Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾನಿಗಳು ಕೊಟ್ಟ ಹಣದಲ್ಲಿ ಭಾರೀ ಗೋಲ್​ಮಾಲ್​? ಸಹಕಲಾವಿದರಿಂದ ಗಂಭೀರ ಆರೋಪ

ಕೊವಿಡ್​ನಿಂದ ಚಿತ್ರರಂಗದ ಸಾಕಷ್ಟು ಜನರಿಗೆ ತೊಂದರೆ ಉಂಟಾಯಿತು. ಇದನ್ನು ಅರಿತ ನಿರ್ಮಾಪಕರು, ನಟರು ಹಾಗೂ ಸರ್ಕಾರ ಇವರ ಸಹಾಯಕ್ಕೆ ನಿಂತಿದ್ದಾರೆ.

ದಾನಿಗಳು ಕೊಟ್ಟ ಹಣದಲ್ಲಿ ಭಾರೀ ಗೋಲ್​ಮಾಲ್​? ಸಹಕಲಾವಿದರಿಂದ ಗಂಭೀರ ಆರೋಪ
ಈ ತಿಂಗಳು, ಅಂದರೆ ಸೆಪ್ಟೆಂಬರ್​ನಲ್ಲಿ ಪೂರ್ಣಗೊಳಿಸಬೇಕಾದ ಆರ್ಥಿಕ ವಿಚಾರಕ್ಕೆ ಸಂಬಂಧಿಸಿದ ಐದು ಜವಾಬ್ದಾರಿಗಳು ಇಲ್ಲಿವೆ. ಒಂದು ವೇಳೆ ಈ ಗಡುವನ್ನು ಮೀರಿದಲ್ಲಿ ದಂಡ ಪಾವತಿಸಬೇಕಾದ ಸನ್ನಿವೇಶ ಉದ್ಭವಿಸಬಹುದು. ಯಾವುದು ಆ 5 ಜವಾಬ್ದಾರಿಗಳು ಎಂಬ ವಿವರ ನಿಮ್ಮೆದುರು ಇದೆ.
Follow us
TV9 Web
| Updated By: ಮದನ್​ ಕುಮಾರ್​

Updated on: Jun 27, 2021 | 3:22 PM

ಕೊವಿಡ್ ಎರಡನೇ ಅಲೆಗೆ ಸ್ಯಾಂಡಲ್​​ವುಡ್​ ತತ್ತರಿಸಿದೆ. ಸಿನಿಮಾ ರಂಗದಲ್ಲಿ ತೊಡಗಿಕೊಂಡಿದ್ದ ಅನೇಕರಿಗೆ ತೊಂದರೆ ಉಂಟಾಗಿದೆ. ಹೀಗಾಗಿ ಕನ್ನಡ ಚಿತ್ರರಂಗದ ಅನೇಕ ಸ್ಟಾರ್​​ಗಳು ಸಿನಿಮಾ ರಂಗದಲ್ಲಿರುವವರಿಗೆ ಸಹಾಯ ಮಾಡುವ ಕೆಲಸ ಮಾಡಿದ್ದಾರೆ. ಆದರೆ, ಅವರು ನೀಡಿದ ಹಣ, ಫುಡ್​ಕಿಟ್ ನಮ್ಮ ಕೈ ಸೇರುತ್ತಿಲ್ಲ ಎಂದು ಸಹಕಲಾವಿದರು ಆರೋಪಿಸಿದ್ದಾರೆ.

ಕೊವಿಡ್ ಎರಡನೇ ಅಲೆಯಿಂದ ಲಾಕ್​ಡೌನ್ ಘೋಷಣೆ ಮಾಡಲಾಯಿತು. ಇದರಿಂದ ಚಿತ್ರರಂಗದ ಕೆಲಸಗಳು ನಿಂತವು. ಹೀಗಾಗಿ, ಸಾಕಷ್ಟು ಜನರಿಗೆ ತೊಂದರೆ ಉಂಟಾಯಿತು. ಇದನ್ನು ಅರಿತ ನಿರ್ಮಾಪಕರು, ನಟರು ಹಾಗೂ ಸರ್ಕಾರ ಇವರ ಸಹಾಯಕ್ಕೆ ನಿಂತಿದ್ದಾರೆ. ಆದರೆ, ಇದಾವುದೂ ನಮಗೆ ತಲುಪಿಲ್ಲ ಎಂದು ಸಹಕಲಾವಿದರ ಸಂಘದವರು ಆರೋಪಿಸಿದ್ದಾರೆ.

‘ದಾನಿಗಳು ನೀಡೋ ನೆರವು ಸಹಕಲಾವಿದರಿಗೆ ಸಿಗುತ್ತಿಲ್ಲ. ಹಲವರು ಲಕ್ಷ, ಲಕ್ಷ ದುಡ್ಡು ಕೊಡುತ್ತಿದ್ದಾರೆ. ಆದರೆ, ಅಲ್ಲಿನ ಅಧಿಕಾರಿಗಳೇ ಇದನ್ನು ನುಂಗಿ ನೀರು ಕುಡಿಯುತ್ತಿದ್ದಾರೆ. ಸಿನಿಮಾ ಕಲಾವಿದರಿಗೆ , ಕಾರ್ಮಿಕರಿಗೆ ಸಹಾಯ ಮಾಡ್ತಾರೆ. ಆದರೆ, ಅದು ನಮಗೆ ಮಾತ್ರ ಸಿಗುತ್ತಿಲ್ಲ. ಊಟ ಇಲ್ಲದೇ ಸಹಕಲಾವಿದರು ಬೀದಿ, ಬೀದಿಯಲ್ಲಿ ಅಲೆಯುತ್ತಿದ್ದಾರೆ. ನಮಗೆ ಒಂದು ಕೆಜಿ ಅಕ್ಕಿ ಕೂಡ ಕೊಟ್ಟಿಲ್ಲ’ ಎಂದು ಸಹಕಲಾವಿದರ ಸಂಘದ ಅಧ್ಯಕ್ಷ ಗಂಗಾಧರ್ ಹೇಳಿದ್ದಾರೆ.

ಈ ಬಗ್ಗೆ ಗಂಗಾಧರ್ ಈಗಾಗಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕ ಸಂಘಕ್ಕೆ ದೂರು ನೀಡಿದ್ದಾರೆ. ಸೋಮವಾರ (ಜೂನ್ 28) ಆನಂದ್ ರಾವ್ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ನಟ ಯಶ್, ಉಪೇಂದ್ರ, ನಿರ್ಮಾಪಕ ವಿಜಯ್ ಕಿರಗಂದೂರು, ಕೆ. ಮಂಜು ಸೇರಿದಂತೆ ಸಾಕಷ್ಟು ಸೆಲೆಬ್ರಿಟಿಗಳು ಚಿತ್ರರಂಗದಲ್ಲಿ ಕಷ್ಟದಲ್ಲಿರುವವರ ಸಹಾಯ ಮಾಡೋಕೆ ಮುಂದೆ ಬಂದಿದ್ದಾರೆ. ಇನ್ನು, ಸರ್ಕಾರ ಕೂಡ ಎರಡನೇ ಹಂತದ ಪ್ಯಾಕೇಜ್​ನಲ್ಲಿ ಪರಿಹಾರ ಘೋಷಣೆ ಮಾಡಿದೆ. ಇವೆಲ್ಲವನ್ನೂ ತಲುಪಿಸುವ ಕೆಲಸ ಸದ್ಯ ಪ್ರಗತಿಯಲ್ಲಿದೆ.

ಇದನ್ನೂ ಓದಿ: 

ಮಂಡ್ಯಕ್ಕೆ ಹೈಟೆಕ್​ ICU, 2 ಆಮ್ಲಜನಕ ಘಟಕ ನೀಡಿದ ಕೆಜಿಎಫ್​ ನಿರ್ಮಾಪಕ ವಿಜಯ್​ ಕಿರಗಂದೂರು

VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ