AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೌತ್ ಸಿನಿಮಾಗಳ ವಿಚಾರದಲ್ಲಿ ಈ ತಪ್ಪು ಮಾಡಬೇಡಿ’; ಬಾಲಿವುಡ್ ಮಂದಿಗೆ ಖ್ಯಾತ ನಟನ ಕಿವಿಮಾತು

ಹಿಂದಿ ಸಿನಿಮಾಗಳು ಮಕಾಡೆ ಮಲಗುತ್ತಿರುವ ಸಂದರ್ಭದಲ್ಲಿ ಡಬ್​ ಆಗಿ ತೆರೆ ಕಾಣುತ್ತಿರುವ ದಕ್ಷಿಣದ ಚಿತ್ರಗಳು ಇಷ್ಟು ದೊಡ್ಡ ಗೆಲುವು ಕಾಣುತ್ತಿರುವುದು ಸಹಜವಾಗಿಯೇ ಬಾಲಿವುಡ್ ಮಂದಿಗೆ ಮುಜುಗರ ತಂದಿದೆ. ಆದರೆ, ಇದನ್ನು ನವಾಜುದ್ದೀನ್ ಒಪ್ಪಿಕೊಳ್ಳುತ್ತಿಲ್ಲ.

‘ಸೌತ್ ಸಿನಿಮಾಗಳ ವಿಚಾರದಲ್ಲಿ ಈ ತಪ್ಪು ಮಾಡಬೇಡಿ’; ಬಾಲಿವುಡ್ ಮಂದಿಗೆ ಖ್ಯಾತ ನಟನ ಕಿವಿಮಾತು
ಯಶ್-ಜ್ಯೂ.ಎನ್​ಟಿಆರ್​-ಅಲ್ಲು ಅರ್ಜುನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Apr 26, 2022 | 7:52 PM

Share

ಸದ್ಯ ಬಾಲಿವುಡ್​ನಲ್ಲಿ ದಕ್ಷಿಣ ಭಾರತದ ಸಿನಿಮಾಗಳ ಅಬ್ಬರ ಜೋರಾಗಿದೆ. ಈ ಸಿನಿಮಾಗಳು ಬಾಲಿವುಡ್​ ಬಾಕ್ಸ್ ಆಫೀಸ್​ನಲ್ಲಿ ಕೋಟಿಕೋಟಿ ಬಾಚಿಕೊಳ್ಳುತ್ತಿದೆ. ತೆಲುಗಿನ ‘ಆರ್​ಆರ್​ಆರ್​’ ಸಿನಿಮಾ (RRR Movie) ಬಾಲಿವುಡ್​ನಲ್ಲಿ 250 ಕೋಟಿ ರೂಪಾಯಿ ಬಾಚಿಕೊಂಡಿದೆ. ‘ಕೆಜಿಎಫ್ 2’ ಸಿನಿಮಾ (KGF Chapter 2) 300 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಬಾಲಿವುಡ್ ಮಂದಿ ಮಾಡಿದ ಹಲವು ದಾಖಲೆಗಳನ್ನು ಈ ಸಿನಿಮಾ ಮುರಿದಿದೆ. ಈ ಬೆಳವಣಿಗೆಯಿಂದ ಬಾಲಿವುಡ್ ಮುಳುಗೇ ಹೊಯಿತು ಎನ್ನುವ ಮಾತುಗಳು ಕೇಳಿ ಬಂದಿವೆ. ಆದರೆ ಇದೊಂದು ಹಂತ ಮಾತ್ರ, ನಂತರ ಎಲ್ಲವೂ ಮೊದಲಿನ ಸ್ಥಿತಿಗೆ ಮರಳಲಿದೆ ಎಂಬುದು ಬಾಲಿವುಡ್ (Bollywood) ನಟ ನವಾಜುದ್ದೀನ್ ಸಿದ್ದಿಕಿ ಅವರ ನಂಬಿಕೆ.

‘ಬಾಹುಬಲಿ’ ಸಿನಿಮಾ ಐದು ಭಾಷೆಯಲ್ಲಿ ರಿಲೀಸ್ ಆಯಿತು. ಈ ಚಿತ್ರದಿಂದ ಪ್ಯಾನ್​ ಇಂಡಿಯಾ ಟ್ರೆಂಡ್ ಜೋರಾಯಿತು. ಹಲವು ಚಿತ್ರಗಳು ಹಿಂದಿಗೆ ಡಬ್ ಆಗಿ ತೆರೆಕಂಡವು. ‘ಬಾಹುಬಲಿ 2’ ದೊಡ್ಡ ಯಶಸ್ಸು ಕಂಡಿತು. ‘ಕೆಜಿಎಫ್​’ ಸಿನಿಮಾ ಹಿಂದಿಯಲ್ಲಿ ಒಂದು ಹಂತಕ್ಕೆ ಸದ್ದು ಮಾಡಿತು. ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಬಾಲಿವುಡ್​ನಲ್ಲಿ 100 ಕೋಟಿ ಕ್ಲಬ್ ಸೇರಿತು. ‘ಆರ್​ಆರ್​ಆರ್’ ಚಿತ್ರ 250 ಕೋಟಿ ರೂಪಾಯಿ ಬಾಚಿಕೊಂಡಿತು. ಸದ್ಯ, ‘ಕೆಜಿಎಫ್ 2’ ಹವಾ. ಬಾಲಿವುಡ್​ನಲ್ಲಿ ಈ ಸಿನಿಮಾ 329 ಕೋಟಿ ರೂಪಾಯಿ ಗಳಿಸಿದೆ. ಇದು ಸಣ್ಣ ಸಾಧನೆಯಲ್ಲ. ಹಿಂದಿ ಸಿನಿಮಾಗಳು ಮಕಾಡೆ ಮಲಗುತ್ತಿರುವ ಸಂದರ್ಭದಲ್ಲಿ ಡಬ್​ ಆಗಿ ತೆರೆ ಕಾಣುತ್ತಿರುವ ದಕ್ಷಿಣದ ಚಿತ್ರಗಳು ಇಷ್ಟು ದೊಡ್ಡ ಗೆಲುವು ಕಾಣುತ್ತಿರುವುದು ಸಹಜವಾಗಿಯೇ ಬಾಲಿವುಡ್ ಮಂದಿಗೆ ಮುಜುಗರ ತಂದಿದೆ. ಆದರೆ, ಇದನ್ನು ನವಾಜುದ್ದೀನ್ ಒಪ್ಪಿಕೊಳ್ಳುತ್ತಿಲ್ಲ.

‘ನನ್ನ ಪ್ರಕಾರ ಇದು ಕೇವಲ ಒಂದು ಹಂತ. ಈಗ ಬಾಲಿವುಡ್ ಚಿತ್ರ ಬಂದು ಸೂಪರ್-ಡೂಪರ್ ಹಿಟ್ ಆದರೆ ಈಗ ನೀವು ಹೇಳುತ್ತಿರುವ ವಿಷಯಗಳು ಬದಲಾಗುತ್ತವೆ. ಪ್ರತಿ ಸಿನಿಮಾ ತೆರೆಗೆ ಬಂದ ನಂತರ ಜನರ ಆಲೋಚನೆಗಳು ಬದಲಾಗುತ್ತವೆ. ಜನರು ಚಿತ್ರದ ಬಗ್ಗೆ ಮಾತ್ರ ಮಾತನಾಡುತ್ತಾರೆ. ಹಿಂದಿ ಸಿನಿಮಾ ಬಂದು ಗೆದ್ದರೆ ಆ ನಂತರ ಈ ಗ್ರಹಿಕೆ ಮತ್ತೆ ಬದಲಾಗುತ್ತವೆ’ ಎಂದಿದ್ದಾರೆ ಅವರು.

ಇದನ್ನೂ ಓದಿ
Image
ರಜನಿ ನಟನೆಯ ‘2.0’ ಚಿತ್ರವನ್ನು ಹಿಂದಿಕ್ಕಿದ ‘ಕೆಜಿಎಫ್: ಚಾಪ್ಟರ್ 2’; ಹೊಸ ದಾಖಲೆ ಬರೆದ ಯಶ್ ಸಿನಿಮಾ

ದಕ್ಷಿಣ ಭಾರತದ ಹಲವು ಚಿತ್ರಗಳು ಹಿಂದಿಗೆ ರಿಮೇಕ್ ಆಗುತ್ತಿವೆ. ಇದು ತಪ್ಪು ಅನ್ನೋದು ನವಾಜುದ್ದೀನ್ ಅವರ ಅಭಿಪ್ರಾಯ. ‘ನಮ್ಮಿಂದ ಒಂದು ತಪ್ಪು ನಡೆದಿದೆ. ನಾವು ಸೌತ್ ಚಿತ್ರಗಳನ್ನು ರೀಮೇಕ್ ಮಾಡುತ್ತಲೇ ಇದ್ದೇವೆ. ನಾವು ಒರಿಜಿನಲ್​ ಸ್ಟೋರಿಗಳನ್ನು ಮಾಡುತ್ತಿಲ್ಲ. ನಾವು ರಿಮೇಕ್​ ಮೇಲೆ ಆಧಾರವಾಗಿದ್ದೇವೆ. ನಮ್ಮ ತಪ್ಪುಗಳಿಂದ ನಾವು ಪಾಠ ಕಲಿಯಬೇಕು. ಮೂಲ ಕಥೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಬೇಕಿದೆ’ ಎಂದು ಕಿವಿಮಾತು ಹೇಳಿದ್ದಾರೆ ನವಾಜುದ್ದೀನ್.

 ಇದನ್ನೂ ಓದಿ: ರಜನಿ ನಟನೆಯ ‘2.0’ ಚಿತ್ರವನ್ನು ಹಿಂದಿಕ್ಕಿದ ‘ಕೆಜಿಎಫ್: ಚಾಪ್ಟರ್ 2’; ಹೊಸ ದಾಖಲೆ ಬರೆದ ಯಶ್ ಸಿನಿಮಾ

ಬಾಲಿವುಡ್​ನಲ್ಲಿ 329 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಕೆಜಿಎಫ್ 2’; ಎಷ್ಟು ದಾಖಲೆಗಳು ಉಡೀಸ್?

 

Published On - 7:50 pm, Tue, 26 April 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ