AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ.ವಿಷ್ಣುವರ್ಧನ್ 14ನೇ ಪುಣ್ಯ ಸ್ಮರಣೆ; ಅಭಿಮಾನ್ ಸ್ಟುಡಿಯೋದಲ್ಲಿ ಅಭಿಮಾನಿಗಳಿಂದಲೇ ಪೂಜೆ

ಅಭಿಮಾನಿಗಳು ಬಂದು ವಿಷ್ಣುವರ್ಧನ್ ಸಮಾಧಿ ಬಳಿ ಪೂಜೆ ಸಲ್ಲಿಕೆ ಮಾಡಿದ್ದಾರೆ. ಪುಣ್ಯ ಸಮಾಧಿಗಾಗಿ ಅಭಿಮಾನಿಗಳು ಹೋರಾಟ ಮಾಡುತ್ತಿದ್ದಾರೆ. ಹೀಗಾಗಿ, ಸಮಾಧಿ ಬಳಿ ಯಾವುದೇ ಸಮಸ್ಯೆ ಆಗಬಾರದು ಎಂದು ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

ಡಾ.ವಿಷ್ಣುವರ್ಧನ್ 14ನೇ ಪುಣ್ಯ ಸ್ಮರಣೆ; ಅಭಿಮಾನ್ ಸ್ಟುಡಿಯೋದಲ್ಲಿ ಅಭಿಮಾನಿಗಳಿಂದಲೇ ಪೂಜೆ
ವಿಷ್ಣವುರ್ಧನ್
Mangala RR
| Edited By: |

Updated on:Dec 30, 2023 | 11:46 AM

Share

ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ (Vishnuvardhan) ಅವರು ನಮ್ಮನ್ನು ಅಗಲಿ 14 ವರ್ಷಗಳು ಕಳೆದಿವೆ. ಅವರ 14ನೇ ವರ್ಷದ ಪುಣ್ಯ ತಿಥಿಯನ್ನು ಇಂದು (ಡಿಸೆಂಬರ್ 30) ನೆರವೇರಿಸಲಾಗಿದೆ. ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆ ನಡೆದ ಅಭಿಮಾನ್ ಸ್ಟುಡಿಯೋದಲ್ಲಿ ಫ್ಯಾನ್ಸ್ ಪೂಜೆ ನೆರವೇರಿಸಿದ್ದಾರೆ. ಪುಣ್ಯ ಸ್ಮರಣೆ ಅಂಗವಾಗಿ ರಕ್ತದಾನ, ನೇತ್ರದಾನ, ಅನ್ನದಾನದಂಥ ಸಾಮಾಜಿಕ ಕೆಲಸಗಳನ್ನು ಮಾಡಲಾಗುತ್ತಿದೆ. ಪೂಜೆ ಮತ್ತು ದೀಪೋತ್ಸವದಂತಹ ಕಾರ್ಯಗಳು ನಡೆಯಲಿವೆ.

ಅಭಿಮಾನಿಗಳು ಬಂದು ವಿಷ್ಣುವರ್ಧನ್ ಸಮಾಧಿ ಬಳಿ ಪೂಜೆ ಸಲ್ಲಿಕೆ ಮಾಡಿದ್ದಾರೆ. ಪುಣ್ಯ ಸಮಾಧಿಗಾಗಿ ಅಭಿಮಾನಿಗಳು ಹೋರಾಟ ಮಾಡುತ್ತಿದ್ದಾರೆ. ಹೀಗಾಗಿ, ಸಮಾಧಿ ಬಳಿ ಯಾವುದೇ ಸಮಸ್ಯೆ ಆಗಬಾರದು ಎಂದು ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಒಂದು ಕೆಎಸ್​ಆರ್​ಪಿ ತುಕಡಿ ಸ್ಥಳದಲ್ಲಿದೆ. ಅಭಿಮಾನಿಗಳು ಗಲಾಟೆ ಹಾಗು ಪ್ರತಿಭಟನೆ ಮಾಡಬಾರದು ಎನ್ನುವ ಕಾರಣಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ವಿಷ್ಣುವರ್ಧನ್ ಅಂತ್ಯಕ್ರಿತೆ ಮಾಡಿದ್ದ ಶ್ರೀಧರ್ ಅವರು ಮಾತನಾಡಿದ್ದಾರೆ. ‘ಸಮಾಧಿ ಇಲ್ಲೇ ಆಗಬೇಕು ಎಂದು ಕೋರ್ಟ್​ನಲ್ಲಿ ಕೇಸ್ ನಡೆಯುತ್ತಿದೆ. ಅವರು ಹತ್ತು ಗುಂಟೆ ಜಾಗ ಕೊಡಬೇಕು. ಅಣ್ಣನ ಅಂತ್ಯಸಂಸ್ಕಾರ ಇಲ್ಲೇ ಆಗಿರೋದು. ಹೀಗಾಗಿ ಅವರು ಇಲ್ಲೇ ಇರಬೇಕು. ಎಲ್ಲಾ ಅಭಿಮಾನಿಗಳು ಇದಕ್ಕಾಗಿ ಒಟ್ಟಾಗಿ ಕೆಲಸ ಮಾಡಬೇಕು’ ಎಂದು ಶ್ರೀಧರ್ ಕರೆ ನೀಡಿದ್ದಾರೆ. ವಿಷ್ಣು ಅಭಿಮಾನಿ ವೀರಕಪುತ್ರ ಶ್ರೀನಿವಾಸ್ ಅವರಿಂದ ಸಮಾಧಿಗೆ ಪೂಜೆ ಸಲ್ಲಿಸಲಾಗಿದೆ.

ಇದನ್ನೂ ಓದಿ: ಡಾ. ವಿಷ್ಣುವರ್ಧನ್​ ಪುಣ್ಯಭೂಮಿ ಉಳಿವಿಗಾಗಿ ಫ್ರೀಡಂ ಪಾರ್ಕ್​ನಲ್ಲಿ ಅಭಿಮಾನಿಗಳ ಪ್ರತಿಭಟನೆ

ಇತ್ತೀಚೆಗೆ ವಿಷ್ಣುವರ್ಧನ್ ಅಭಿಮಾನಿ ಸಂಘದವರು ಕರ್ನಾಟಕ ಫಿಲ್ಮ್​ ಚೇಂಬರ್ ಎದುರು ಪ್ರತಿಭಟನೆ ನಡೆಸಿದ್ದರು. ವಿಷ್ಣುವರ್ಧನ್ ವಿಚಾರದಲ್ಲಿ ಚಲನಚಿತ್ರ ಮಂಡಳಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಅಭಿಮಾನಿಗಳು ಆರೋಪಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:31 am, Sat, 30 December 23

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ