AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು ಏನು ನಿರ್ಧಾರ ತೆಗೆದುಕೊಳ್ಳುತ್ತಾಳೋ ಅದನ್ನು ನಾವು ಒಪ್ಪುತ್ತೇವೆ ಎಂದ ವೈಷ್ಣವಿ ಪಾಲಕರು

ಇಂದು (ನವೆಂಬರ್ 26) ನಡೆದ ಸುದ್ದಿಗೋಷ್ಠಿಯಲ್ಲಿ ವೈಷ್ಣವಿ ಪಾಲಕರಾದ ರವಿಕುಮಾರ್ ಹಾಗೂ ಭಾನು ರವಿಕುಮಾರ್ ಅವರು ಕೆಲ ಮಾಹಿತಿ ಹಂಚಿಕೊಂಡಿದ್ದಾರೆ.

ಮಗಳು ಏನು ನಿರ್ಧಾರ ತೆಗೆದುಕೊಳ್ಳುತ್ತಾಳೋ ಅದನ್ನು ನಾವು ಒಪ್ಪುತ್ತೇವೆ ಎಂದ ವೈಷ್ಣವಿ ಪಾಲಕರು
ವೈಷ್ಣವಿ ಕುಟುಂಬ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 26, 2022 | 12:23 PM

Share

ನಟಿ ವೈಷ್ಣವಿ ಗೌಡ (Vaishnavi Gowda) ಹಾಗೂ ನಟ, ಉದ್ಯಮಿ ವಿದ್ಯಾಭರಣ್ ಮದುವೆ ಮಾತುಕತೆ ವಿಚಾರ ಸಾಕಷ್ಟು ಚರ್ಚೆ ಆಗಿತ್ತು. ಇವರಿಬ್ಬರು ಹಾರ ಹಾಕಿ ನಿಂತಿದ್ದರಿಂದ ವೈಷ್ಣವಿ ಎಂಗೇಜ್​ಮೆಂಟ್ ನಡೆದಿದೆ ಎನ್ನಲಾಗಿತ್ತು. ಆದರೆ, ಇದು ಕೇವಲ ಮದುವೆ ಮಾತುಕತೆ ಎಂಬ ಸ್ಪಷ್ಟನೆ ಸಿಕ್ಕಿತ್ತು. ಹೀಗಿರುವಾಗಲೇ ವಿದ್ಯಾಭರಣ್ ಅವರಿಗೆ ಸಂಬಂಧಿಸಿದ ಆಡಿಯೋ ವೈರಲ್ ಆಗಿತ್ತು. ಈ ಎಲ್ಲ ಬೆಳವಣಿಗೆಗಳಿಂದ ಮದುವೆ ಮಾತುಕತೆ ರದ್ದು ಮಾಡಿಕೊಳ್ಳುವ ನಿರ್ಧರಕ್ಕೆ ವೈಷ್ಣವಿ ಕುಟುಂಬ ಬಂದಿದೆ. ವೈಷ್ಣವಿ ಕೂಡ ತಾವು ಈ ಸಂಬಂಧವನ್ನು ರದ್ದು ಮಾಡಿರುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದರು. ಇಂದು (ನವೆಂಬರ್ 26) ನಡೆದ ಸುದ್ದಿಗೋಷ್ಠಿಯಲ್ಲಿ ವೈಷ್ಣವಿ ಪಾಲಕರಾದ ರವಿಕುಮಾರ್ ಹಾಗೂ ಭಾನು ರವಿಕುಮಾರ್ (Bhanu Ravikumar) ಅವರು ಕೆಲ ಮಾಹಿತಿ ಹಂಚಿಕೊಂಡಿದ್ದಾರೆ.

ಭೇಟಿ ಬಗ್ಗೆ ಮಾಹಿತಿ

ವಿದ್ಯಾಭರಣ್ ಭೇಟಿ ನಡೆದಿದ್ದು ಹೇಗೆ ಎಂಬ ಬಗ್ಗೆ ಭಾನು ರವಿಕುಮಾರ್ ಅವರು ಮಾಹಿತಿ ನೀಡಿದ್ದಾರೆ. ‘ಚಾಕೋಲೇಟ್ ಹೆಸರಿನ ಸಿನಿಮಾದಲ್ಲಿ ವಿದ್ಯಾಭರಣ್ ನಟಿಸುತ್ತಿದ್ದರು. ವೈಷ್ಣವಿ ಗೌಡ ಕೂಡ ಇದ್ದರು. 9 ದಿನ ಶೂಟಿಂಗ್ ನಡೆದಿತ್ತು. ನಂತರ ಸಿನಿಮಾ ಅರ್ಧಕ್ಕೆ ನಿಂತಿತು. ನಂತರ ಕಾಂಟ್ಯಾಕ್ಟ್ ತಪ್ಪಿತ್ತು. ಬಿಗ್ ಬಾಸ್​ನಿಂದ ಹೊರ ಬಂದ ನಂತರದಲ್ಲಿ ಅವರ ಕುಟುಂಬದವರು ವಿಷ್ ಮಾಡಿದರು. ಅಲ್ಲಿಂದ ಮತ್ತೆ ಫ್ರೆಂಡ್​ಶಿಪ್ ಬೆಳೆಯಿತು’ ಎಂದು ಮಾತು ಆರಂಭಿಸಿದ್ದಾರೆ.

ಇದನ್ನೂ ಓದಿ
Image
ವೈಷ್ಣವಿ ಗೌಡ ಪಾಲಕರ ಸುದ್ದಿಗೋಷ್ಠಿ; ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ
Image
ದೇವರ ಬಗೆಗಿನ ಗ್ರಹಿಕೆ ಬಗ್ಗೆ ಗೋವಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಮಾತನಾಡಿದ ರಿಷಬ್ ಶೆಟ್ಟಿ
Image
Vaishnavi Gowda: ವಿದ್ಯಾಭರಣ್ ಜತೆಗಿನ ಮದುವೆ ಮಾತುಕತೆ ಕ್ಯಾನ್ಸಲ್; ಬೇಸರ ತೋಡಿಕೊಂಡ ವೈಷ್ಣವಿ ಗೌಡ
Image
‘ವೈಷ್ಣವಿ ಜತೆ ಮಾತನಾಡಿಲ್ಲ, ಇನ್ನೂ ನಿಶ್ಚಿತಾರ್ಥ ನಡೆದಿಲ್ಲ’; ಉದ್ಯಮಿ ವಿದ್ಯಾಭರಣ್ ಸ್ಪಷ್ಟನೆ

‘ಆಗ ಮದುವೆ ಮಾತುಕತೆ ಶುರುವಾಯಿತು. ಜಾತಕ ಕೂಡ ಹೊಂದಾಣಿಕೆ ಆಯಿತು. ಆದರೆ ವೈಷ್ಣವಿ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಿದ್ದರಿಂದ ಅವಳು ಒಪ್ಪಿಗೆ ನೀಡಿರಲಿಲ್ಲ. ದಸರಾ ಮರುದಿನ ವಿದ್ಯಾಭರಣ್ ಕುಟುಂಬದವರು ಮತ್ತೆ ಕರೆ ಮಾಡಿ ಭೇಟಿ ಮಾಡೋಣ, ಮತ್ತೆ ಮುಂದೂಡುವುದು ಬೇಡ ಎಂದರು. ಆಗ ವೈಷ್ಣವಿ ಕೂಡ ಒಪ್ಪಿಗೆ ಕೊಟ್ಟಳು. ನವೆಂಬರ್ 11ರಂದು ಭೇಟಿ ಮಾಡಿದೆವು. ಆಗ ತೆಗೆದ ಫೋಟೋ ಅದು. ಅದು ಮಾತುಕತೆ ಫೋಟೋ ಆಗಿತ್ತು’ ಎಂದಿದ್ದಾರೆ ಭಾನು ರವಿಕುಮಾರ್.

ಇದನ್ನೂ ಓದಿ: ವಿದ್ಯಾಭರಣ್ ಜತೆಗಿನ ಮದುವೆ ಮಾತುಕತೆ ಕ್ಯಾನ್ಸಲ್; ಬೇಸರ ತೋಡಿಕೊಂಡ ವೈಷ್ಣವಿ ಗೌಡ

ಮಗಳಿಗೆ ಬಿಟ್ಟ ನಿರ್ಧಾರ

ಯುವತಿಯೊಬ್ಬಳು ವಿದ್ಯಾಭರಣ್ ಬಗ್ಗೆ ಆರೋಪ ಮಾಡಿದ್ದಾರೆ. ಹುಡುಗ ಸರಿ ಇಲ್ಲ ಎಂದು ಹೇಳಿದ್ದರು. ಈ ವಿಚಾರವಾಗಿ ಭಾನು ಅವರು ಮಾತನಾಡಿದ್ದಾರೆ. ‘ಹುಡುಗ ನಮ್ಮ ಜತೆ ಚೆನ್ನಾಗೇ ಇದ್ದ. ಆರೋಪ ಮಾಡಿದ ಹುಡುಗಿಗೆ ಕಾಳಜಿ ಇದ್ದಿದ್ದರೆ ನೇರವಾಗಿ ನನ್ನ ಬಳಿಯೇ ಹೇಳುತ್ತಿದ್ದಳು. ಈಗ ನಿರ್ಧಾರವನ್ನು ಮಗಳಿಗೆ ಬಿಡುತ್ತೇವೆ. ಅವಳು ಏನು ನಿರ್ಧಾರ ತೆಗೆದುಕೊಳ್ಳುತ್ತಾಳೋ ಅದನ್ನು ಬೆಂಬಲಿಸುತ್ತೇವೆ’ ಎಂದಿದ್ದಾರೆ ಭಾನು.

ಇನ್ನಷ್ಟು ಸಿನಿಮಾ ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ