AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದೊಂದು ಅದ್ಭುತ ಅನುಭವ’; ‘ಕಾಂತಾರ’ ನೋಡಿದ ಬಳಿಕ ವಿಶೇಷ ಮನವಿ ಮಾಡಿದ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ

ವಿವೇಕ್​ ಅಗ್ನಿಹೋತ್ರಿ ‘ಕಾಂತಾರ’ ಚಿತ್ರವನ್ನು ನೋಡಿ ಹೊಗಳಿದ್ದು, ರಿಷಬ್ ಶೆಟ್ಟಿಯ ಬೆನ್ನು ತಟ್ಟಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ.

‘ಇದೊಂದು ಅದ್ಭುತ ಅನುಭವ’; ‘ಕಾಂತಾರ’ ನೋಡಿದ ಬಳಿಕ ವಿಶೇಷ ಮನವಿ ಮಾಡಿದ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ
ರಿಷಬ್-ವಿವೇಕ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Oct 23, 2022 | 3:26 PM

Share

ರಿಷಬ್ ಶೆಟ್ಟಿ(Rishab Shetty)  ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಚಿತ್ರವನ್ನು ನೋಡಿ ಬಾಲಿವುಡ್ ಮಂದಿ ಕೂಡ ಕೊಂಡಾಡುತ್ತಿದ್ದಾರೆ. ಈ ಕಾರಣಕ್ಕೆ ಸಿನಿಮಾದ ಕ್ರೇಜ್ ಬಾಲಿವುಡ್ ಬೆಲ್ಟ್​ನಲ್ಲಿ ಹೆಚ್ಚುತ್ತಲೇ ಇದೆ. ಅನೇಕರು ಸಿನಿಮಾ ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಹಲವರು ಈ ಚಿತ್ರದ ಬಗ್ಗೆ ಪಾಸಿಟಿವ್ ಮಾತುಗಳನ್ನು ಆಡಿದ್ದಾರೆ. ಕಂಗನಾ ರಣಾವತ್ ಸೇರಿ ಅನೇಕರು ಈ ಚಿತ್ರಕ್ಕೆ ಭೇಷ್ ಎಂದಿದ್ದಾರೆ. ಈ ಬಾರಿ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಸರದಿ. ಅವರು ಈ ಚಿತ್ರವನ್ನು ನೋಡಿ ಥ್ರಿಲ್ ಆಗಿದ್ದಾರೆ. ಅವರು ತಮ್ಮ ವಿಮರ್ಶೆಯನ್ನು ತಿಳಿಸಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಈ ವರ್ಷ ತೆರೆಗೆ ಬಂತು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಯಿತು. ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು ವಿವೇಕ್ ಅಗ್ನಿಹೋತ್ರಿ. 90ರ ದಶಕದಲ್ಲಿ ಕಾಶ್ಮೀರಿ ಪಂಡಿತರ ಕಥೆಯನ್ನು ಆಧರಿಸಿ ಈ ಸಿನಿಮಾ ಸಿದ್ಧಗೊಂಡಿದೆ. ಈ ಚಿತ್ರದಿಂದ ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಅವರು ‘ಕಾಂತಾರ’ ಚಿತ್ರವನ್ನು ನೋಡಿ ಹೊಗಳಿದ್ದು, ರಿಷಬ್ ಶೆಟ್ಟಿಯ ಬೆನ್ನು ತಟ್ಟಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ
Image
Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?
Image
Rishab Shetty: ಒಂದೇ ದಿನಕ್ಕೆ 15 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಪರಭಾಷೆಯಲ್ಲಿ ಭರ್ಜರಿ ಕಮಾಯಿ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Rishab Shetty: ರಿಷಬ್​ ಶೆಟ್ಟಿ ಕಾಲಿಗೆ ಬಿದ್ದ ಖ್ಯಾತ ಯೂಟ್ಯೂಬರ್​; ಹಿಂದಿ ಪ್ರೇಕ್ಷಕರಲ್ಲಿ ಹೆಚ್ಚಿತು ‘ಕಾಂತಾರ’ ಸೆನ್ಸೇಷನ್​

‘ನಾನು ಕಾಂತಾರ ಸಿನಿಮಾ ನೋಡಿ ಬಂದೆ. ಇದೊಂದು ಅದ್ಭುತ ಅನುಭವ. ಈ ರೀತಿಯ ಚಿತ್ರವನ್ನು ನೀವು ನೋಡಿರುವುದಿಲ್ಲ. ನಾನಂತೂ ಈ ರೀತಿಯ ಸಿನಿಮಾವನ್ನು ನೋಡಿರಲಿಲ್ಲ. ರಿಷಬ್ ಶೆಟ್ಟಿಗೆ ಹ್ಯಾಟ್ಸ್ ಆಫ್.  ರಿಷಬ್ ನೀವು ಅದ್ಭುತ ಕೆಲಸ ಮಾಡಿದ್ದೀರಿ. ನಾನು ನಿಮಗೆ ಕರೆ ಮಾಡಿ ಮಾತನಾಡುತ್ತೇನೆ. ನನ್ನ ಅನುಭವವನ್ನು ಹಂಚಿಕೊಳ್ಳದೇ ಇರಲು ಸಾಧ್ಯವಾಗಲಿಲ್ಲ. ಕಲೆ, ಜಾನಪದ ವಿಚಾರಗಳು ಸಿನಿಮಾದಲ್ಲಿ ಅಡಗಿದೆ. ಸಿನಿಮಾದ ಕ್ಲೈಮ್ಯಾಕ್ಸ್ ಅದ್ಭುತವಾಗಿದೆ. ನಿಮ್ಮ ಬಳಿ ಇರುವುದು ಅದೆಂಥಹ ಎನರ್ಜಿ. ನಾನು ಈ ವರೆಗೆ ನೋಡಿಲ್ಲ. ರಿಷಬ್ ಶೆಟ್ಟಿ ಮಾಡಿದ ಮಾಸ್ಟರ್​ಪೀಸ್. ಸಿನಿಮಾದಲ್ಲಿ ಎಲ್ಲವೂ ಚೆನ್ನಾಗಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Kantara: ಕುಟುಂಬ ಸಮೇತ ‘ಕಾಂತಾರ’ ನೋಡಲಿರುವ ವೀರೇಂದ್ರ ಹೆಗ್ಗಡೆ; ಮುಖ್ಯವಾಗಲಿದೆ ಇವರ ಅಭಿಪ್ರಾಯ

ನಂತರ ಮತ್ತೊಂದು ಟ್ವೀಟ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್ ಹಾಗೂ ‘ಕಾಂತಾರ’ ಚಿತ್ರದ ಪೋಸ್ಟರ್​ ಅನ್ನು ಜೋಡಿಸಿ ಟ್ವೀಟ್ ಮಾಡಿದ್ದಾರೆ. ಈ ಫೋಟೋಗೆ ‘ಭಾರತ ಚಿತ್ರರಂಗಕ್ಕೆ ಬಂಗಾರದ ಯುಗ. ಕ್ರಾಂತಿ ಆಗುತ್ತಿದೆ. ಹಳೆಯ ಎಸ್ಟಾಬ್ಲಿಶ್​ಮೆಂಟ್​ಗಳು ನಾಶವಾಗುತ್ತಿದೆ. ಹೊಸ ಮಾದರಿಯ ಸಿನಿಮಾಗಳು ಬರುತ್ತಿವೆ. ಈ ಕ್ರಾಂತಿಯನ್ನು ಬೆಂಬಲಿಸಿ’ ಎಂದು ಅವರು ಕೋರಿದ್ದಾರೆ.

Published On - 2:17 pm, Sun, 23 October 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ