AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಯಸ್ಸಲ್ಲಿ ಮಗು ಪಡೆದರೆ ಏನಾಗುತ್ತದೆ? ತಮ್ಮ ಮುಂದಿರುವ ಸಮಸ್ಯೆಗಳನ್ನು ಹೇಳಿದ ನರೇಶ್

Pavitra Lokesh: ನರೇಶ್ ಅವರಿಗೆ ಈಗ 63 ವಯಸ್ಸು. ಪವಿತ್ರಾ ಲೋಕೇಶ್ ಅವರಿಗೆ 44 ವರ್ಷ. ಇವರ ಮಧ್ಯೆ ಸುಮಾರು 19 ವರ್ಷಗಳ ಅಂತರ ಇದೆ. ಮಗು ಹೊಂದುವ ವಿಚಾರದ ಬಗ್ಗೆ ನರೇಶ್ ಮಾತನಾಡಿದ್ದಾರೆ.

ಈ ವಯಸ್ಸಲ್ಲಿ ಮಗು ಪಡೆದರೆ ಏನಾಗುತ್ತದೆ? ತಮ್ಮ ಮುಂದಿರುವ ಸಮಸ್ಯೆಗಳನ್ನು ಹೇಳಿದ ನರೇಶ್
ಪವಿತ್ರಾ-ನರೇಶ್
ರಾಜೇಶ್ ದುಗ್ಗುಮನೆ
|

Updated on:May 31, 2023 | 8:13 AM

Share

ಇತ್ತೀಚೆಗೆ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದ ಜೋಡಿಗಳ ಪೈಕಿ ಪವಿತ್ರಾ ಲೋಕೇಶ್ ಹಾಗೂ ನರೇಶ್ (Naresh) ಜೋಡಿ ಕೂಡ ಒಂದು. ಇಬ್ಬರೂ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಇವರದ್ದು ಹೃದಯಗಳ ಮದುವೆ ಎಂದು ಇತ್ತೀಚೆಗೆ ನರೇಶ್ ಹೇಳಿದ್ದರು. ಮದುವೆ ಆದ ಮೇಲೆ ‘ಮಕ್ಕಳು’ ಎನ್ನುವ ಪ್ರಶ್ನೆ ಬಂದೇ ಬರುತ್ತದೆ. ನರೇಶ್ ಹಾಗೂ ಪವಿತ್ರಾ ಲೋಕೇಶ್ (Pavitra Lokesh) ದಂಪತಿಗೂ ಈ ಬಗ್ಗೆ ಪ್ರಶ್ನೆ ಎದುರಾಗಿದೆ. ಇದರ ಬಗ್ಗೆ ಮಾತನಾಡಲು ಅವರು ಮುಜುಗುರ ಪಟ್ಟುಕೊಂಡಿಲ್ಲ. ಆದರೆ, ಈಗ ಮಕ್ಕಳು ಮಾಡಿಕೊಂಡರೆ ಮುಂದಾಗುವ ಸಮಸ್ಯೆಗಳು ಏನೇನು ಎನ್ನುವ ವಿಚಾರಗಳನ್ನು ಅವರು ವಿವರಿಸಿದ್ದಾರೆ.

ನರೇಶ್ ಅವರಿಗೆ ಈಗ 63 ವಯಸ್ಸು. ಪವಿತ್ರಾ ಲೋಕೇಶ್ ಅವರಿಗೆ 44 ವರ್ಷ. ಇವರ ಮಧ್ಯೆ ಸುಮಾರು 19 ವರ್ಷಗಳ ಅಂತರ ಇದೆ. ಆದರೆ, ಇವರ ಪ್ರೀತಿಗೆ ವಯಸ್ಸಿನ ಅಂತರ ಸಮಸ್ಯೆ ಆಗಲೇ ಇಲ್ಲ. ನರೇಶ್ ನಾಲ್ಕನೇ ಮದುವೆ ಪ್ರಶ್ನಿಸಿ ಮೂರನೇ ಪತ್ನಿ ರಮ್ಯಾ ರಘುಪತಿ ಅವರು ಕಾನೂನಾತ್ಮಕ ಹೋರಾಟ ಮಾಡುತ್ತಿದ್ದಾರೆ. ಇತ್ತ ನರೇಶ್​-ಪವಿತ್ರಾ ಹಾಯಾಗಿ ಜೀವನ ನಡೆಸಿಕೊಂಡು ಹೋಗುತ್ತಿದ್ದಾರೆ. ಇವರಿಗೆ ಮಕ್ಕಳನ್ನು ಪಡೆಯಬೇಕು ಎನ್ನುವ ಯಾವುದೇ ಆಲೋಚನೆ ಇಲ್ಲ. ಈ ಬಗ್ಗೆ ನರೇಶ್ ಅವರು ಮಾತನಾಡಿದ್ದಾರೆ.

‘ವೈದ್ಯಕೀಯದ ಸಹಾಯದಿಂದ ನಾವು ಮಕ್ಕಳನ್ನು ಹೊಂದಬಹುದು. ಆದರೆ ನನಗೆ 80 ವರ್ಷವಾದಾಗ ಮಗುವಿಗೆ 20 ವರ್ಷ ಆಗುತ್ತದೆ. ಅದು ಅಗತ್ಯವೇ? ನಾವು ಗಂಡ- ಹೆಂಡತಿಯಾಗಿ ಆರಾಮಾಗಿ ಇದ್ದೇವೆ. ಈಗಾಗಲೇ ನಾನು 3 ಮಕ್ಕಳನ್ನು ಹೊಂದಿದ್ದೇನೆ ಮತ್ತು ನಾವು ಒಟ್ಟಿಗೆ ವಾಸಿಸುತ್ತಿದ್ದೇವೆ’ ಎಂದು ನರೇಶ್ ಉತ್ತರಿಸಿದರು.

ಇದನ್ನೂ ಓದಿ: ಪವಿತ್ರಾ ಲೋಕೇಶ್ ಜೊತೆಗಿನ ಲಿಪ್​ಲಾಕ್ ಬಗ್ಗೆ ವಿವರಣೆ ನೀಡಿದ ನರೇಶ್: ಆ ದೃಶ್ಯದ ಹಿನ್ನೆಲೆ ಏನು?

ನರೇಶ್ ಹಾಗೂ ಪವಿತ್ರಾ ಲೋಕೇಶ್ ನಟನೆಯ ‘ಮಳ್ಳಿ ಪೆಳ್ಳಿ’ ಸಿನಿಮಾ ತೆಲುಗು ಭಾಷೆಯಲ್ಲಿ ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಈ ಸಿನಿಮಾ ಕನ್ನಡದಲ್ಲಿ ‘ಮತ್ತೆ ಮದುವೆ’ ಹೆಸರಿನಲ್ಲಿ ಡಬ್ ಆಗಿದ್ದು, ಈ ವಾರ ರಿಲೀಸ್ ಆಗಲಿದೆ. ತೆಲುಗು ರಾಜ್ಯದಲ್ಲಿ ಮಿಶ್ರಪ್ರತಿಕ್ರಿಯೆ ಪಡೆದಿರುವುದರಿಂದ ಈ ಸಿನಿಮಾ ಇಲ್ಲಿ ಸದ್ದು ಮಾಡುವುದು ಅನುಮಾನ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:02 am, Wed, 31 May 23

ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ