AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣು ನಟನೆಯ ‘ಬಂಧನ’ ಸಿನಿಮಾ ತಡೆಯಲು ನಡೆದ ಪ್ರಯತ್ನಗಳು ಒಂದೆರಡಲ್ಲ

ಇಂದು ವಿಷ್ಣುವರ್ಧನ್ ಅವರ ಜನ್ಮದಿನ. ಅವರ ಸೂಪರ್ ಹಿಟ್ ಚಿತ್ರ ‘ಬಂಧನ’ದ ಬಿಡುಗಡೆಯ ಸಮಯದಲ್ಲಿ ಎದುರಾದ ವಿವಾದಗಳು ಒಂದೆರಡಲ್ಲ. ಚಿತ್ರದ ಪ್ರದರ್ಶನವನ್ನು ತಡೆಯಲು ಹಲವು ಪ್ರಯತ್ನಗಳು ನಡೆದವು. ಆದರೆ ಚಿತ್ರ ಯಶಸ್ವಿಯಾಗಿ ಬಿಡುಗಡೆಯಾಯಿತು ಮತ್ತು ದೊಡ್ಡ ಯಶಸ್ಸು ಕಂಡಿತು. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಈ ಚಿತ್ರದ ಬಿಡುಗಡೆಗೆ ಸರ್ಕಾರದಿಂದಲೂ ಸಹಾಯ ದೊರೆಯಿತು.

ವಿಷ್ಣು ನಟನೆಯ ‘ಬಂಧನ’ ಸಿನಿಮಾ ತಡೆಯಲು ನಡೆದ ಪ್ರಯತ್ನಗಳು ಒಂದೆರಡಲ್ಲ
ಬಂಧನ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Sep 18, 2025 | 7:48 AM

Share

ವಿಷ್ಣುವರ್ಧನ್ (Vishnuvardhan) ಅವರಿಗೆ ಇಂದು (ಸೆಪ್ಟೆಂಬರ್ 17) ಜನ್ಮದಿನ. ಈ ವಿಶೇಷ ದಿನವನ್ನು ಫ್ಯಾನ್ಸ್ ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಈ ವೇಳೆ ಅವರ ಹಳೆಯ ಘಟನೆಗಳ ಬಗ್ಗೆ ನೆನಪಿಸಿಕೊಳ್ಳಲೇಬೇಕು. ವಿಷ್ಣು ನಟಿಸಿದ ಸೂಪರ್ ಹಿಟ್ ಚಿತ್ರಗಳಲ್ಲಿ ‘ಬಂಧನ’ ಕೂಡ ಒಂದು. ಈ ಸಿನಿಮಾನ ತಡೆಯಲು ಅನೇಕ ಪ್ರಯತ್ನಗಳು ನಡೆದವು. ಆದರೆ, ಯಾವುದು ಕೂಡ ಸಿನಿಮಾ ತಡೆಯಲು ಸಾಧ್ಯವಾಗಿಲ್ಲ. ವಿಷ್ಣು ಜನ್ಮದಿನದ (ಸೆಪ್ಟೆಂಬರ್ 18) ಪ್ರಯುಕ್ತ ಆ ಘಟನೆ ನೆನಪಿಸಿಕೊಳ್ಳೋಣ.

1984ರಲ್ಲಿ ಬಂಧನ ಸಿನಿಮಾ ರಿಲೀಸ್ ಆಯಿತು. ವಿಷ್ಣುವರ್ಧನ್ ಹಾಗೂ ಸುಹಾಸಿನಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡರು. ಜೈ ಜಗದೀಶ್ ಕೂಡ ಸಿನಿಮಾದ ಭಾಗ ಆಗಿದ್ದರು. ಈ ಸಿನಿಮಾ ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡಿದ್ದರು. ಈ ಸಿನಿಮಾ ಭಗ್ನ ಪ್ರೇಮದ ಕಥೆ ಹೊಂದಿತ್ತು. ಆಗಿನ ಕಾಲಕ್ಕೆ ಚಿತ್ರ ಸೂಪರ್ ಹಿಟ್ ಆಯಿತು. ಆದರೆ, ಇದನ್ನು ತಡೆಯೋ ಪ್ರಯತ್ನಗಳು ನಡೆದವು.

ಈ ಬಗ್ಗೆ ರಾಜೇಂದ್ರ ಸಿಂಗ್ ಬಾಬು ಈ ಮೊದಲು ಮಾತನಾಡಿದ್ದರು. ‘ನನ್ನ ಬಂಧನ ಸಿನಿಮಾ ರಿಲೀಸ್ ಆಗಿತ್ತು. ಹೆಂಗಸರು ಸಿನಿಮಾ ನೋಡಲು ಬರಬಾರದು ಎಂದು ಥಿಯೇಟರ್​ ಒಳಗೆ ಖಾರದ ಪುಡಿ ಎರಚಲು ಆರಂಭಿಸಿದರು. ಟಿಕೆಟ್ ಕೌಂಟರ್ ಬಳಿ ಬ್ಲೇಡ್​ ಹೊಡೆಯೋ ಕೆಲಸ ಆಗಿತ್ತು. ಈ ವೇಳೆ ಸಿಎಂ ಆಗಿದ್ದ ರಾಮಕೃಷ್ಣ ಹೆಗಡೆ ಅವರು ಸಹಾಯ ಮಾಡಿದರು. ಪೊಲೀಸರ ಬಳಿ ರಕ್ಷಣೆಗೆ ಸೂಚಿಸಿದರು’ ಎಂದು ರಾಜೇಂದ್ರ ಸಿಂಗ್ ಬಾಬು ಹೇಳಿದ್ದರು.

ಇದನ್ನೂ ಓದಿ
Image
ಇನ್ನೂ ಕಡಿಮೆ ಆಗಿಲ್ಲ ಮಾಲಾಶ್ರೀ ಖದರ್; ಈ ವಿಡಿಯೋನೇ ಸಾಕ್ಷಿ
Image
ವಿಷ್ಣು, ಉಪ್ಪಿ, ಶ್ರುತಿ ಜನ್ಮದಿನ; ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ
Image
ಊಟದ ವಿಚಾರದಲ್ಲಿ ಸಖತ್ ಮೂಡಿ ಆಗಿದ್ದ ವಿಷ್ಣುವರ್ಧನ್
Image
ವಿಷ್ಣುವರ್ಧನ್-ರಜನಿಕಾಂತ್  ಒಟ್ಟಾಗಿ ನಟಿಸಿದ್ದ ಸಿನಿಮಾದ ದೃಶ್ಯ ನೆನಪಿದೆಯೇ?

ಇದನ್ನೂ ಓದಿ: ಆತ್ಮೀಯ ಗೆಳೆಯರಾಗಿದ್ದ ವಿಷ್ಣುವರ್ಧನ್-ರಾಜೇಂದ್ರ ಸಿಂಗ್ ಬಾಬು ದೂರಾಗಿದ್ದೇಕೆ?

ಪೊಲೀಸರು ಕಠಿಣ ಕ್ರಮ ಕೈಗೊಂಡರು. 25 ಜನರನ್ನು ಬಂಧಿಸುವ ಕೆಲಸ ಕೂಡ ಆಯಿತು. ಮೈಸೂರಲ್ಲಿ ಕೆಲ ಕಿಡಿಗೇಡಿಗಳು ವಿಷ್ಣು ಕಟೌಟ್ ಸುಡೋ ಕೆಲಸ ಮಾಡಿದರು. ಆದರೆ, ಯಾವುದೇ ಪ್ರಯತ್ನಗಳು ಯಶಸ್ಸು ಕಾಣಲೇ ಇಲ್ಲ. ಸಿನಿಮಾನ ಯಾರೂ ನಿಲ್ಲಿಸೋಕೆ ಆಗಲಿಲ್ಲ. 25 ಸೆಂಟರ್​ಗಳಲ್ಲಿ 25 ವಾರ ಸಿನಿಮಾ ಪ್ರದರ್ಶನ ಕಂಡಿತು. ಇದು ಸಿನಿಮಾ ಮಾಡಿದ ಸಾಧನೆ. 25 ವಾರ ಆ ಕಟೌಟ್ ಹಾಗೆಯೇ ಇತ್ತು. ವಿಷ್ಣು ಬರ್ತ್​ಡೇನ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು. ಆದರೆ, ಇದಕ್ಕೆ ಹಲವು ಅಡೆತಡೆಗಳು ಎದುರಾಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:46 am, Thu, 18 September 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ