AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಉಡುಗೊರೆ, ಮರು ಬಿಡುಗಡೆ ಆಗುತ್ತಿದೆ ಹಿಟ್ ಸಿನಿಮಾ

Vishnuvardhana movie: ಸೆಪ್ಟೆಂಬರ್ 2 ಸುದೀಪ್ ಅವರ ಹುಟ್ಟುಹಬ್ಬ. ಸೆಪ್ಟೆಂಬರ್ 1 ರಂದೇ ಸುದೀಪ್ ಅವರು ಅಭಿಮಾನಿಗಳನ್ನು ಭೇಟಿ ಆಗಲಿದ್ದಾರೆ. ಇನ್ನು ಇದೇ ಸಮಯದಲ್ಲಿ ಸುದೀಪ್ ಅಭಿಮಾನಿಗಳಿಗೆ ಉಡುಗೊರೆಯೊಂದು ದೊರೆತಿದೆ. ಸುದೀಪ್ ಅವರ ಹಳೆಯ ಸೂಪರ್ ಹಿಟ್ ಸಿನಿಮಾ ಒಂದು ಮರು ಬಿಡುಗಡೆ ಆಗುತ್ತಿದೆ. ಸುದೀಪ್ ಹುಟ್ಟುಹಬ್ಬದ ಪ್ರಯುಕ್ತವೇ ಈ ಸಿನಿಮಾ ಅನ್ನು ಮರು ಬಿಡುಗಡೆ ಮಾಡಲಾಗುತ್ತಿದೆ.

ಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಉಡುಗೊರೆ, ಮರು ಬಿಡುಗಡೆ ಆಗುತ್ತಿದೆ ಹಿಟ್ ಸಿನಿಮಾ
Sudeep Movies
ಮಂಜುನಾಥ ಸಿ.
|

Updated on:Aug 28, 2025 | 11:10 AM

Share

ಕಿಚ್ಚ ಸುದೀಪ್ (Kichcha Sudeep) ಅವರ ಹುಟ್ಟುಹಬ್ಬಕ್ಕೆ ಇನ್ನು ಮೂರು ದಿನಗಳಷ್ಟೆ ಬಾಕಿ ಇದೆ. ಕೆಲ ದಿನಗಳ ಹಿಂದೆಯೇ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದ ಸುದೀಪ್, ಅಮ್ಮನಿಲ್ಲದ ಮೊದಲ ಹುಟ್ಟುಹಬ್ಬ ಆಚರಣೆ ಬಗ್ಗೆ ವಿಷಾಧದಿಂದಲೇ ಪೋಸ್ಟ್ ಹಂಚಿಕೊಂಡಿದ್ದರು. ತಮಗೆ ವೈಯಕ್ತಿಕವಾಗಿ ಮನಸ್ಸಿಲ್ಲದಿದ್ದರೂ ಸಹ ಅಭಿಮಾನಿಗಳನ್ನು ನಿರಾಸೆಪಡಿಸಬಾರದೆಂಬ ಕಾರಣಕ್ಕೆ ಒಂದು ದಿನ ಮುಂಚಿತವಾಗಿ ಅಂದರೆ ಸೆಪ್ಟೆಂಬರ್ 1 ರ ರಾತ್ರಿಯೇ ಅಭಿಮಾನಿಗಳನ್ನು ಭೇಟಿ ಮಾಡುವುದಾಗಿ ಸುದೀಪ್ ಹೇಳಿದ್ದಾರೆ. ಇದರ ಜೊತೆಗೆ ಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಉಡುಗೊರೆಯೊಂದು ದೊರೆತಿದೆ.

ಸುದೀಪ್ ನಟನೆಯ ಸೂಪರ್ ಹಿಟ್ ಸಿನಿಮಾ ‘ವಿಷ್ಣುವರ್ಧನ’ ಕಿಚ್ಚನ ಹುಟ್ಟುಹಬ್ಬದ ಪ್ರಯುಕ್ತ ಮರು ಬಿಡುಗಡೆ ಆಗುತ್ತಿದೆ. 2011 ರಲ್ಲಿ ಬಿಡುಗಡೆ ಆಗಿದ್ದ ಸೂಪರ್ ಹಿಟ್ ಸಿನಿಮಾ ‘ವಿಷ್ಣುವರ್ಧನ’ ಇದೀಗ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಮರು ಬಿಡುಗಡೆ ಆಗುತ್ತಿದೆ. ಆಗಸ್ಟ್ 29ರಂದು ಬೆಂಗಳೂರು ಸೇರಿದಂತೆ ಇನ್ನೂ ಹಲವು ಕಡೆಗಳಲ್ಲಿ ಸೀಮಿತ ಚಿತ್ರಮಂದಿರಗಳಲ್ಲಿ ಸಿನಿಮಾ ಮರು ಬಿಡುಗಡೆ ಮಾಡಲಾಗುತ್ತಿದೆ.

2011ರ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆಗಿದ್ದ ‘ವಿಷ್ಣುವರ್ಧನ’ ಆಕ್ಷನ್ ಕಾಮಿಡಿ ಸಿನಿಮಾ ಆಗಿತ್ತು. ಸಾಮಾನ್ಯ ಯುವಕನೊಬ್ಬ ತನ್ನ ಚಾಣಾಕ್ಷತನ ಧೈರ್ಯದಿಂದ ದೊಡ್ಡ ಮಾಫಿಯಾ ಡಾನ್ ಅನ್ನು ಎದುರಿಸುವುದು ಹಾಗೂ ಆತನನ್ನು ಮಟ್ಟ ಹಾಕುವ ಕತೆಯನ್ನು ಒಳಗೊಂಡಿತ್ತು. ಸಿನಿಮಾನಲ್ಲಿ ಭಾವನಾ ನಾಯಕಿ, ಸೋನು ಸೂದ್ ವಿಲನ್, ಪ್ರಿಯಾಮಣಿ ವಿಶೇಷ ಪಾತ್ರದಲ್ಲಿ ನಟಿಸಿದ್ದರು. ಅರುಣ್ ಸಾಗರ್, ಸುದೀಪ್ ಗೆಳೆಯನ ಪಾತ್ರದಲ್ಲಿ ಮಿಂಚಿದ್ದರು. ಸಿನಿಮಾದ ಹಾಸ್ಯ ದೃಶ್ಯಗಳು ಇಂದಿಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಸಿನಿಮಾದ ಹಾಡುಗಳು ಸಹ ಹಿಟ್ ಆಗಿದ್ದವು. ಆಗಿನ ಕಾಲಕ್ಕೆ ಸಿನಿಮಾ ದೊಡ್ಡ ಮೊತ್ತದ ಕಲೆಕ್ಷನ್ ಮಾಡಿತ್ತು. ದ್ವಾರಕೀಶ್ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದರೆ ಪೊನ್ ಕುಮಾರನ್ ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ:ವಿಷ್ಣು ಸಮಾಧಿ ಧ್ವಂಸ: ವಿಷಯ ತಿಳಿದಾಗ ಸುದೀಪ್ ಮೊದಲ ಪ್ರತಿಕ್ರಿಯೆ ಹೇಗಿತ್ತು?

ಇನ್ನು ಸುದೀಪ್ ಅವರು ಇದೀಗ ಕೆಲವು ಸಿನಿಮಾಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅನುಪ್ ಭಂಡಾರಿ ನಿರ್ದೇಶಿಸುತ್ತಿರುವ ‘ಬಿಲ್ಲಾ ರಂಗ ಭಾಷಾ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಭಾರಿ ದೊಡ್ಡ ಸೆಟ್ ಹಾಕಿ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿದೆ. ಅದರ ಜೊತೆಗೆ ಕೆಆರ್​ಜಿ ನಿರ್ಮಾಣ ಸಂಸ್ಥೆಯ ಹೊಸ ಸಿನಿಮಾನಲ್ಲಿ ಸುದೀಪ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಇವುಗಳ ಹೊರತಾಗಿ ತಮಿಳು ನಿರ್ದೇಶಕ ಚೇರನ್ ಅವರು ನಿರ್ದೇಶಿಸಲಿರುವ ಹೊಸ ಸಿನಿಮಾನಲ್ಲಿ ಸುದೀಪ್ ನಟಿಸಲಿದ್ದಾರೆ ಎಂಬ ಬಗ್ಗೆಯೂ ಸುದ್ದಿಗಳು ಹರಿದಾಡಿದ್ದವು. ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಅವರಿಗಾಗಿ ಸಿನಿಮಾ ನಿರ್ದೇಶಿಸಲು ಸಹ ಸುದೀಪ್ ಮುಂದಾಗಿದ್ದರು. ಆದರೆ ಅದು ಮಾತುಕತೆ ಹಂತವನ್ನು ಇನ್ನೂ ದಾಟಿದಂತಿಲ್ಲ. ಇವೆಲ್ಲವುದರ ನಡುವೆ ಸುದೀಪ್ 12ನೇ ಸೀಸನ್ ಬಿಗ್​​ಬಾಸ್ ಅನ್ನು ನಿರೂಪಣೆ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:58 am, Thu, 28 August 25

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ