Vivek Agnihotri: ಹೆಡ್​ಲೈನ್​ ಓದಿ ಯಾಮಾರಿದ ವಿವೇಕ್​ ಅಗ್ನಿಹೋತ್ರಿ; ‘ಕಾಂತಾರ’ ಬಗ್ಗೆ ಅನುರಾಗ್​ ಕಶ್ಯಪ್ ಹೇಳಿದ್ದೇ ಬೇರೆ

| Updated By: Digi Tech Desk

Updated on: Dec 14, 2022 | 4:45 PM

Anurag Kashyap | Kantara Movie: ಅನೇಕ ವಿಚಾರಗಳ ಬಗ್ಗೆ ವಿವೇಕ್​ ಅಗ್ನಿಹೋತ್ರಿ ಅವರು ಅಭಿಪ್ರಾಯ ತಿಳಿಸುತ್ತಿದ್ದಾರೆ. ಇದರಿಂದ ಅವರು ಒಂದಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.

Vivek Agnihotri: ಹೆಡ್​ಲೈನ್​ ಓದಿ ಯಾಮಾರಿದ ವಿವೇಕ್​ ಅಗ್ನಿಹೋತ್ರಿ; ‘ಕಾಂತಾರ’ ಬಗ್ಗೆ ಅನುರಾಗ್​ ಕಶ್ಯಪ್ ಹೇಳಿದ್ದೇ ಬೇರೆ
ವಿವೇಕ್ ಅಗ್ನಿಹೋತ್ರಿ, ಕಾಂತಾರ ಸಿನಿಮಾ, ಅನುರಾಗ್ ಕಶ್ಯಪ್
Follow us on

ಕನ್ನಡದ ‘ಕಾಂತಾರ’ ಸಿನಿಮಾ (Kantara Movie) ಬಗ್ಗೆ ಎಲ್ಲೆಲ್ಲೂ ಚರ್ಚೆ ಆಗುತ್ತಿದೆ. ಈ ಚಿತ್ರವನ್ನು ಅನೇಕ ಸೆಲೆಬ್ರಿಟಿಗಳು ಕೊಂಡಾಡಿದ್ದಾರೆ. ಎಲ್ಲ ಭಾಷೆಯ ಗಡಿಯನ್ನು ಮೀರಿ ಈ ಸಿನಿಮಾ ಯಶಸ್ವಿ ಆಗಿದ್ದಕ್ಕೆ ಕಾರಣ ಏನು ಎಂದು ಹಲವರು ವಿಶ್ಲೇಷಣೆ ಮಾಡುತ್ತಿದ್ದಾರೆ. ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರ ಕಸುಬಿನ ಬಗ್ಗೆ ದೇಶಾದ್ಯಂತ ಮೆಚ್ಚುಗೆ ಮಾತುಗಳು ಕೇಳಿಬಂದಿವೆ. ಇದೇ ವಿಚಾರದಲ್ಲಿ ಚರ್ಚೆ ಮಾಡುವಾಗ ಬಾಲಿವುಡ್​ನ ಖ್ಯಾತ ನಿರ್ದೇಶಕ ಅನುರಾಗ್​ ಕಶ್ಯಪ್​ (Anurag Kashyap) ಅವರು ತಮ್ಮ ಅಭಿಪ್ರಾಯ ಹಂಚಿಕೊಂಡರು. ಅವರ ಮಾತುಗಳಿಗೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಹಾಗೆ ವಿರೋಧಿಸಿದವರಲ್ಲಿ ವಿವೇಕ್​ ಅಗ್ನಿಹೋತ್ರಿ (Vivek Agnihotri) ಕೂಡ ಪ್ರಮುಖರು. ವಿಪರ್ಯಾಸ ಏನೆಂದರೆ, ಅನುರಾಗ್​ ಕಶ್ಯಪ್​ ಹೇಳಿದ್ದೇ ಒಂದು, ಪ್ರಕಟ ಆಗಿದ್ದು ಮತ್ತೊಂದು!

ಇತ್ತೀಚೆಗೆ ಮಾಧ್ಯಮವೊಂದರ ಸಂವಾದದಲ್ಲಿ ಅನುರಾಗ್​ ಕಶ್ಯಪ್​ ಭಾಗವಹಿಸಿದ್ದರು. ಆ ವೇಳೆ ಅವರು ದಕ್ಷಿಣ ಭಾರತದ ಸಿನಿಮಾಗಳ ಗೆಲುವಿನ ಬಗ್ಗೆ ಮಾತನಾಡಿದ್ದರು. ‘ಕಾಂತಾರ’ ಮತ್ತು ‘ಪುಷ್ಪ’ ಸಿನಿಮಾಗಳನ್ನು ಕಾಪಿ ಮಾಡಿದರೆ ಅಂಥವರು ಯಶಸ್ಸು ಕಾಣುವುದಿಲ್ಲ ಎಂದು ಅವರು ಹೇಳಿದ್ದರು. ಅವರ ಈ ಹೇಳಿಕೆಯನ್ನು ಮಾಧ್ಯಮವೊಂದರಲ್ಲಿ ತಿರುಚಿ ಹೆಡ್​ಲೈನ್​ ನೀಡಲಾಗಿದೆ. ‘ಕಾಂತಾರ ಹಾಗೂ ಪುಷ್ಪ ರೀತಿಯ ಸಿನಿಮಾಗಳು ಚಿತ್ರರಂಗವನ್ನು ನಾಶ ಮಾಡುತ್ತಿವೆ’ ಎಂಬ ತಲೆಬರಹ ನೀಡಿ ಸುದ್ದಿ ಪ್ರಕಟ ಮಾಡಲಾಗಿದೆ.

ಇದನ್ನೂ ಓದಿ
ಸೀಕ್ರೇಟ್​ ಆಗಿ ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ
‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ
‘ದಿ ಕಾಶ್ಮೀರ್​ ಫೈಲ್ಸ್​’ ಮಾತ್ರವಲ್ಲ, ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಇತರೆ ಚಿತ್ರಗಳ ಬಗ್ಗೆ ನಿಮಗೆ ಗೊತ್ತಾ?
ವಿವೇಕ್​ ಅಗ್ನಿಹೋತ್ರಿ ಹಿನ್ನೆಲೆ ಏನು? ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕರ ಬಗ್ಗೆ ಇಲ್ಲಿದೆ ಮಾಹಿತಿ..

ಇದನ್ನೂ ಓದಿ: Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ

ಕೇವಲ ಈ ಹೆಡ್​ಲೈನ್​ ಓದಿಕೊಂಡಿರುವ ವಿವೇಕ್ ಅಗ್ನಿಹೋತ್ರಿ ಅವರು ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ‘ಇದನ್ನು ನಾನು ಖಂಡಿತಾ ಒಪ್ಪುವುದಿಲ್ಲ. ನೀವು ಒಪ್ಪುತ್ತೀರಾ’ ಎಂಬ ಪ್ರಶ್ನೆಯೊಂದಿಗೆ ಅವರು ಟ್ವೀಟ್​ ಮಾಡಿದ್ದಾರೆ. ಪೂರ್ತಿ ಸುದ್ದಿ ಓದದೇ ಕೇವಲ ತಪ್ಪಾದ ತಲೆಬರಹವನ್ನು ಓದಿಕೊಂಡು ಟೀಕೆ ಮಾಡಿದ ವಿವೇಕ್ ಅಗ್ನಿಹೋತ್ರಿಗೆ ಜನರು ಬುದ್ಧಿಮಾತು ಹೇಳಿದ್ದಾರೆ.

ಇದನ್ನೂ ಓದಿ: Vivek Agnihotri: ‘ಸತ್ಯ ಅಲ್ಲ ಅಂತ ಸಾಬೀತಾದ್ರೆ ಸಿನಿಮಾ ಮಾಡೋದು ಬಿಟ್ಟು ಬಿಡ್ತೀನಿ’; ವಿವೇಕ್​ ಅಗ್ನಿಹೋತ್ರಿ ಸವಾಲು

ಅನೇಕ ವಿಚಾರಗಳ ಬಗ್ಗೆ ವಿವೇಕ್​ ಅಗ್ನಿಹೋತ್ರಿ ಅವರು ಅಭಿಪ್ರಾಯ ತಿಳಿಸುತ್ತಿದ್ದಾರೆ. ಇದರಿಂದ ಅವರು ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಚಿತ್ರದ ಹೊಸ ಹಾಡು ಇತ್ತೀಚೆಗೆ ರಿಲೀಸ್​ ಆಗಿದೆ. ಅದರ ಬಗ್ಗೆಯೂ ಪರೋಕ್ಷವಾಗಿ ಅವರು ವ್ಯಂಗ್ಯವಾಡಿದ್ದಾರೆ. ಈ ವಿಚಾರದ ಬಗ್ಗೆ ಪರ-ವಿರೋಧದ ಚರ್ಚೆ ಆಗುತ್ತಿದೆ.

‘ಮೊದಲೆಲ್ಲ ಇನ್​ಸ್ಟಾಗ್ರಾಮ್​ ರೀಲ್ಸ್​ ನೋಡಿದರೆ ಬಾಲಿವುಡ್​ ಹಾಡಿನ ಕೆಟ್ಟ ಕಾಪಿ ಎನಿಸುತ್ತಿತ್ತು. ಈಗ ಬಾಲಿವುಡ್​ ಹಾಡುಗಳೇ ಇನ್​ಸ್ಟಾಗ್ರಾಮ್​ ರೀಲ್ಸ್​ನ ಕೆಟ್ಟ ಕಾಪಿ ರೀತಿ ಕಾಣಿಸುತ್ತಿವೆ’ ಎಂದು ವಿವೇಕ್​ ಅಗ್ನಿಹೋತ್ರಿ ಟ್ವೀಟ್​ ಮಾಡಿದ್ದಾರೆ. ಇದು ‘ಬೇಷರಂ ರಂಗ್​..’ ಹಾಡಿನ ಕುರಿತಾಗಿಯೇ ಹೇಳಿರುವುದು ಎಂದು ನೆಟ್ಟಿಗರು ಊಹಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:20 pm, Wed, 14 December 22