AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಇತಿಹಾಸದ ಬಗ್ಗೆ ವಿಷ್ಣುವರ್ಧನ್ ಅದೆಷ್ಟು ಸುಂದರವಾಗಿ ಮಾತನಾಡಿದ್ದರು ನೋಡಿ; ಇಲ್ಲಿದೆ ವಿಡಿಯೋ

ಕಮಲ್ ಹಾಸನ್ ಅವರ ಹೇಳಿಕೆಯಿಂದ ಕನ್ನಡದ ಹುಟ್ಟು ಮತ್ತು ಅದರ ಇತಿಹಾಸದ ಬಗ್ಗೆ ಚರ್ಚೆ ನಡೆದಿದೆ. ವಿಷ್ಣುವರ್ಧನ್ ಅವರ ಒಂದು ಹಳೆಯ ಸಂದರ್ಶನದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ, ಅವರು ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ತಮ್ಮ ಆಳವಾದ ಅಭಿಮಾನವನ್ನು ವ್ಯಕ್ತಪಡಿಸಿದ್ದರು. ಬೆಂಗಳೂರಿನಲ್ಲಿ ಕನ್ನಡಿಗರ ಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

ಕನ್ನಡದ ಇತಿಹಾಸದ ಬಗ್ಗೆ ವಿಷ್ಣುವರ್ಧನ್ ಅದೆಷ್ಟು ಸುಂದರವಾಗಿ ಮಾತನಾಡಿದ್ದರು ನೋಡಿ; ಇಲ್ಲಿದೆ ವಿಡಿಯೋ
ವಿಷ್ಣುವರ್ಧನ್
ರಾಜೇಶ್ ದುಗ್ಗುಮನೆ
|

Updated on: Jun 02, 2025 | 11:45 AM

Share

ಸದ್ಯ ಕನ್ನಡದ ಹುಟ್ಟಿನ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದಕ್ಕೆ ಕಾರಣ ಆಗಿದ್ದು ಕಾಲಿವುಡ್ ನಟ ಕಮಲ್ ಹಾಸನ್ (Kamal Haasan). ‘ತಮಿಳಿನಿಂದಲೇ ಕನ್ನಡ ಹುಟ್ಟಿದ್ದು’ ಎಂದು ಹೇಳುವ ಮೂಲಕ ಸಾಕಷ್ಟು ಚರ್ಚೆ ಹುಟ್ಟುಹಾಕಿದರು. ಈ ವಿಚಾರದಲ್ಲಿ ಚರ್ಚೆಗಳು ನಡೆಯುತ್ತಿವೆ. ಹೀಗಿರುವಾಗಲೇ ವಿಷ್ಣುವರ್ಧನ್ ಸಿನಿಮಾದ ಕ್ಲಿಪ್ ಒಂದು ವೈರಲ್ ಆಗಿದೆ. ಈ ಕ್ಲಿಪ್​ನಲ್ಲಿ ಅವರು ಕನ್ನಡದ ಇತಿಹಾಸದ ಬಗ್ಗೆ ಮಾತನಾಡಿದ್ದರು.

ವಿಷ್ಣುವರ್ಧನ್ ಅವರು ಕನ್ನಡದ ಪರ ಸಾಕಷ್ಟು ಬಾರಿ ಧ್ವನಿ ಎತ್ತಿದ್ದಾರೆ. ಕನ್ನಡದ ನಾಡು-ನುಡಿ ಎಂಬುದು ಬಂದಾಗ ಅವರು ಕನ್ನಡದ ಪರವಾಗಿ ನಿಂತಿದ್ದಾರೆ. ಈ ಸಂದರ್ಭದ ವಿಡಿಯೋಗಳು ಸಾಕಷ್ಟು ಬಾರಿ ವೈರಲ್ ಆಗಿವೆ. ಅದೇ ರೀತಿ ಸಿನಿಮಾಗಳಲ್ಲೂ ವಿಷ್ಣುವರ್ಧನ್ ಕನ್ನಡ ಪರ ಧ್ವನಿ ಎತ್ತಿದ್ದರು. ಆ ವಿಡಿಯೋ ಈಗ ವೈರಲ್ ಆಗಿದೆ. ಸದ್ಯದ ಸಂದರ್ಭಕ್ಕೆ ಈ ವಿಡಿಯೋ ಸರಿ ಹೊಂದುವ ರೀತಿಯಲ್ಲಿದೆ.

1997ರಲ್ಲಿ ರಿಲೀಸ್ ಆದ ‘ಎಲ್ಲರಂತಲ್ಲ ನನ್ನ ಗಂಡ’ ಸಿನಿಮಾದಲ್ಲಿ ವಿಷ್ಣುವರ್ಧನ್, ಪ್ರೇಮಾ, ಉಮಾಶ್ರೀ, ತಾರಾ ಮೊದಲಾದವರು ನಟಿಸಿದ್ದರು. ಈ ಚಿತ್ರಕ್ಕೆ ಎಸ್. ಉಮೇಶ್ ನಿರ್ದೇಶನ ಇತ್ತು. ಸಂದರ್ಶನಕ್ಕಾಗಿ ಬರೋ ವಿಷ್ಣುವರ್ಧನ್​ಗೆ ಕನ್ನಡದ ಬಗ್ಗೆ ಹಾಗೂ ಬೆಂಗಳೂರಿನ ಬಗ್ಗೆ, ಕರ್ನಾಟಕದ ಇತಿಹಾಸದ ಬಗ್ಗೆ ವಿವಿಧ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಈ ಪ್ರಶ್ನೆಗೆ ಅವರು ಉತ್ತರಿಸಿದ ರೀತಿ ಈಗಿನ ಜನರೇಶನ್ ಮಕ್ಕಳಿಗೆ ಒಂದೊಳ್ಳೆಯ ವಿಕಿಪೀಡಿಯಾ ರೀತಿಯಲ್ಲಿ  ಕಾಣುತ್ತದೆ.

ಇದನ್ನೂ ಓದಿ
Image
ತುಲಾಭಾರ ಮಾಡಿಸಿದ ನಟಿ ಶ್ರೀಲೀಲಾ; ಕಾರಣ ಏನು?
Image
‘ಕರ್ಮ ಸರಿ ಮಾಡುತ್ತದೆ’; ಸಮಂತಾ ಜೊತೆ ಡೇಟ್ ಮಾಡ್ತಿರೋ ಪತಿಗೆ ಪತ್ನಿ ಟಾಂಗ್
Image
‘ಥಗ್ ಲೈಫ್’ ಚಿತ್ರಕ್ಕಿಂದು ನಿರ್ಣಾಯಕ ದಿನ; ಸಿನಿಮಾ ಪ್ರದರ್ಶನ ಅನುಮಾನ
Image
ರಶ್ಮಿಕಾಗೆ ನ್ಯಾಷನಲ್ ಕ್ರಶ್ ಎಂದು ಕರೆದ ಅಭಿಮಾನಿ; ನಟಿಯ ಪ್ರತಿಕ್ರಿಯೆ ಏನು?

ಆಗಿನ ಕಾಲದಲ್ಲೇ ಬೆಂಗಳೂರಿಗೆ ಪರಭಾಷಿಗರು ಬಂದು ನೆಲೆಸುತ್ತಿದ್ದರು. ಆ ಸಮಸ್ಯೆ ಈಗ ದೊಡ್ಡದಾಗಿದೆ. ಈ ಬಗ್ಗೆ ವಿಷ್ಣುವರ್ಧನ್ ಆಗಿನ ಕಾಲದಲ್ಲೇ ಎಚ್ಚರಿಸಿದ್ದರು. ಬ್ರೀಟಿಷರ ವಶದ ಬಗ್ಗೆ ಮಾತನಾಡುತ್ತಾ, ‘ಬೆಂಗಳೂರನ್ನು ಹಲವು ಭಾಷೆಯವರು ವಶ ಮಾಡಿಕೊಂಡಿದ್ದಾರೆ. ಮುಂದಿನ ವರ್ಷಗಳಲ್ಲಿ ಬೆಂಗಳೂರಲ್ಲಿ ಕನ್ನಡಿಗರು ಎಲ್ಲಿದ್ದಾರೆ ಎಂಬುದನ್ನು ದುರ್ಬೀನ್ ಹಾಕಿ ಹುಡುಕಬೇಕಾಗುತ್ತದೆ’ ಎಂದಿದ್ದರು. ಅದು ಈಗ ನಿಜ ಎನಿಸುತ್ತಿದೆ.

ಇದನ್ನೂ ಓದಿ: ತಮಿಳು ಕನ್ನಡದ ತಾಯಿ ಭಾಷೆ ಅಲ್ಲ, ಸೋದರ ಭಾಷೆ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ

ವಿಷ್ಣುವರ್ಧನ್, ರಾಜ್​ಕುಮಾರ್ ಅವರ ಸಿನಿಮಾಗಳಲ್ಲಿ ಈ ರೀತಿಯ ಅನೇಕ ಉದಾಹರಣೆಗಳು ಸಿಗುತ್ತವೆ. ಆದರೆ, ಇತ್ತೀಚಿನ ಸಿನಿಮಾಗಳಲ್ಲಿ ಇದು ಕಡಿಮೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!