AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಳದೇ ಕೇಳದೇ ಅಂಬರೀಶ್ ಮನೆಗೆ ಬಂದಿದ್ದ ನಟ ವಿವೇಕ್; ವಿಶೇಷ ಘಟನೆ ನೆನಪಿಸಿಕೊಂಡ ಸುಮಲತಾ

Actor Vivek Death: ಕಾಲಿವುಡ್ನ ಜನಪ್ರಿಯ ನಟ ವಿವೇಕ್ ಹೃದಯಾಘಾತದಿಂದ ಶನಿವಾರ (ಏ.17) ನಿಧನರಾದರು. ಅವರಿಗೆ ನಟಿ ಸುಮಲತಾ ಅಂಬರೀಷ್ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಒಂದು ಹಳೇ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.

ಹೇಳದೇ ಕೇಳದೇ ಅಂಬರೀಶ್ ಮನೆಗೆ ಬಂದಿದ್ದ ನಟ ವಿವೇಕ್; ವಿಶೇಷ ಘಟನೆ ನೆನಪಿಸಿಕೊಂಡ ಸುಮಲತಾ
ವಿವೇಕ್​ - ಸುಮಲತಾ ಅಂಬರೀಷ್​
ಮದನ್​ ಕುಮಾರ್​
| Edited By: |

Updated on: Apr 17, 2021 | 3:52 PM

Share

ಜನಪ್ರಿಯ ನಟ ವಿವೇಕ್​ ಅವರು ನಿಧನರಾದ ಸುದ್ದಿ ಕೇಳಿ ಇಡೀ ಚಿತ್ರರಂಗಕ್ಕೆ ಆಘಾತ ಆಗಿದೆ. ತಮಿಳು, ತೆಲುಗು ಮತ್ತು ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ವಿವೇಕ್​ ಅಗಲಿಕೆಗೆ ಕಂಬನಿ ಮಿಡಿಯುತ್ತಿದ್ದಾರೆ. ಸ್ಯಾಂಡಲ್​ವುಡ್​ನ ಹಲವು ನಟ-ನಟಿಯರಿಗೆ ವಿವೇಕ್​ ಜೊತೆ ಒಡನಾಟ ಇತ್ತು. ನಟಿ ಸುಮಲತಾ ಅಂಬರೀಷ್​ ಅವರು ಸಹ ವಿವೇಕ್​ ಬಗ್ಗೆ ಟ್ವೀಟ್​ ಮಾಡಿದ್ದಾರೆ. ಅವರ ವ್ಯಕ್ತಿತ್ವವನ್ನು ಬಣ್ಣಿಸಿದ್ದಾರೆ.

ಕನ್ನಡದ ದಿಗ್ಗಜ ನಟರಲ್ಲಿ ಒಬ್ಬರಾದ ರೆಬಲ್​ ಸ್ಟಾರ್​ ಅಂಬರೀಷ್​ ಬಗ್ಗೆ ವಿವೇಕ್​ ಅವರಿಗೆ ಅಪಾರ ಅಭಿಮಾನವಿತ್ತು. ತಮ್ಮ ಅಭಿಮಾನವನ್ನು ಅಭಿವ್ಯಕ್ತಿಸುವ ಸಲುವಾಗಿ ನೇರವಾಗಿ ಅಂಬಿ ಮನೆಗೆ ಬಂದಿದ್ದರಂತೆ ವಿವೇಕ್​! ಅದು ಕೂಡ ಹೇಳದೇ ಕೇಳದೇ. ಆ ಘಟನೆಯನ್ನು ಸುಮಲತಾ ಅವರು ಈಗ ಮೆಲುಕು ಹಾಕಿದ್ದಾರೆ. ಅಗಲಿದ ನಟನಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಟ್ವೀಟ್​ ಮಾಡಿರುವ ಸುಮಲತಾ ಆ ವಿಶೇಷ ಘಟನೆಯ ಬಗ್ಗೆ ಅಭಿಮಾನಿಗಳಿಗೆ ತಿಳಿಸಿದ್ದಾರೆ.

‘ಒಂದು ದಿನ ವಿವೇಕ್​ ಅವರು ಹೇಳದೇ ಕೇಳದೇ ನಮ್ಮ ಮನೆಗೆ ಬಂದಿದ್ದು ಈಗ ನೆನಪಾಗುತ್ತಿದೆ. ಅಂಬರೀಷ್​ ಅವರ ಉದಾರತೆ ಮತ್ತು ಹೃದಯ ವೈಶಾಲ್ಯತೆಯ ಬಗ್ಗೆ ಕೇಳಿ ತಿಳಿದುಕೊಂಡು, ಆ ಬಗ್ಗೆ ಮೆಚ್ಚುಗೆ ಸೂಚಿಸುವ ಸಲುವಾಗಿ ನೇರವಾಗಿ ಅವರು ನಮ್ಮ ಮನೆಗೆ ಬಂದಿದ್ದರು. ಅದರಿಂದ ನಮ್ಮಿಬ್ಬರಿಗೆ ಅಚ್ಚರಿ ಮತ್ತು ಖುಷಿ ಆಗಿತ್ತು.  ಯಾಕೆಂದರೆ ನಾವಿಬ್ಬರೂ ಅವರ ಪ್ರತಿಭೆಗೆ ಅಭಿಮಾನಿಗಳಾಗಿದ್ದೆವು’ ಎಂದು ಸುಮಲತಾ ಟ್ವೀಟ್​ ಮಾಡಿದ್ದಾರೆ.

‘ನಟ ವಿವೇಕ್​ ನಿಧನದ ಸುದ್ದಿ ಕೇಳಿ ಆಘಾತ ಆಗಿದೆ. ಅವರನ್ನು ಕೇವಲ ನಟ ಎಂದು ಕರೆದರೆ ಅವರ ಪ್ರತಿಭೆ, ಸಾಮಾಜಿಕ ಕಾರ್ಯ, ಬುದ್ಧಿವಂತಿಕೆಯನ್ನು ಕಡೆಗಣಿಸಿದಂತೆ ಆಗುತ್ತದೆ. ಅವರ ನಿಧನದಿಂದಾದ ನಷ್ಟವನ್ನು ಭರಿಸಲು ಸಾಧ್ಯವಿಲ್ಲ’ ಎಂದು ಸುಮಲತಾ ಅಂಬರೀಷ್​ ಕಂಬನಿ ಮಿಡಿದಿದ್ದಾರೆ. ನಟ ಪುನೀತ್​ ರಾಜ್​ಕುಮಾರ್​ ಕೂಡ ಟ್ವೀಟ್​ ಮಾಡಿದ್ದು, ‘ವಿವೇಕ್​ ಸರ್​ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯಿಂದ ಚಿತ್ರರಂಗಕ್ಕೆ ದೊಡ್ಡ ನಷ್ಟ ಆಗಿದೆ. ನಮ್ಮ ಕಾಲದ ಅತಿ ನಲ್ಮೆಯ ಕಾಮಿಡಿ ನಟ ಅವರಾಗಿದ್ದರು’ ಎಂದು ಸ್ಮರಿಸಿಕೊಂಡಿದ್ದಾರೆ.

ಇದನ್ನೂ ಓದಿ: Vivek: ತಮಿಳು ನಟ ವಿವೇಕ್​ ನಿಧನಕ್ಕೆ ಕಂಬನಿ ಮಿಡಿದ ಪುನೀತ್​, ರಜನಿಕಾಂತ್​, ಪ್ರಕಾಶ್​ ರೈ, ರೆಹಮಾನ್​

ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್