AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್​ಗಾಗಿ ಆ ಸಿನಿಮಾ ಒಪ್ಪಿಕೊಂಡಿದ್ದ ವಿಷ್ಣುವರ್ಧನ್: ಹಿಟ್ ಆಯ್ತಾ, ಫ್ಲಾಪ್ ಆಯ್ತಾ?

ವಿಷ್ಣುವರ್ಧನ್ ಹಾಗೂ ಅಂಬರೀಶ್ ಗೆಳೆತನದ ಬಗ್ಗೆ ಹಲವು ಕತೆಗಳಿವೆ. ಇಬ್ಬರೂ ಬಹಳ ಆಪ್ತ ಗೆಳೆಯರಾಗಿದ್ದರು. ಇಬ್ಬರು ಒಟ್ಟಿಗೆ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದವರು. ಅಂದಹಾಗೆ ಅಂಬರೀಶ್ ಬಲವಂತಕ್ಕೆ ವಿಷ್ಣುವರ್ಧನ್ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದರು. ಏನಾಯ್ತು ಆ ಸಿನಿಮಾ?

ಅಂಬರೀಷ್​ಗಾಗಿ ಆ ಸಿನಿಮಾ ಒಪ್ಪಿಕೊಂಡಿದ್ದ ವಿಷ್ಣುವರ್ಧನ್: ಹಿಟ್ ಆಯ್ತಾ, ಫ್ಲಾಪ್ ಆಯ್ತಾ?
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 17, 2024 | 5:01 PM

Share

ವಿಷ್ಣುವರ್ಧನ್ ಹಾಗೂ ಅಂಬರೀಷ್ ಮಧ್ಯೆ ಗಾಢವಾದ ಫ್ರೆಂಡ್ಶಿಪ್ ಇತ್ತು ಎಂಬುದು ಗೊತ್ತಿರೋ ವಿಚಾರ. ಈ ಬಗ್ಗೆ ಅವರು ಅನೇಕ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು. ಅಂಬರೀಷ್ ಸಿನಿಮಾ ಒಪ್ಪಿಕೊಂಡಿದ್ದರು ಎನ್ನುವ ಕಾರಣಕ್ಕೆ ವಿಷ್ಣುವರ್ಧನ್ ಅವರು ಸಿನಿಮಾ ಒಂದನ್ನು ಮಾಡಿದ್ದರು. ಹಾಗಾದರೆ ಈ ಚಿತ್ರ ಹಿಟ್ ಆಯಿತೋ ಅಥವಾ ಇಲ್ಲವೋ? ಆ ಬಗ್ಗೆ ಈ ಸ್ಟೋರಿಯಲ್ಲಿ ನಾವು ಹೇಳುತ್ತಿದ್ದೇವೆ. ನಾಳೆ (ಸೆಪ್ಟೆಂಬರ್ 18) ವಿಷ್ಣುವರ್ಧನ್ ಜನ್ಮದಿನ. ಹೀಗಾಗಿ, ಅವರ ಬಗ್ಗೆ ಹೇಳುತ್ತಿದ್ದೇವೆ.

‘ನಾಗರಹಾವು’ ಸಿನಿಮಾದಲ್ಲಿ ಅಂಬರೀಷ್ ಹಾಗೂ ವಿಷ್ಣುವರ್ಧನ್ ಒಟ್ಟಾಗಿ ನಟಿಸಿದರು. ವಿಷ್ಣು ಹೀರೋ ಆದರೆ, ಅಂಬರೀಷ್ ಅವರದ್ದು ವಿಲನ್ ಪಾತ್ರ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗಮನ ಸೆಳೆಯಿತು. ಪುಟ್ಟಣ್ಣ ಕಣಗಾಲ್ ನಿರ್ದೇಶನದ ಈ ಚಿತ್ರದಿಂದ ವಿಷ್ಣು ಹಾಗೂ ಅಂಬರೀಷ್ ಮಧ್ಯೆ ಗೆಳೆತನ ಬೆಳೆಯಿತು. ಕೊನೆಯವರೆಗೂ ಈ ಗೆಳೆತನ ಹಾಗೆಯೇ ಇತ್ತು.

ವಿಷ್ಣುವರ್ಧನ್ ಹಾಗೂ ಅಂಬರೀಷ್ ಅವರು ‘ಹಬ್ಬ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತು. ಆದರೆ, ಅಂಬರೀಷ್ಗೆ ಈ ಸಿನಿಮಾ ಖುಷಿ ಕೊಡಲೇ ಇಲ್ಲ. 1999ರಲ್ಲಿ ಈ ಸಿನಿಮಾ ರಿಲೀಸ್ ಆಗಿತ್ತು. ‘ನಾನು ಹಾಗೂ ವಿಷ್ಣುವರ್ಧನ್ ಅವರು ಒಟ್ಟಾಗಿ ನಟಿಸುತ್ತಿದ್ದೇವೆ ಎಂದರೆ ಅದು ಒಂದರ ಸಂಕೇತ ಆಗಿರಬೇಕು’ ಎನ್ನುವ ಭಾವನೆ ಇತ್ತಂತೆ. ಆಗ ಅಂಬರೀಷ್​ಗೆ ಬಂದಿದ್ದೇ ‘ದಿಗ್ಗಜರು’ ಸಿನಿಮಾ.

ಇದನ್ನೂ ಓದಿ:ವಿಷ್ಣುವರ್ಧನ್ ಸಸ್ಯಹಾರಿಯೋ, ಮಾಂಸಾಹಾರಿಯೋ? ಅಚ್ಚರಿಯ ವಿಚಾರ ತಿಳಿಸಿದ ಹಿರಿಯ ನಿರ್ದೇಶಕ

ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ರಾಕ್ಲೈನ್ ವೆಂಕಟೇಶ್ ಅವರು. 2001ರ ಜನವರಿ 26ರಂದು ಸಿನಿಮಾ ರಿಲೀಸ್ ಆಗಿತ್ತು. ವಿಷ್ಣು ಅವರು ದ್ವಿಪಾತ್ರದಲ್ಲಿ ನಟಿಸಿದ್ದರು. ಅವರ ಜೊತೆ ಅಂಬರೀಷ್ ಕೂಡ ಬಣ್ಣ ಹಚ್ಚಿದ್ದರು. ತಮಿಳು ಸಿನಿಮಾದ ರಿಮೇಕ್ ಇದಾಗಿತ್ತು. ಆರಂಭದಲ್ಲಿ ಈ ಸಿನಿಮಾದಲ್ಲಿ ನಟಿಸೋಕೆ ವಿಷ್ಣು ಆಸಕ್ತಿ ತೋರಿಸಿರಲಿಲ್ಲ. ಅಂಬರೀಷ್​ಗೆ ಕಥೆ ಇಷ್ಟ ಆಗಿತ್ತು. ಈ ವಿಚಾರ ಗೊತ್ತಾಗುತ್ತಿದ್ದಂತೆ ವಿಷ್ಣು ಅವರು ಖುಷಿಯಿಂದ ಸಿನಿಮಾ ಮಾಡಲು ಮುಂದೆ ಬಂದರು. ಈ ಚಿತ್ರ ರಿಲೀಸ್ ಆಗಿ ಯಶಸ್ಸು ಕಂಡಿತು.

ಇಂದು (ಸೆಪ್ಟೆಂಬರ್ 18) ವಿಷ್ಣುವರ್ಧನ್​ಗೆ ಜನ್ಮದಿನ. ಅವರು ಇಲ್ಲದೆ ಇದ್ದರೂ ಅವರ ನೆನಪು ಸದಾ ಅಭಿಮಾನಿಗಳ ಜೊತೆ ಇರುತ್ತದೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಗಮನ ಸೆಳೆದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ