AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್​ಗಾಗಿ ಆ ಸಿನಿಮಾ ಒಪ್ಪಿಕೊಂಡಿದ್ದ ವಿಷ್ಣುವರ್ಧನ್: ಹಿಟ್ ಆಯ್ತಾ, ಫ್ಲಾಪ್ ಆಯ್ತಾ?

ವಿಷ್ಣುವರ್ಧನ್ ಹಾಗೂ ಅಂಬರೀಶ್ ಗೆಳೆತನದ ಬಗ್ಗೆ ಹಲವು ಕತೆಗಳಿವೆ. ಇಬ್ಬರೂ ಬಹಳ ಆಪ್ತ ಗೆಳೆಯರಾಗಿದ್ದರು. ಇಬ್ಬರು ಒಟ್ಟಿಗೆ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದವರು. ಅಂದಹಾಗೆ ಅಂಬರೀಶ್ ಬಲವಂತಕ್ಕೆ ವಿಷ್ಣುವರ್ಧನ್ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದರು. ಏನಾಯ್ತು ಆ ಸಿನಿಮಾ?

ಅಂಬರೀಷ್​ಗಾಗಿ ಆ ಸಿನಿಮಾ ಒಪ್ಪಿಕೊಂಡಿದ್ದ ವಿಷ್ಣುವರ್ಧನ್: ಹಿಟ್ ಆಯ್ತಾ, ಫ್ಲಾಪ್ ಆಯ್ತಾ?
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 17, 2024 | 5:01 PM

Share

ವಿಷ್ಣುವರ್ಧನ್ ಹಾಗೂ ಅಂಬರೀಷ್ ಮಧ್ಯೆ ಗಾಢವಾದ ಫ್ರೆಂಡ್ಶಿಪ್ ಇತ್ತು ಎಂಬುದು ಗೊತ್ತಿರೋ ವಿಚಾರ. ಈ ಬಗ್ಗೆ ಅವರು ಅನೇಕ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು. ಅಂಬರೀಷ್ ಸಿನಿಮಾ ಒಪ್ಪಿಕೊಂಡಿದ್ದರು ಎನ್ನುವ ಕಾರಣಕ್ಕೆ ವಿಷ್ಣುವರ್ಧನ್ ಅವರು ಸಿನಿಮಾ ಒಂದನ್ನು ಮಾಡಿದ್ದರು. ಹಾಗಾದರೆ ಈ ಚಿತ್ರ ಹಿಟ್ ಆಯಿತೋ ಅಥವಾ ಇಲ್ಲವೋ? ಆ ಬಗ್ಗೆ ಈ ಸ್ಟೋರಿಯಲ್ಲಿ ನಾವು ಹೇಳುತ್ತಿದ್ದೇವೆ. ನಾಳೆ (ಸೆಪ್ಟೆಂಬರ್ 18) ವಿಷ್ಣುವರ್ಧನ್ ಜನ್ಮದಿನ. ಹೀಗಾಗಿ, ಅವರ ಬಗ್ಗೆ ಹೇಳುತ್ತಿದ್ದೇವೆ.

‘ನಾಗರಹಾವು’ ಸಿನಿಮಾದಲ್ಲಿ ಅಂಬರೀಷ್ ಹಾಗೂ ವಿಷ್ಣುವರ್ಧನ್ ಒಟ್ಟಾಗಿ ನಟಿಸಿದರು. ವಿಷ್ಣು ಹೀರೋ ಆದರೆ, ಅಂಬರೀಷ್ ಅವರದ್ದು ವಿಲನ್ ಪಾತ್ರ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗಮನ ಸೆಳೆಯಿತು. ಪುಟ್ಟಣ್ಣ ಕಣಗಾಲ್ ನಿರ್ದೇಶನದ ಈ ಚಿತ್ರದಿಂದ ವಿಷ್ಣು ಹಾಗೂ ಅಂಬರೀಷ್ ಮಧ್ಯೆ ಗೆಳೆತನ ಬೆಳೆಯಿತು. ಕೊನೆಯವರೆಗೂ ಈ ಗೆಳೆತನ ಹಾಗೆಯೇ ಇತ್ತು.

ವಿಷ್ಣುವರ್ಧನ್ ಹಾಗೂ ಅಂಬರೀಷ್ ಅವರು ‘ಹಬ್ಬ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತು. ಆದರೆ, ಅಂಬರೀಷ್ಗೆ ಈ ಸಿನಿಮಾ ಖುಷಿ ಕೊಡಲೇ ಇಲ್ಲ. 1999ರಲ್ಲಿ ಈ ಸಿನಿಮಾ ರಿಲೀಸ್ ಆಗಿತ್ತು. ‘ನಾನು ಹಾಗೂ ವಿಷ್ಣುವರ್ಧನ್ ಅವರು ಒಟ್ಟಾಗಿ ನಟಿಸುತ್ತಿದ್ದೇವೆ ಎಂದರೆ ಅದು ಒಂದರ ಸಂಕೇತ ಆಗಿರಬೇಕು’ ಎನ್ನುವ ಭಾವನೆ ಇತ್ತಂತೆ. ಆಗ ಅಂಬರೀಷ್​ಗೆ ಬಂದಿದ್ದೇ ‘ದಿಗ್ಗಜರು’ ಸಿನಿಮಾ.

ಇದನ್ನೂ ಓದಿ:ವಿಷ್ಣುವರ್ಧನ್ ಸಸ್ಯಹಾರಿಯೋ, ಮಾಂಸಾಹಾರಿಯೋ? ಅಚ್ಚರಿಯ ವಿಚಾರ ತಿಳಿಸಿದ ಹಿರಿಯ ನಿರ್ದೇಶಕ

ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ರಾಕ್ಲೈನ್ ವೆಂಕಟೇಶ್ ಅವರು. 2001ರ ಜನವರಿ 26ರಂದು ಸಿನಿಮಾ ರಿಲೀಸ್ ಆಗಿತ್ತು. ವಿಷ್ಣು ಅವರು ದ್ವಿಪಾತ್ರದಲ್ಲಿ ನಟಿಸಿದ್ದರು. ಅವರ ಜೊತೆ ಅಂಬರೀಷ್ ಕೂಡ ಬಣ್ಣ ಹಚ್ಚಿದ್ದರು. ತಮಿಳು ಸಿನಿಮಾದ ರಿಮೇಕ್ ಇದಾಗಿತ್ತು. ಆರಂಭದಲ್ಲಿ ಈ ಸಿನಿಮಾದಲ್ಲಿ ನಟಿಸೋಕೆ ವಿಷ್ಣು ಆಸಕ್ತಿ ತೋರಿಸಿರಲಿಲ್ಲ. ಅಂಬರೀಷ್​ಗೆ ಕಥೆ ಇಷ್ಟ ಆಗಿತ್ತು. ಈ ವಿಚಾರ ಗೊತ್ತಾಗುತ್ತಿದ್ದಂತೆ ವಿಷ್ಣು ಅವರು ಖುಷಿಯಿಂದ ಸಿನಿಮಾ ಮಾಡಲು ಮುಂದೆ ಬಂದರು. ಈ ಚಿತ್ರ ರಿಲೀಸ್ ಆಗಿ ಯಶಸ್ಸು ಕಂಡಿತು.

ಇಂದು (ಸೆಪ್ಟೆಂಬರ್ 18) ವಿಷ್ಣುವರ್ಧನ್​ಗೆ ಜನ್ಮದಿನ. ಅವರು ಇಲ್ಲದೆ ಇದ್ದರೂ ಅವರ ನೆನಪು ಸದಾ ಅಭಿಮಾನಿಗಳ ಜೊತೆ ಇರುತ್ತದೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಗಮನ ಸೆಳೆದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?