AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣು ನಟನೆಯ ‘ಬಂಧನ’ ಸಿನಿಮಾ ತಡೆಯಲು ನಡೆದ ಪ್ರಯತ್ನಗಳು ಒಂದೆರಡಲ್ಲ

ಇಂದು ವಿಷ್ಣುವರ್ಧನ್ ಅವರ ಜನ್ಮದಿನ. ಅವರ ಸೂಪರ್ ಹಿಟ್ ಚಿತ್ರ ‘ಬಂಧನ’ದ ಬಿಡುಗಡೆಯ ಸಮಯದಲ್ಲಿ ಎದುರಾದ ವಿವಾದಗಳು ಒಂದೆರಡಲ್ಲ. ಚಿತ್ರದ ಪ್ರದರ್ಶನವನ್ನು ತಡೆಯಲು ಹಲವು ಪ್ರಯತ್ನಗಳು ನಡೆದವು. ಆದರೆ ಚಿತ್ರ ಯಶಸ್ವಿಯಾಗಿ ಬಿಡುಗಡೆಯಾಯಿತು ಮತ್ತು ದೊಡ್ಡ ಯಶಸ್ಸು ಕಂಡಿತು. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಈ ಚಿತ್ರದ ಬಿಡುಗಡೆಗೆ ಸರ್ಕಾರದಿಂದಲೂ ಸಹಾಯ ದೊರೆಯಿತು.

ವಿಷ್ಣು ನಟನೆಯ ‘ಬಂಧನ’ ಸಿನಿಮಾ ತಡೆಯಲು ನಡೆದ ಪ್ರಯತ್ನಗಳು ಒಂದೆರಡಲ್ಲ
ಬಂಧನ
 ಶ್ರೀಲಕ್ಷ್ಮೀ ಎಚ್
| Edited By: |

Updated on:Sep 18, 2025 | 7:48 AM

Share

ವಿಷ್ಣುವರ್ಧನ್ (Vishnuvardhan) ಅವರಿಗೆ ಇಂದು (ಸೆಪ್ಟೆಂಬರ್ 17) ಜನ್ಮದಿನ. ಈ ವಿಶೇಷ ದಿನವನ್ನು ಫ್ಯಾನ್ಸ್ ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಈ ವೇಳೆ ಅವರ ಹಳೆಯ ಘಟನೆಗಳ ಬಗ್ಗೆ ನೆನಪಿಸಿಕೊಳ್ಳಲೇಬೇಕು. ವಿಷ್ಣು ನಟಿಸಿದ ಸೂಪರ್ ಹಿಟ್ ಚಿತ್ರಗಳಲ್ಲಿ ‘ಬಂಧನ’ ಕೂಡ ಒಂದು. ಈ ಸಿನಿಮಾನ ತಡೆಯಲು ಅನೇಕ ಪ್ರಯತ್ನಗಳು ನಡೆದವು. ಆದರೆ, ಯಾವುದು ಕೂಡ ಸಿನಿಮಾ ತಡೆಯಲು ಸಾಧ್ಯವಾಗಿಲ್ಲ. ವಿಷ್ಣು ಜನ್ಮದಿನದ (ಸೆಪ್ಟೆಂಬರ್ 18) ಪ್ರಯುಕ್ತ ಆ ಘಟನೆ ನೆನಪಿಸಿಕೊಳ್ಳೋಣ.

1984ರಲ್ಲಿ ಬಂಧನ ಸಿನಿಮಾ ರಿಲೀಸ್ ಆಯಿತು. ವಿಷ್ಣುವರ್ಧನ್ ಹಾಗೂ ಸುಹಾಸಿನಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡರು. ಜೈ ಜಗದೀಶ್ ಕೂಡ ಸಿನಿಮಾದ ಭಾಗ ಆಗಿದ್ದರು. ಈ ಸಿನಿಮಾ ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡಿದ್ದರು. ಈ ಸಿನಿಮಾ ಭಗ್ನ ಪ್ರೇಮದ ಕಥೆ ಹೊಂದಿತ್ತು. ಆಗಿನ ಕಾಲಕ್ಕೆ ಚಿತ್ರ ಸೂಪರ್ ಹಿಟ್ ಆಯಿತು. ಆದರೆ, ಇದನ್ನು ತಡೆಯೋ ಪ್ರಯತ್ನಗಳು ನಡೆದವು.

ಈ ಬಗ್ಗೆ ರಾಜೇಂದ್ರ ಸಿಂಗ್ ಬಾಬು ಈ ಮೊದಲು ಮಾತನಾಡಿದ್ದರು. ‘ನನ್ನ ಬಂಧನ ಸಿನಿಮಾ ರಿಲೀಸ್ ಆಗಿತ್ತು. ಹೆಂಗಸರು ಸಿನಿಮಾ ನೋಡಲು ಬರಬಾರದು ಎಂದು ಥಿಯೇಟರ್​ ಒಳಗೆ ಖಾರದ ಪುಡಿ ಎರಚಲು ಆರಂಭಿಸಿದರು. ಟಿಕೆಟ್ ಕೌಂಟರ್ ಬಳಿ ಬ್ಲೇಡ್​ ಹೊಡೆಯೋ ಕೆಲಸ ಆಗಿತ್ತು. ಈ ವೇಳೆ ಸಿಎಂ ಆಗಿದ್ದ ರಾಮಕೃಷ್ಣ ಹೆಗಡೆ ಅವರು ಸಹಾಯ ಮಾಡಿದರು. ಪೊಲೀಸರ ಬಳಿ ರಕ್ಷಣೆಗೆ ಸೂಚಿಸಿದರು’ ಎಂದು ರಾಜೇಂದ್ರ ಸಿಂಗ್ ಬಾಬು ಹೇಳಿದ್ದರು.

ಇದನ್ನೂ ಓದಿ
Image
ಇನ್ನೂ ಕಡಿಮೆ ಆಗಿಲ್ಲ ಮಾಲಾಶ್ರೀ ಖದರ್; ಈ ವಿಡಿಯೋನೇ ಸಾಕ್ಷಿ
Image
ವಿಷ್ಣು, ಉಪ್ಪಿ, ಶ್ರುತಿ ಜನ್ಮದಿನ; ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ
Image
ಊಟದ ವಿಚಾರದಲ್ಲಿ ಸಖತ್ ಮೂಡಿ ಆಗಿದ್ದ ವಿಷ್ಣುವರ್ಧನ್
Image
ವಿಷ್ಣುವರ್ಧನ್-ರಜನಿಕಾಂತ್  ಒಟ್ಟಾಗಿ ನಟಿಸಿದ್ದ ಸಿನಿಮಾದ ದೃಶ್ಯ ನೆನಪಿದೆಯೇ?

ಇದನ್ನೂ ಓದಿ: ಆತ್ಮೀಯ ಗೆಳೆಯರಾಗಿದ್ದ ವಿಷ್ಣುವರ್ಧನ್-ರಾಜೇಂದ್ರ ಸಿಂಗ್ ಬಾಬು ದೂರಾಗಿದ್ದೇಕೆ?

ಪೊಲೀಸರು ಕಠಿಣ ಕ್ರಮ ಕೈಗೊಂಡರು. 25 ಜನರನ್ನು ಬಂಧಿಸುವ ಕೆಲಸ ಕೂಡ ಆಯಿತು. ಮೈಸೂರಲ್ಲಿ ಕೆಲ ಕಿಡಿಗೇಡಿಗಳು ವಿಷ್ಣು ಕಟೌಟ್ ಸುಡೋ ಕೆಲಸ ಮಾಡಿದರು. ಆದರೆ, ಯಾವುದೇ ಪ್ರಯತ್ನಗಳು ಯಶಸ್ಸು ಕಾಣಲೇ ಇಲ್ಲ. ಸಿನಿಮಾನ ಯಾರೂ ನಿಲ್ಲಿಸೋಕೆ ಆಗಲಿಲ್ಲ. 25 ಸೆಂಟರ್​ಗಳಲ್ಲಿ 25 ವಾರ ಸಿನಿಮಾ ಪ್ರದರ್ಶನ ಕಂಡಿತು. ಇದು ಸಿನಿಮಾ ಮಾಡಿದ ಸಾಧನೆ. 25 ವಾರ ಆ ಕಟೌಟ್ ಹಾಗೆಯೇ ಇತ್ತು. ವಿಷ್ಣು ಬರ್ತ್​ಡೇನ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು. ಆದರೆ, ಇದಕ್ಕೆ ಹಲವು ಅಡೆತಡೆಗಳು ಎದುರಾಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:46 am, Thu, 18 September 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು