AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ವಿಷ್ಣುವರ್ಧನ್​, ಉಪೇಂದ್ರ, ಶ್ರುತಿ ಜನ್ಮದಿನ; ಅಭಿಮಾನಿಗಳಿಗೆ ಏನೆಲ್ಲ ಸಿಗಲಿದೆ?

ಸಾಹಸ ಸಿಂಹ ವಿಷ್ಣುವರ್ಧನ್​, ರಿಯಲ್​ ಸ್ಟಾರ್​ ಉಪೇಂದ್ರ ಹಾಗೂ ಹಿರಿಯ ನಟಿ ಶ್ರುತಿಗೆ ಇಂದು ಜನ್ಮದಿನ. ಸೋಶಿಯಲ್​ ಮೀಡಿಯಾದಲ್ಲಿ ಇವರಿಗೆ ಶುಭಾಶಯ ಹರಿದುಬರುತ್ತಿದೆ.

ಇಂದು ವಿಷ್ಣುವರ್ಧನ್​, ಉಪೇಂದ್ರ, ಶ್ರುತಿ ಜನ್ಮದಿನ; ಅಭಿಮಾನಿಗಳಿಗೆ ಏನೆಲ್ಲ ಸಿಗಲಿದೆ?
ವಿಷ್ಣುವರ್ಧನ್​, ಉಪೇಂದ್ರ, ಶ್ರುತಿ
TV9 Web
| Updated By: ಮದನ್​ ಕುಮಾರ್​|

Updated on: Sep 18, 2021 | 7:33 AM

Share

ಸೆಪ್ಟೆಂಬರ್​ 18 ಸಿನಿಮಾ ಮಂದಿಯ ಪಾಲಿಗೆ ವಿಶೇಷ ದಿನ. ಏಕೆಂದರೆ ಸ್ಯಾಂಡಲ್​ವುಡ್​ನ​ ಮೂವರ ಜನ್ಮದಿನ ಒಂದೇ ದಿನ ಬಂದಿದೆ. ಸಾಹಸ ಸಿಂಹ ವಿಷ್ಣುವರ್ಧನ್​, ರಿಯಲ್​ ಸ್ಟಾರ್​ ಉಪೇಂದ್ರ ಹಾಗೂ ಹಿರಿಯ ನಟಿ ಶ್ರುತಿ ಹುಟ್ಟಿದ್ದು ಸೆಪ್ಟೆಂಬರ್​ 18ರಂದೇ. ಈ ವಿಶೇಷ ದಿನವನ್ನು ಅಭಿಮಾನಿಗಳು ನಾನಾ ರೀತಿಯಲ್ಲಿ ಆಚರಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಶುಭಾಶಯ ಹರಿದುಬರುತ್ತಿದೆ.

ವಿಷ್ಣವರ್ಧನ್​ಗೆ 71ನೇ ಜನ್ಮದಿನ

ಹಿರಿಯ ನಟ ವಿಷ್ಣುವರ್ಧನ್​ ಅವರು ನಮ್ಮ ಜತೆಗೆ ಇಂದು ಇದ್ದಿದ್ದರೆ 71ನೇ ಜನ್ಮದಿನಾಚರಣೆ ಆಚರಿಸಿಕೊಳ್ಳುತ್ತಿದ್ದರು. ಅವರು ಇಲ್ಲದೆ ಇದ್ದರೂ ಅಭಿಮಾನಿಗಳು ಸಾಹಸ ಸಿಂಹನ ಜನ್ಮದಿನಾಚರಣೆಯನ್ನು ಆಚರಿಸೋಕೆ ಮರೆಯೋದಿಲ್ಲ. ವಿಷ್ಣುವರ್ಧನ್​ ಅಭಿಮಾನಿಗಳು ಈ ಬಾರಿಯೂ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದಾರೆ. ಕೆಲ ಅಭಿಮಾನಿ ಸಂಘಗಳು ಸಾಮಾಜಿಕ ಕೆಲಸಗಳನ್ನು ಮಾಡುವ ಮೂಲಕ ವಿಷ್ಣುವರ್ಧನ್​ಗೆ ಗೌರವ ಸಲ್ಲಿಸುವ ಕೆಲಸ ಮಾಡುತ್ತಿವೆ. ಕೆಲವೆಡೆ ಅನ್ನದಾನ, ರಕ್ತದಾನ ಕಾರ್ಯಕ್ರಮಗಳು ನಡೆಯುತ್ತಿವೆ.

ಕೆಲ ದಿನಗಳ ಹಿಂದೆ ಒರಿಸ್ಸಾದ ಪುರಿಯ ಮೆರೀನ್ ಡ್ರೈವ್ ಬೀಚ್​ನಲ್ಲಿ  ಡಾ. ವಿಷ್ಣುವರ್ಧನ್ ಅವರ ಮರಳು ಶಿಲ್ಪ ರಚಿಸಲಾಗಿತ್ತು. ಅವರ ಜನ್ಮದಿನದ ಪ್ರಯುಕ್ತ ಇದನ್ನು ರಚಿಸಲಾಗಿತ್ತು. 6 ಅಡಿ ಎತ್ತರ ಮತ್ತು 15 ಅಡಿ ಅಗಲದ ಮರಳು ಶಿಲ್ಪ ಅರಳಿದ್ದು ವಿಶೇಷವಾಗಿತ್ತು. ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಶಿಲ್ಪವನ್ನು ರಚಿಸಿದ್ದರು.

ಉಪ್ಪಿ ದಿನದ ಸ್ಪೆಷಲ್​ ಏನು?

ಇಂದು ಉಪೇಂದ್ರ ಅವರ ಜನ್ಮದಿನ. ಇದನ್ನು ಆಚರಿಸೋಕೆ ಅಭಿಮಾನಿಗಳು ಕಾದು ಕೂತಿದ್ದರು. ಆದರೆ, ಉಪ್ಪಿ ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ. ‘ಅಭಿಮಾನಿಗಳ ದಿನ, 18-09-2021. ಪ್ರತಿವರ್ಷ ಅಭಿಮಾನಿಗಳೊಂದಿಗೆ ಆಚರಿಸುತ್ತಿದ್ದ ಅಭಿಮಾನಿಗಳ ದಿನದ ಸಂಭ್ರಮ ಈ ವರ್ಷವೂ ಆಚರಿಸಲು ಆಗದಿರುವುದಕ್ಕೆ ವಿಷಾದಿಸುತ್ತೇನೆ. ನಾನು ಬೆಂಗಳೂರಿನಲ್ಲಿ ಇಲ್ಲದಿರುವ ಕಾರಣ ಎಲ್ಲಾ ಅಭಿಮಾನಿಗಳು ಅವರವರು ಇರುವ ಕಡೆಯೇ ಸರಳವಾಗಿ ಈ ದಿನವನ್ನು ಆಚರಿಸಿ ಹಾರೈಸಬೇಕಾಗಿ ಬಯಸುತ್ತೇನೆ’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಉಪ್ಪಿ ಪೋಸ್ಟ್​ ಮಾಡಿದ್ದಾರೆ. ಆದರೆ, ಸೋಶಿಯಲ್​ ಮೀಡಿಯಾದಲ್ಲಿ ಉಪ್ಪಿ ಜನ್ಮದಿನದ ಸಂಭ್ರಮ ಜೋರಾಗಿದೆ. ಅಭಿಮಾನಿಗಳು ಉಪೇಂದ್ರಗೆ ಬರ್ತ್​ಡೇ ವಿಶ್​ ಮಾಡುತ್ತಿದ್ದಾರೆ.

ಇನ್ನು, ಉಪೇಂದ್ರ ಅವರು ನಿರ್ದೇಶನಕ್ಕೆ ಕಂಬ್ಯಾಕ್​ ಮಾಡುವ ಸುದ್ದಿ ಸಾಕಷ್ಟು ಮೊದಲಿನಿಂದಲೂ ಹರಿದಾಡುತ್ತಲೇ ಇದೆ. ಇತ್ತೀಚೆಗೆ ಪೋಸ್ಟರ್​ ಕೂಡ ಹರಿದಾಡಿತ್ತು. ಈ ಬಗ್ಗೆ ಇಂದು ಅಧಿಕೃತವಾಗುವ ಸಾಧ್ಯತೆ ಇದೆ. ಇನ್ನು, ‘ಕಬ್ಜ’ ಸಿನಿಮಾ ತಂಡದಿಂದ ಹೊಸ ಪೋಸ್ಟರ್​ ರಿಲೀಸ್​ ಆಗುವ ಸಾಧ್ಯತೆ ಇದೆ.

ಹಿರಿಯ ನಟಿಗೆ ಜನ್ಮದಿನ

ಹಿರಿಯ ನಟಿ ಶ್ರುತಿಗೆ ಇಂದು ಜನ್ಮದಿನ. ಅವರಿಗೆ ಅಭಿಮಾನಿಗಳು ಹಾಗೂ ಚಿತ್ರರಂಗದ ಕಡೆಯಿಂದ ಶುಭಾಶಯಗಳು ಬರುತ್ತಿವೆ. ಚಿತ್ರರಂಗದಲ್ಲಿ ಶ್ರುತಿ ಸಾಕಷ್ಟು ವರ್ಷಗಳ ಕಾಲ ಶ್ರಮಿಸಿದ್ದಾರೆ. ಹೀಗಾಗಿ, ಅವರಿಗೂ ದೊಡ್ಡ ಅಭಿಮಾನಿ ಬಳಗ ಇದೆ. ಅವರೆಲ್ಲರೂ ಶ್ರುತಿಗೆ ಶುಭಾಶಯ ಕೋರುತ್ತಿದ್ದಾರೆ.

ಇದನ್ನೂ ಓದಿ:

ಪುತ್ಥಳಿ ತೆರವು ವಿಚಾರ: ಸರ್ಕಾರದ ನಿರ್ಲಕ್ಷ್ಯತನ ಕೂಡ ಇದರಲ್ಲಿದೆ ಎಂದ ವಿಷ್ಣುವರ್ಧನ್​ ಅಳಿಯ ಅನಿರುದ್ಧ್​​

ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ