AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಥೆಯ ಬಗ್ಗೆ ಏನೂ ಹೇಳಲ್ಲ, ಸಿನಿಮಾನೇ ಮಾತನಾಡುತ್ತದೆ’; ‘ಕಾಂತಾರ ಚಾಪ್ಟರ್ 1’ ಬಗ್ಗೆ ರಿಷಬ್ ಶೆಟ್ಟಿ ಮಾತು

’ಹಿಂದೆ ಏನು ನಡೆಯಿತು ಎಂದು ಹೇಳಲು ಹೊರಟಿದ್ದೇವೆ. ದೊಡ್ಡ ಯಶಸ್ಸು ಸಿಕ್ಕಿರುವುದರಿಂದ ನಮ್ಮ ಜವಾಬ್ದಾರಿ ಹೆಚ್ಚಿದೆ. ಇನ್ನೂ ಒಳ್ಳೆಯ ಕೆಲಸ ಮಾಡುವ ಪ್ರಯತ್ನದಲ್ಲಿ ನಾವಿದ್ದೇವೆ’ ಎಂದಿದ್ದಾರೆ ರಿಷಬ್ ಶೆಟ್ಟಿ.

‘ಕಥೆಯ ಬಗ್ಗೆ ಏನೂ ಹೇಳಲ್ಲ, ಸಿನಿಮಾನೇ ಮಾತನಾಡುತ್ತದೆ’; ‘ಕಾಂತಾರ ಚಾಪ್ಟರ್ 1’ ಬಗ್ಗೆ ರಿಷಬ್ ಶೆಟ್ಟಿ ಮಾತು
ರಿಷಬ್ ಶೆಟ್ಟಿ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Nov 27, 2023 | 2:26 PM

Share

ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ’ ಚಿತ್ರದಿಂದ ದೊಡ್ಡ ಗೆಲುವು ಕಂಡಿದ್ದಾರೆ. ಈ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ಈಗ ಚಿತ್ರದ ಪ್ರಿಕ್ವೆಲ್ ಬಗ್ಗೆ ಚರ್ಚೆ ಶುರುವಾಗಿದೆ. ‘ಕಾಂತಾರ ಚಾಪ್ಟರ್ 1’ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ. ಕುಂದಾಪುರದ ಆನೆಗುಡ್ಡೆ ದೇವಸ್ಥಾನದಲ್ಲಿ ಸಿನಿಮಾಗೆ ಪೂಜೆ ಕೂಡ ನಡೆದಿದೆ. ಈ ಚಿತ್ರದ ಬಗ್ಗೆ ರಿಷಬ್ ಶೆಟ್ಟಿ ಅವರು ಮಾತನಾಡಿದ್ದಾರೆ. ಸಿನಿಮಾದ ಕಥೆಯ ಬಗ್ಗೆ ಮಾತನಾಡಲು ಅವರು ನಿರಾಕರಿಸಿದ್ದಾರೆ.

‘ಕಾಂತಾರದ ಮೊದಲ ಅಧ್ಯಾಯದ ಶೂಟಿಂಗ್ ಪ್ರಾರಂಭಿಸಲಿದ್ದೇವೆ. ಕಾಂತಾರ ಚಿತ್ರವನ್ನು ಎಲ್ಲರೂ ಸಕ್ಸಸ್ ಮಾಡಿದ್ದೀರಿ. ಕಾಂತಾರ ಪಯಣ ಈ ಮೂಲಕ ಮುಂದುವರಿಯಲಿದೆ. ಹಿಂದೆ ಏನು ನಡೆಯಿತು ಎಂದು ಹೇಳಲು ಹೊರಟಿದ್ದೇವೆ. ದೊಡ್ಡ ಯಶಸ್ಸು ಸಿಕ್ಕಿರುವುದರಿಂದ ನಮ್ಮ ಜವಾಬ್ದಾರಿ ಹೆಚ್ಚಿದೆ. ಇನ್ನೂ ಒಳ್ಳೆಯ ಕೆಲಸ ಮಾಡುವ ಪ್ರಯತ್ನದಲ್ಲಿ ನಾವಿದ್ದೇವೆ’ ಎಂದಿದ್ದಾರೆ ರಿಷಬ್ ಶೆಟ್ಟಿ.

‘ನನಗೆ ಆನೆಗುಡ್ಡೆ ಎಂದರೆ ತುಂಬಾ ಭಕ್ತಿ. ವಿಜಯ್ ಕಿರಗಂದೂರು ಅವರು ಕೂಡ ಇಲ್ಲಿಗೆ ನಿರಂತರವಾಗಿ ಬರುತ್ತಾರೆ. ಬೆಂಗಳೂರಿನಿಂದ ಅವರು ಇಲ್ಲಿಗೆ ಬಂದು ನಮಸ್ಕರಿಸಿ ಹೋಗುತ್ತಾರೆ. ಹಾಗಾಗಿ ಕಳೆದ ಬಾರಿಯೂ ಇಲ್ಲೇ ಮುಹೂರ್ತ ಮಾಡಿದ್ದೆವು. ಆನೆಗುಡ್ಡೆ ಗಣಪತಿ ದೇವರ ಆಶೀರ್ವಾದ ತೆಗೆದುಕೊಂಡು ಕೆಲಸ ಶುರು ಮಾಡುತ್ತಿದ್ದೇವೆ. ಮುಂದಿನ ತಿಂಗಳು ಶೂಟಿಂಗ್ ಆರಂಭ ಆಗಲಿದೆ. ಸಿಂಪಲ್ ಆಗಿ ಪೂಜೆ ಮಾಡಿ ಹೋಗೋಣ ಎಂದು ಬಂದಿದ್ದೇವೆ’ ಎಂದಿದ್ದಾರೆ ರಿಷಬ್ ಶೆಟ್ಟಿ.

ಇದನ್ನೂ ಓದಿ:Kantara Chapter 1: ಉಗ್ರ ರೂಪದಲ್ಲಿ ದರ್ಶನ ನೀಡಿದ ರಿಷಬ್ ಶೆಟ್ಟಿ; ಇದು ಬೇರೆಯದೇ ಕಥೆ..

‘ಈ ಚಿತ್ರದ ಬಗ್ಗೆ ಏನೂ ಹೇಳಲ್ಲ. ಮಾತಿಗಿಂತ ಕೆಲಸ ಮುಖ್ಯ. ಮುಂದಿನ ದಿನಗಳಲ್ಲಿ ಸಿನಿಮಾನೇ ಮಾತಾಡುತ್ತದೆ. ಕರಾವಳಿ ಭಾಗಕ್ಕೆ ಸಂಬಂಧಪಟ್ಟ ಕಥೆಯನ್ನು ಇದು ಹೊಂದಿದೆ. ಈ ಭಾಗದ ಲೊಕೇಶನ್​ಗಳಲ್ಲೇ ಶೂಟ್ ಮಾಡುತ್ತೇವೆ. ಸದ್ಯಕ್ಕೆ ನಾನು ಮಾತ್ರ ಸಿನಿಮಾದಲ್ಲಿದ್ದೇನೆ. ಉಳಿದ ಪಾತ್ರಗಳ ಆಯ್ಕೆ ನಡೆಯಬೇಕು. ಕನ್ನಡದವರಿಗೆ ಹೆಚ್ಚಿನ ಆದ್ಯತೆ ಕೊಡುತ್ತೇವೆ. ಇದರ ಜೊತೆಗೆ ಸ್ಥಳೀಯ ಹೊಸ ಮುಖಗಳಿಗೆ ಅವಕಾಶ ನೀಡುತ್ತೇವೆ. ಕರಾವಳಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಭಾಗಗಳಿಂದ ಕಲಾವಿದರನ್ನು ಬಳಸಿಕೊಳ್ಳುತ್ತೇವೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:08 pm, Mon, 27 November 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು