AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vishnuvardhan Memorial: ಜ.29ಕ್ಕೆ ಮೈಸೂರಿನಲ್ಲಿ ವಿಷ್ಣುವರ್ಧನ್​ ಸ್ಮಾರಕ ಉದ್ಘಾಟನೆ; ಸಿಹಿ ಸುದ್ದಿ ​ನೀಡಿದ ಅನಿರುದ್ಧ್​

Anirudh Jatkar | Vishnuvardhan Smaraka: ಮೈಸೂರಿನ ಎಚ್​.ಡಿ. ಕೋಟೆ ರಸ್ತೆಯ ಅಲ್ಲಾಳು ಗ್ರಾಮದಲ್ಲಿ ಜನವರಿ 29ರಂದು ಬೆಳಗ್ಗೆ 11 ಗಂಟೆಗೆ ವಿಷ್ಣುವರ್ಧನ್​ ಸ್ಮಾರಕದ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಅಭಿಮಾನಿಗಳು ಕಾದಿದ್ದಾರೆ.

Vishnuvardhan Memorial: ಜ.29ಕ್ಕೆ ಮೈಸೂರಿನಲ್ಲಿ ವಿಷ್ಣುವರ್ಧನ್​ ಸ್ಮಾರಕ ಉದ್ಘಾಟನೆ; ಸಿಹಿ ಸುದ್ದಿ ​ನೀಡಿದ ಅನಿರುದ್ಧ್​
ಅನಿರುದ್ಧ್, ವಿಷ್ಣುವರ್ಧನ್
TV9 Web
| Edited By: |

Updated on:Jan 12, 2023 | 4:56 PM

Share

ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್​ ಅವರ ಸ್ಮಾರಕದ (Vishnuvardhan Memorial) ಉದ್ಘಾಟನೆಗೆ ಸಮಯ ಕೂಡಿಬಂದಿದೆ. ಈ ಸಂಭ್ರಮದ ಕ್ಷಣಕ್ಕಾಗಿ ವಿಷ್ಣು ದಾದಾ ಅಭಿಮಾನಿಗಳು ಮತ್ತು ಅವರ ಕುಟುಂಬದವರು ಹಲವು ವರ್ಷಗಳಿಂದಲೂ ಕಾದಿದ್ದರು. ಈಗ ವಿಷ್ಣುವರ್ಧನ್​ ಅಳಿಯ ಅನಿರುದ್ಧ್​ ಅವರು ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಜನವರಿ 29ರಂದು ಮೈಸೂರಿನಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್​ (Dr Vishnuvardhan) ಅವರ ಸ್ಮಾರಕ ಉದ್ಘಾಟನೆ ಆಗಲಿದೆ ಎಂಬ ವಿಚಾರವನ್ನು ಅವರು ಬಹಿರಂಗಪಡಿಸಿದ್ದಾರೆ. ‘ಸಾಹಸ ಸಿಂಹ’ನ ಸ್ಮಾರಕದ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಜರಿ ಹಾಕಲಿದ್ದಾರೆ. ಈ ವಿಷಯ ಕೇಳಿ ವಿಷ್ಣುವರ್ಧನ್​ ಫ್ಯಾನ್ಸ್​ ಖುಷಿ ಆಗಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಳ್ಳಬೇಕು ಎಂದು ಅನಿರುದ್ಧ್ (Anirudh Jatkar) ಕೇಳಿಕೊಂಡಿದ್ದಾರೆ.

ಮೈಸೂರಿನ ಎಚ್​.ಡಿ. ಕೋಟೆ ರಸ್ತೆಯ ಅಲ್ಲಾಳು ಗ್ರಾಮದಲ್ಲಿ ಜನವರಿ 29ರಂದು ಬೆಳಗ್ಗೆ 11 ಗಂಟೆಗೆ ವಿಷ್ಣುವರ್ಧನ್​ ಸ್ಮಾರಕದ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಅಭಿಮಾನಿಗಳು ಕಾದಿದ್ದಾರೆ. ಸಮಾರಂಭಕ್ಕೆ ಬರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಪ್ಪಿಕೊಳ್ಳುತ್ತಿದ್ದಂತೆಯೇ ನಟ ಅನಿರುದ್ಧ್ ಅವರು ಈ ಗುಡ್​ ನ್ಯೂಸ್​ ನೀಡಿದ್ದಾರೆ.

ಇದನ್ನೂ ಓದಿ
Image
Jaggesh: ಬೇರೆಯವರ ಜಾಗದಲ್ಲಿ ಮನೆ ಕಟ್ಟಿದ್ದ ವಿಷ್ಣುಗೆ ಬಳಿಕ ಸಿಕ್ತು ಡಬಲ್​ ಸೈಟ್​: ಜಗ್ಗೇಶ್​ ತೆರೆದಿಟ್ಟ ವಿಷಯ ಇದು
Image
Dr Vishnuvardhan House: ಹೇಗಿದೆ ನೋಡಿ ವಿಷ್ಣುವರ್ಧನ್​ ಹೊಸ ಮನೆ; ‘ವಲ್ಮೀಕ’ ಗೃಹ ಪ್ರವೇಶದಲ್ಲಿ ಅನಿರುದ್ಧ್​ ಕುಟುಂಬ
Image
Basavaraj Bommai: ವಿಷ್ಣುವರ್ಧನ್​ ಹೊಸ ಮನೆ ‘ವಲ್ಮೀಕ’ ಗೃಹ ಪ್ರವೇಶಕ್ಕೆ ಬಂದ ಸಿಎಂ ಬಸವರಾಜ ಬೊಮ್ಮಾಯಿ
Image
ವಿಷ್ಣುವರ್ಧನ್​ ಪ್ರೀತಿಸಿದ ಹುಡುಗಿಗೆ ಸುಂದರ್​ ರಾಜ್​ ಹೂವು ಕೊಟ್ಟಿದ್ದೇಕೆ? ಇಲ್ಲಿದೆ ಇಂಟರೆಸ್ಟಿಂಗ್​ ಘಟನೆಯ ವಿವರ

‘ಎಲ್ಲರಿಗೂ ನಮಸ್ಕಾರ.. ಮೈಸೂರಿನಲ್ಲಿ ಪೂರ್ಣಗೊಂಡಿರುವ ವಿಷ್ಣುವರ್ಧನ್​ ಅವರ ಸ್ಮಾರಕದ ಉದ್ಘಾಟನೆಗೆ ಬರಲು ಮಾನ್ಯ ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ. ತಾವೆಲ್ಲರೂ ಇಷ್ಟು ವರ್ಷ ಕಾದಿದ್ದೀರಿ. ಇಂದು ಈ ಸಂತೋಷದ ಸುದ್ದಿಯನ್ನು ಎಲ್ಲರೂ ಕೇಳುತ್ತಿದ್ದೀರಿ. ನೀವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ವಿಷ್ಣುವರ್ಧನ್​ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಅಂತ ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ’ ಎಂದು ಅನಿರುದ್ಧ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:56 pm, Thu, 12 January 23

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ