರ್ಧನ್ ಅಂತ್ಯಕ್ರಿತೆ ಮಾಡಿದ್ದ ಶ್ರೀಧರ್ ಅವರು ಮಾತನಾಡಿದ್ದಾರೆ. ‘ಸಮಾಧಿ ಇಲ್ಲೇ ಆಗಬೇಕು ಎಂದು ಕೋರ್ಟ್​ನಲ್ಲಿ ಕೇಸ್ ನಡೆಯುತ್ತಿದೆ. ಅವರು ಹತ್ತು ಗುಂಟೆ ಜಾಗ ಕೊಡಬೇಕು. ಅಣ್ಣನ ಅಂತ್ಯಸಂಸ್ಕಾರ ಇಲ್ಲೇ ಆಗಿರೋದು. ಹೀಗಾಗಿ ಅವರು ಇಲ್ಲೇ ಇರಬೇಕು. ಎಲ್ಲಾ ಅಭಿಮಾನಿಗಳು ಇದಕ್ಕಾಗಿ ಒಟ್ಟಾಗಿ ಕೆಲಸ ಮಾಡಬೇಕು’ ಎಂದು ಶ್ರೀಧರ್ ಕರೆ ನೀಡಿದ್ದಾರೆ. ವಿಷ್ಣು ಅಭಿಮಾನಿ ವೀರಕಪುತ್ರ ಶ್ರೀನಿವಾಸ್ ಅವರಿಂದ ಸಮಾಧಿಗೆ ಪೂಜೆ ಸಲ್ಲಿಸಲಾಗಿದೆ.

ಇದನ್ನೂ ಓದಿ: ಡಾ. ವಿಷ್ಣುವರ್ಧನ್​ ಪುಣ್ಯಭೂಮಿ ಉಳಿವಿಗಾಗಿ ಫ್ರೀಡಂ ಪಾರ್ಕ್​ನಲ್ಲಿ ಅಭಿಮಾನಿಗಳ ಪ್ರತಿಭಟನೆ

ಇತ್ತೀಚೆಗೆ ವಿಷ್ಣುವರ್ಧನ್ ಅಭಿಮಾನಿ ಸಂಘದವರು ಕರ್ನಾಟಕ ಫಿಲ್ಮ್​ ಚೇಂಬರ್ ಎದುರು ಪ್ರತಿಭಟನೆ ನಡೆಸಿದ್ದರು. ವಿಷ್ಣುವರ್ಧನ್ ವಿಚಾರದಲ್ಲಿ ಚಲನಚಿತ್ರ ಮಂಡಳಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಅಭಿಮಾನಿಗಳು ಆರೋಪಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:31 am, Sat, 30 December 23

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ