‘ಅರ್ಬನ್ ನಕ್ಸಲ್ಸ್​ಗೆ ನಿದ್ದೆ ಬರುತ್ತಿಲ್ಲ’; ‘ಬೊಗಳುತ್ತಾರೆ, ಕಚ್ಚಲ್ಲ’ ಎಂಬ ಪ್ರಕಾಶ್​ ರಾಜ್ ಹೇಳಿಕೆಗೆ ತಿರುಗೇಟು ಕೊಟ್ಟ ವಿವೇಕ್ ಅಗ್ನಿಹೋತ್ರಿ

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರವನ್ನು ಪ್ರಕಾಶ್ ರಾಜ್ ಅವರು ಟೀಕೆ ಮಾಡಿದ್ದರು. ಇದಕ್ಕೆ ವಿವೇಕ್ ಅಗ್ನಿಹೋತ್ರಿ ತಿರುಗೇಟು ನೀಡಿದ್ದಾರೆ.

‘ಅರ್ಬನ್ ನಕ್ಸಲ್ಸ್​ಗೆ ನಿದ್ದೆ ಬರುತ್ತಿಲ್ಲ’; ‘ಬೊಗಳುತ್ತಾರೆ, ಕಚ್ಚಲ್ಲ’ ಎಂಬ ಪ್ರಕಾಶ್​ ರಾಜ್ ಹೇಳಿಕೆಗೆ ತಿರುಗೇಟು ಕೊಟ್ಟ ವಿವೇಕ್ ಅಗ್ನಿಹೋತ್ರಿ
ವಿವೇಕ್ ಅಗ್ನಿಹೋತ್ರಿ-ಪ್ರಕಾಶ್ ರಾಜ್
Follow us
| Updated By: ರಾಜೇಶ್ ದುಗ್ಗುಮನೆ

Updated on:Feb 09, 2023 | 2:22 PM

ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ರಿಲೀಸ್ ಆಗಿ ವರ್ಷ ಕಳೆಯುತ್ತಾ ಬಂದರೂ ಈ ಚಿತ್ರದ ಬಗೆಗಿನ ಚರ್ಚೆ ನಿಂತಿಲ್ಲ. ಈಗಲೂ ಅನೇಕರು ಈ ಸಿನಿಮಾ ಬಗ್ಗೆ ಚರ್ಚೆ ಮಾಡುತ್ತಲೇ ಇದ್ದಾರೆ. ಒಂದು ವರ್ಗದ ಜನರು ಚಿತ್ರವನ್ನು ತೆಗಳಿದರೆ, ಇನ್ನೂ ಕೆಲವರು ಸಿನಿಮಾದ ಬಗ್ಗೆ ಪಾಸಿಟಿವ್ ಮಾತುಗಳನ್ನು ಆಡುತ್ತಿದ್ದಾರೆ. ಇತ್ತೀಚೆಗೆ ಮಾತನಾಡಿದ್ದ ಪ್ರಕಾಶ್ ರಾಜ್ (Prakash Raj) ಅವರು ಚಿತ್ರದ ಬಗ್ಗೆ ಟೀಕೆ ಮಾಡಿದ್ದರು. ಇದಕ್ಕೆ ವಿವೇಕ್ ಅಗ್ನಿಹೋತ್ರಿ ತಿರುಗೇಟು ನೀಡಿದ್ದಾರೆ.

ಪ್ರಕಾಶ್ ರಾಜ್ ಹೇಳಿದ್ದೇನು?

‘ಪಠಾಣ್’ ಸಿನಿಮಾ ಯಶಸ್ಸಿನ ಬಗ್ಗೆ ಮಾತನಾಡಿದ್ದ ಪ್ರಕಾಶ್ ರಾಜ್, ‘ದಿ ಕಾಶ್ಮೀರ್’ ಚಿತ್ರವನ್ನು ಟೀಕಿಸಿದ್ದರು. ‘ಅವರು ಪಠಾಣ್ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಅಂದುಕೊಂಡಿದ್ದರು. ಆದರೆ, ಈ ಚಿತ್ರ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮೂರ್ಖರು, ಮತಾಂಧರು ಪಠಾಣ್​ನ ಬ್ಯಾನ್ ಮಾಡಲು ಬಯಸಿದ್ದರು. ಮೋದಿ ಸಿನಿಮಾಗೆ 30 ಕೋಟಿ ರೂಪಾಯಿ ಕಲೆಕ್ಷನ್ ಮಾಡಿಸಲು ಅವರಿಂದ ಸಾಧ್ಯವಾಗಿಲ್ಲ. ಅವರು ಬೊಗಳುತ್ತಾರೆ, ಕಚ್ಚುವುದಿಲ್ಲ’ ಎಂದಿದ್ದರು.

‘ಕಾಶ್ಮೀರ್ ಫೈಲ್ಸ್​ ನಾನ್ಸೆನ್ಸ್ ಸಿನಿಮಾ. ಅದನ್ನು ನಿರ್ಮಾಣ ಮಾಡಿದ್ದು ಯಾರು ಅನ್ನೋದು ನಿಮಗೆ ಗೊತ್ತಿದೆ. ಅಂತಾರಾಷ್ಟ್ರಿಯ ಜ್ಯೂರಿಗಳು ಚಿತ್ರವನ್ನು ತೆಗಳಿದರು. ಭಾಸ್ಕರ್ ಪ್ರಶಸ್ತಿಯನ್ನೂ ಪಡೆಯದ ಈ ಚಿತ್ರದ ನಿರ್ದೇಶಕ ನಮ್ಮ ಚಿತ್ರಕ್ಕೆ ಏಕೆ ಆಸ್ಕರ್ ಸಿಗುತ್ತಿಲ್ಲ ಎಂದು ಕೇಳುತ್ತಿದ್ದಾರೆ. ಇಲ್ಲಿ ನೀವು ಪ್ರೊಪೊಗಾಂಡ ಚಿತ್ರಗಳನ್ನು ಮಾಡಬಹುದು. ಈ ರೀತಿಯ ಸಿನಿಮಾಗಳನ್ನು ನಿರ್ಮಾಣ ಮಾಡಲು ಅವರು 2000 ಸಾವಿರ ಕೋಟಿ ಹೂಡಿಕೆ ಮಾಡಿದ್ದಾರೆ. ಆದರೆ, ಎಲ್ಲಾ ಬಾರಿಯೂ ಜನ್ನರು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ’ ಎಂದಿದ್ದರು ಅವರು.

ತಿರುಗೇಟು ನೀಡಿದ ವಿವೇಕ್ ಆಗ್ನಿಹೋತ್ರಿ

ಈ ವಿಡಿಯೋ ಹಂಚಿಕೊಂಡಿರುವ ವಿವೇಕ್ ಅಗ್ನಿಹೋತ್ರಿ ಅವರು ಪ್ರಕಾಶ್ ರಾಜ್ ವಿರುದ್ಧ ಕಿಡಿಕಾರಿದ್ದಾರೆ. ‘ಸಾಮಾನ್ಯ ಜನರ ಸಿನಿಮಾ ದಿ ಕಾಶ್ಮೀರ್ ಫೈಲ್ಸ್​ ಅರ್ಬನ್ ನಕ್ಸಲ್​ಗಳ ನಿದ್ದೆ ಕದ್ದಿದೆ. ಅವರ ಪೈಕಿ ಓರ್ವ ವ್ಯಕ್ತಿ ಒಂದು ವರ್ಷದ ಬಳಿಕವೂ ತೊಂದರೆಗೆ ಒಳಗಾಗುತ್ತಿದ್ದಾರೆ. ವೀಕ್ಷಕರನ್ನು ಅವರು ಬೊಗಳುವ ನಾಯಿ ಎಂದು ಕರೆಯುತ್ತಾರೆ. ಮಿಸ್ಟರ್​ ಅಂಧಕಾರ್ ರಾಜ್, ಭಾಸ್ಕರ್‌ ಯಾವಾಗಲೂ ನಿಮ್ಮದೇ ಆಗಿರುವಾಗ ಅದನ್ನು ನಾನು ಹೇಗೆ ಪಡೆಯಲಿ’ ಎಂದು ವಿವೇಕ್ ಅಗ್ನಿಹೋತ್ರಿ ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:22 pm, Thu, 9 February 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ