AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾನಿಗಳು ಕೊಟ್ಟ ಹಣದಲ್ಲಿ ಭಾರೀ ಗೋಲ್​ಮಾಲ್​? ಸಹಕಲಾವಿದರಿಂದ ಗಂಭೀರ ಆರೋಪ

ಕೊವಿಡ್​ನಿಂದ ಚಿತ್ರರಂಗದ ಸಾಕಷ್ಟು ಜನರಿಗೆ ತೊಂದರೆ ಉಂಟಾಯಿತು. ಇದನ್ನು ಅರಿತ ನಿರ್ಮಾಪಕರು, ನಟರು ಹಾಗೂ ಸರ್ಕಾರ ಇವರ ಸಹಾಯಕ್ಕೆ ನಿಂತಿದ್ದಾರೆ.

ದಾನಿಗಳು ಕೊಟ್ಟ ಹಣದಲ್ಲಿ ಭಾರೀ ಗೋಲ್​ಮಾಲ್​? ಸಹಕಲಾವಿದರಿಂದ ಗಂಭೀರ ಆರೋಪ
ಈ ತಿಂಗಳು, ಅಂದರೆ ಸೆಪ್ಟೆಂಬರ್​ನಲ್ಲಿ ಪೂರ್ಣಗೊಳಿಸಬೇಕಾದ ಆರ್ಥಿಕ ವಿಚಾರಕ್ಕೆ ಸಂಬಂಧಿಸಿದ ಐದು ಜವಾಬ್ದಾರಿಗಳು ಇಲ್ಲಿವೆ. ಒಂದು ವೇಳೆ ಈ ಗಡುವನ್ನು ಮೀರಿದಲ್ಲಿ ದಂಡ ಪಾವತಿಸಬೇಕಾದ ಸನ್ನಿವೇಶ ಉದ್ಭವಿಸಬಹುದು. ಯಾವುದು ಆ 5 ಜವಾಬ್ದಾರಿಗಳು ಎಂಬ ವಿವರ ನಿಮ್ಮೆದುರು ಇದೆ.
TV9 Web
| Edited By: |

Updated on: Jun 27, 2021 | 3:22 PM

Share

ಕೊವಿಡ್ ಎರಡನೇ ಅಲೆಗೆ ಸ್ಯಾಂಡಲ್​​ವುಡ್​ ತತ್ತರಿಸಿದೆ. ಸಿನಿಮಾ ರಂಗದಲ್ಲಿ ತೊಡಗಿಕೊಂಡಿದ್ದ ಅನೇಕರಿಗೆ ತೊಂದರೆ ಉಂಟಾಗಿದೆ. ಹೀಗಾಗಿ ಕನ್ನಡ ಚಿತ್ರರಂಗದ ಅನೇಕ ಸ್ಟಾರ್​​ಗಳು ಸಿನಿಮಾ ರಂಗದಲ್ಲಿರುವವರಿಗೆ ಸಹಾಯ ಮಾಡುವ ಕೆಲಸ ಮಾಡಿದ್ದಾರೆ. ಆದರೆ, ಅವರು ನೀಡಿದ ಹಣ, ಫುಡ್​ಕಿಟ್ ನಮ್ಮ ಕೈ ಸೇರುತ್ತಿಲ್ಲ ಎಂದು ಸಹಕಲಾವಿದರು ಆರೋಪಿಸಿದ್ದಾರೆ.

ಕೊವಿಡ್ ಎರಡನೇ ಅಲೆಯಿಂದ ಲಾಕ್​ಡೌನ್ ಘೋಷಣೆ ಮಾಡಲಾಯಿತು. ಇದರಿಂದ ಚಿತ್ರರಂಗದ ಕೆಲಸಗಳು ನಿಂತವು. ಹೀಗಾಗಿ, ಸಾಕಷ್ಟು ಜನರಿಗೆ ತೊಂದರೆ ಉಂಟಾಯಿತು. ಇದನ್ನು ಅರಿತ ನಿರ್ಮಾಪಕರು, ನಟರು ಹಾಗೂ ಸರ್ಕಾರ ಇವರ ಸಹಾಯಕ್ಕೆ ನಿಂತಿದ್ದಾರೆ. ಆದರೆ, ಇದಾವುದೂ ನಮಗೆ ತಲುಪಿಲ್ಲ ಎಂದು ಸಹಕಲಾವಿದರ ಸಂಘದವರು ಆರೋಪಿಸಿದ್ದಾರೆ.

‘ದಾನಿಗಳು ನೀಡೋ ನೆರವು ಸಹಕಲಾವಿದರಿಗೆ ಸಿಗುತ್ತಿಲ್ಲ. ಹಲವರು ಲಕ್ಷ, ಲಕ್ಷ ದುಡ್ಡು ಕೊಡುತ್ತಿದ್ದಾರೆ. ಆದರೆ, ಅಲ್ಲಿನ ಅಧಿಕಾರಿಗಳೇ ಇದನ್ನು ನುಂಗಿ ನೀರು ಕುಡಿಯುತ್ತಿದ್ದಾರೆ. ಸಿನಿಮಾ ಕಲಾವಿದರಿಗೆ , ಕಾರ್ಮಿಕರಿಗೆ ಸಹಾಯ ಮಾಡ್ತಾರೆ. ಆದರೆ, ಅದು ನಮಗೆ ಮಾತ್ರ ಸಿಗುತ್ತಿಲ್ಲ. ಊಟ ಇಲ್ಲದೇ ಸಹಕಲಾವಿದರು ಬೀದಿ, ಬೀದಿಯಲ್ಲಿ ಅಲೆಯುತ್ತಿದ್ದಾರೆ. ನಮಗೆ ಒಂದು ಕೆಜಿ ಅಕ್ಕಿ ಕೂಡ ಕೊಟ್ಟಿಲ್ಲ’ ಎಂದು ಸಹಕಲಾವಿದರ ಸಂಘದ ಅಧ್ಯಕ್ಷ ಗಂಗಾಧರ್ ಹೇಳಿದ್ದಾರೆ.

ಈ ಬಗ್ಗೆ ಗಂಗಾಧರ್ ಈಗಾಗಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕ ಸಂಘಕ್ಕೆ ದೂರು ನೀಡಿದ್ದಾರೆ. ಸೋಮವಾರ (ಜೂನ್ 28) ಆನಂದ್ ರಾವ್ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ನಟ ಯಶ್, ಉಪೇಂದ್ರ, ನಿರ್ಮಾಪಕ ವಿಜಯ್ ಕಿರಗಂದೂರು, ಕೆ. ಮಂಜು ಸೇರಿದಂತೆ ಸಾಕಷ್ಟು ಸೆಲೆಬ್ರಿಟಿಗಳು ಚಿತ್ರರಂಗದಲ್ಲಿ ಕಷ್ಟದಲ್ಲಿರುವವರ ಸಹಾಯ ಮಾಡೋಕೆ ಮುಂದೆ ಬಂದಿದ್ದಾರೆ. ಇನ್ನು, ಸರ್ಕಾರ ಕೂಡ ಎರಡನೇ ಹಂತದ ಪ್ಯಾಕೇಜ್​ನಲ್ಲಿ ಪರಿಹಾರ ಘೋಷಣೆ ಮಾಡಿದೆ. ಇವೆಲ್ಲವನ್ನೂ ತಲುಪಿಸುವ ಕೆಲಸ ಸದ್ಯ ಪ್ರಗತಿಯಲ್ಲಿದೆ.

ಇದನ್ನೂ ಓದಿ: 

ಮಂಡ್ಯಕ್ಕೆ ಹೈಟೆಕ್​ ICU, 2 ಆಮ್ಲಜನಕ ಘಟಕ ನೀಡಿದ ಕೆಜಿಎಫ್​ ನಿರ್ಮಾಪಕ ವಿಜಯ್​ ಕಿರಗಂದೂರು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್