AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್​ಗಾಗಿ ಆ ಸಿನಿಮಾ ಒಪ್ಪಿಕೊಂಡಿದ್ದ ವಿಷ್ಣುವರ್ಧನ್: ಹಿಟ್ ಆಯ್ತಾ, ಫ್ಲಾಪ್ ಆಯ್ತಾ?

ವಿಷ್ಣುವರ್ಧನ್ ಹಾಗೂ ಅಂಬರೀಶ್ ಗೆಳೆತನದ ಬಗ್ಗೆ ಹಲವು ಕತೆಗಳಿವೆ. ಇಬ್ಬರೂ ಬಹಳ ಆಪ್ತ ಗೆಳೆಯರಾಗಿದ್ದರು. ಇಬ್ಬರು ಒಟ್ಟಿಗೆ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದವರು. ಅಂದಹಾಗೆ ಅಂಬರೀಶ್ ಬಲವಂತಕ್ಕೆ ವಿಷ್ಣುವರ್ಧನ್ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದರು. ಏನಾಯ್ತು ಆ ಸಿನಿಮಾ?

ಅಂಬರೀಷ್​ಗಾಗಿ ಆ ಸಿನಿಮಾ ಒಪ್ಪಿಕೊಂಡಿದ್ದ ವಿಷ್ಣುವರ್ಧನ್: ಹಿಟ್ ಆಯ್ತಾ, ಫ್ಲಾಪ್ ಆಯ್ತಾ?
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 17, 2024 | 5:01 PM

Share

ವಿಷ್ಣುವರ್ಧನ್ ಹಾಗೂ ಅಂಬರೀಷ್ ಮಧ್ಯೆ ಗಾಢವಾದ ಫ್ರೆಂಡ್ಶಿಪ್ ಇತ್ತು ಎಂಬುದು ಗೊತ್ತಿರೋ ವಿಚಾರ. ಈ ಬಗ್ಗೆ ಅವರು ಅನೇಕ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು. ಅಂಬರೀಷ್ ಸಿನಿಮಾ ಒಪ್ಪಿಕೊಂಡಿದ್ದರು ಎನ್ನುವ ಕಾರಣಕ್ಕೆ ವಿಷ್ಣುವರ್ಧನ್ ಅವರು ಸಿನಿಮಾ ಒಂದನ್ನು ಮಾಡಿದ್ದರು. ಹಾಗಾದರೆ ಈ ಚಿತ್ರ ಹಿಟ್ ಆಯಿತೋ ಅಥವಾ ಇಲ್ಲವೋ? ಆ ಬಗ್ಗೆ ಈ ಸ್ಟೋರಿಯಲ್ಲಿ ನಾವು ಹೇಳುತ್ತಿದ್ದೇವೆ. ನಾಳೆ (ಸೆಪ್ಟೆಂಬರ್ 18) ವಿಷ್ಣುವರ್ಧನ್ ಜನ್ಮದಿನ. ಹೀಗಾಗಿ, ಅವರ ಬಗ್ಗೆ ಹೇಳುತ್ತಿದ್ದೇವೆ.

‘ನಾಗರಹಾವು’ ಸಿನಿಮಾದಲ್ಲಿ ಅಂಬರೀಷ್ ಹಾಗೂ ವಿಷ್ಣುವರ್ಧನ್ ಒಟ್ಟಾಗಿ ನಟಿಸಿದರು. ವಿಷ್ಣು ಹೀರೋ ಆದರೆ, ಅಂಬರೀಷ್ ಅವರದ್ದು ವಿಲನ್ ಪಾತ್ರ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗಮನ ಸೆಳೆಯಿತು. ಪುಟ್ಟಣ್ಣ ಕಣಗಾಲ್ ನಿರ್ದೇಶನದ ಈ ಚಿತ್ರದಿಂದ ವಿಷ್ಣು ಹಾಗೂ ಅಂಬರೀಷ್ ಮಧ್ಯೆ ಗೆಳೆತನ ಬೆಳೆಯಿತು. ಕೊನೆಯವರೆಗೂ ಈ ಗೆಳೆತನ ಹಾಗೆಯೇ ಇತ್ತು.

ವಿಷ್ಣುವರ್ಧನ್ ಹಾಗೂ ಅಂಬರೀಷ್ ಅವರು ‘ಹಬ್ಬ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತು. ಆದರೆ, ಅಂಬರೀಷ್ಗೆ ಈ ಸಿನಿಮಾ ಖುಷಿ ಕೊಡಲೇ ಇಲ್ಲ. 1999ರಲ್ಲಿ ಈ ಸಿನಿಮಾ ರಿಲೀಸ್ ಆಗಿತ್ತು. ‘ನಾನು ಹಾಗೂ ವಿಷ್ಣುವರ್ಧನ್ ಅವರು ಒಟ್ಟಾಗಿ ನಟಿಸುತ್ತಿದ್ದೇವೆ ಎಂದರೆ ಅದು ಒಂದರ ಸಂಕೇತ ಆಗಿರಬೇಕು’ ಎನ್ನುವ ಭಾವನೆ ಇತ್ತಂತೆ. ಆಗ ಅಂಬರೀಷ್​ಗೆ ಬಂದಿದ್ದೇ ‘ದಿಗ್ಗಜರು’ ಸಿನಿಮಾ.

ಇದನ್ನೂ ಓದಿ:ವಿಷ್ಣುವರ್ಧನ್ ಸಸ್ಯಹಾರಿಯೋ, ಮಾಂಸಾಹಾರಿಯೋ? ಅಚ್ಚರಿಯ ವಿಚಾರ ತಿಳಿಸಿದ ಹಿರಿಯ ನಿರ್ದೇಶಕ

ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ರಾಕ್ಲೈನ್ ವೆಂಕಟೇಶ್ ಅವರು. 2001ರ ಜನವರಿ 26ರಂದು ಸಿನಿಮಾ ರಿಲೀಸ್ ಆಗಿತ್ತು. ವಿಷ್ಣು ಅವರು ದ್ವಿಪಾತ್ರದಲ್ಲಿ ನಟಿಸಿದ್ದರು. ಅವರ ಜೊತೆ ಅಂಬರೀಷ್ ಕೂಡ ಬಣ್ಣ ಹಚ್ಚಿದ್ದರು. ತಮಿಳು ಸಿನಿಮಾದ ರಿಮೇಕ್ ಇದಾಗಿತ್ತು. ಆರಂಭದಲ್ಲಿ ಈ ಸಿನಿಮಾದಲ್ಲಿ ನಟಿಸೋಕೆ ವಿಷ್ಣು ಆಸಕ್ತಿ ತೋರಿಸಿರಲಿಲ್ಲ. ಅಂಬರೀಷ್​ಗೆ ಕಥೆ ಇಷ್ಟ ಆಗಿತ್ತು. ಈ ವಿಚಾರ ಗೊತ್ತಾಗುತ್ತಿದ್ದಂತೆ ವಿಷ್ಣು ಅವರು ಖುಷಿಯಿಂದ ಸಿನಿಮಾ ಮಾಡಲು ಮುಂದೆ ಬಂದರು. ಈ ಚಿತ್ರ ರಿಲೀಸ್ ಆಗಿ ಯಶಸ್ಸು ಕಂಡಿತು.

ಇಂದು (ಸೆಪ್ಟೆಂಬರ್ 18) ವಿಷ್ಣುವರ್ಧನ್​ಗೆ ಜನ್ಮದಿನ. ಅವರು ಇಲ್ಲದೆ ಇದ್ದರೂ ಅವರ ನೆನಪು ಸದಾ ಅಭಿಮಾನಿಗಳ ಜೊತೆ ಇರುತ್ತದೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಗಮನ ಸೆಳೆದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು