AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್​ಗಾಗಿ ಆ ಸಿನಿಮಾ ಒಪ್ಪಿಕೊಂಡಿದ್ದ ವಿಷ್ಣುವರ್ಧನ್: ಹಿಟ್ ಆಯ್ತಾ, ಫ್ಲಾಪ್ ಆಯ್ತಾ?

ವಿಷ್ಣುವರ್ಧನ್ ಹಾಗೂ ಅಂಬರೀಶ್ ಗೆಳೆತನದ ಬಗ್ಗೆ ಹಲವು ಕತೆಗಳಿವೆ. ಇಬ್ಬರೂ ಬಹಳ ಆಪ್ತ ಗೆಳೆಯರಾಗಿದ್ದರು. ಇಬ್ಬರು ಒಟ್ಟಿಗೆ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದವರು. ಅಂದಹಾಗೆ ಅಂಬರೀಶ್ ಬಲವಂತಕ್ಕೆ ವಿಷ್ಣುವರ್ಧನ್ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದರು. ಏನಾಯ್ತು ಆ ಸಿನಿಮಾ?

ಅಂಬರೀಷ್​ಗಾಗಿ ಆ ಸಿನಿಮಾ ಒಪ್ಪಿಕೊಂಡಿದ್ದ ವಿಷ್ಣುವರ್ಧನ್: ಹಿಟ್ ಆಯ್ತಾ, ಫ್ಲಾಪ್ ಆಯ್ತಾ?
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 17, 2024 | 5:01 PM

Share

ವಿಷ್ಣುವರ್ಧನ್ ಹಾಗೂ ಅಂಬರೀಷ್ ಮಧ್ಯೆ ಗಾಢವಾದ ಫ್ರೆಂಡ್ಶಿಪ್ ಇತ್ತು ಎಂಬುದು ಗೊತ್ತಿರೋ ವಿಚಾರ. ಈ ಬಗ್ಗೆ ಅವರು ಅನೇಕ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು. ಅಂಬರೀಷ್ ಸಿನಿಮಾ ಒಪ್ಪಿಕೊಂಡಿದ್ದರು ಎನ್ನುವ ಕಾರಣಕ್ಕೆ ವಿಷ್ಣುವರ್ಧನ್ ಅವರು ಸಿನಿಮಾ ಒಂದನ್ನು ಮಾಡಿದ್ದರು. ಹಾಗಾದರೆ ಈ ಚಿತ್ರ ಹಿಟ್ ಆಯಿತೋ ಅಥವಾ ಇಲ್ಲವೋ? ಆ ಬಗ್ಗೆ ಈ ಸ್ಟೋರಿಯಲ್ಲಿ ನಾವು ಹೇಳುತ್ತಿದ್ದೇವೆ. ನಾಳೆ (ಸೆಪ್ಟೆಂಬರ್ 18) ವಿಷ್ಣುವರ್ಧನ್ ಜನ್ಮದಿನ. ಹೀಗಾಗಿ, ಅವರ ಬಗ್ಗೆ ಹೇಳುತ್ತಿದ್ದೇವೆ.

‘ನಾಗರಹಾವು’ ಸಿನಿಮಾದಲ್ಲಿ ಅಂಬರೀಷ್ ಹಾಗೂ ವಿಷ್ಣುವರ್ಧನ್ ಒಟ್ಟಾಗಿ ನಟಿಸಿದರು. ವಿಷ್ಣು ಹೀರೋ ಆದರೆ, ಅಂಬರೀಷ್ ಅವರದ್ದು ವಿಲನ್ ಪಾತ್ರ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗಮನ ಸೆಳೆಯಿತು. ಪುಟ್ಟಣ್ಣ ಕಣಗಾಲ್ ನಿರ್ದೇಶನದ ಈ ಚಿತ್ರದಿಂದ ವಿಷ್ಣು ಹಾಗೂ ಅಂಬರೀಷ್ ಮಧ್ಯೆ ಗೆಳೆತನ ಬೆಳೆಯಿತು. ಕೊನೆಯವರೆಗೂ ಈ ಗೆಳೆತನ ಹಾಗೆಯೇ ಇತ್ತು.

ವಿಷ್ಣುವರ್ಧನ್ ಹಾಗೂ ಅಂಬರೀಷ್ ಅವರು ‘ಹಬ್ಬ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತು. ಆದರೆ, ಅಂಬರೀಷ್ಗೆ ಈ ಸಿನಿಮಾ ಖುಷಿ ಕೊಡಲೇ ಇಲ್ಲ. 1999ರಲ್ಲಿ ಈ ಸಿನಿಮಾ ರಿಲೀಸ್ ಆಗಿತ್ತು. ‘ನಾನು ಹಾಗೂ ವಿಷ್ಣುವರ್ಧನ್ ಅವರು ಒಟ್ಟಾಗಿ ನಟಿಸುತ್ತಿದ್ದೇವೆ ಎಂದರೆ ಅದು ಒಂದರ ಸಂಕೇತ ಆಗಿರಬೇಕು’ ಎನ್ನುವ ಭಾವನೆ ಇತ್ತಂತೆ. ಆಗ ಅಂಬರೀಷ್​ಗೆ ಬಂದಿದ್ದೇ ‘ದಿಗ್ಗಜರು’ ಸಿನಿಮಾ.

ಇದನ್ನೂ ಓದಿ:ವಿಷ್ಣುವರ್ಧನ್ ಸಸ್ಯಹಾರಿಯೋ, ಮಾಂಸಾಹಾರಿಯೋ? ಅಚ್ಚರಿಯ ವಿಚಾರ ತಿಳಿಸಿದ ಹಿರಿಯ ನಿರ್ದೇಶಕ

ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ರಾಕ್ಲೈನ್ ವೆಂಕಟೇಶ್ ಅವರು. 2001ರ ಜನವರಿ 26ರಂದು ಸಿನಿಮಾ ರಿಲೀಸ್ ಆಗಿತ್ತು. ವಿಷ್ಣು ಅವರು ದ್ವಿಪಾತ್ರದಲ್ಲಿ ನಟಿಸಿದ್ದರು. ಅವರ ಜೊತೆ ಅಂಬರೀಷ್ ಕೂಡ ಬಣ್ಣ ಹಚ್ಚಿದ್ದರು. ತಮಿಳು ಸಿನಿಮಾದ ರಿಮೇಕ್ ಇದಾಗಿತ್ತು. ಆರಂಭದಲ್ಲಿ ಈ ಸಿನಿಮಾದಲ್ಲಿ ನಟಿಸೋಕೆ ವಿಷ್ಣು ಆಸಕ್ತಿ ತೋರಿಸಿರಲಿಲ್ಲ. ಅಂಬರೀಷ್​ಗೆ ಕಥೆ ಇಷ್ಟ ಆಗಿತ್ತು. ಈ ವಿಚಾರ ಗೊತ್ತಾಗುತ್ತಿದ್ದಂತೆ ವಿಷ್ಣು ಅವರು ಖುಷಿಯಿಂದ ಸಿನಿಮಾ ಮಾಡಲು ಮುಂದೆ ಬಂದರು. ಈ ಚಿತ್ರ ರಿಲೀಸ್ ಆಗಿ ಯಶಸ್ಸು ಕಂಡಿತು.

ಇಂದು (ಸೆಪ್ಟೆಂಬರ್ 18) ವಿಷ್ಣುವರ್ಧನ್​ಗೆ ಜನ್ಮದಿನ. ಅವರು ಇಲ್ಲದೆ ಇದ್ದರೂ ಅವರ ನೆನಪು ಸದಾ ಅಭಿಮಾನಿಗಳ ಜೊತೆ ಇರುತ್ತದೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಗಮನ ಸೆಳೆದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ