AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಲಯಾಳಂ ರೀತಿಯ ಸಿನಿಮಾ ಮಾಡೋಕೆ ಅವರಿದ್ದಾರೆ, ನಾವು ನಮ್ಮ ಕಥೆ ಹೇಳಬೇಕು’; ರಾಜ್ ಬಿ. ಶೆಟ್ಟಿ

ಇತ್ತೀಚೆಗೆ ರಾಜ್ ಬಿ. ಶೆಟ್ಟಿ ನಟನೆಯ ‘ರೂಪಾಂತರ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಮೆಚ್ಚುಗೆ ಸಿಕ್ಕಿದೆ. ಮಲಯಾಳಂ ಸಿನಿಮಾಗಳನ್ನು ನೋಡುತ್ತಾರೆ, ಕನ್ನಡ ಸಿನಿಮಾಗಳನ್ನು ನೋಡಲ್ಲ ಎನ್ನುವ ಮಾತು ಇದೆ. ಈ ಮಾತನ್ನು ರಾಜ್​ ಶೆಟ್ಟಿ ಒಪ್ಪುವುದಿಲ್ಲ. ಈ ಬಗ್ಗೆ ಅವರು ಮಾತನಾಡಿದ್ದಾರೆ.

‘ಮಲಯಾಳಂ ರೀತಿಯ ಸಿನಿಮಾ ಮಾಡೋಕೆ ಅವರಿದ್ದಾರೆ, ನಾವು ನಮ್ಮ ಕಥೆ ಹೇಳಬೇಕು’; ರಾಜ್ ಬಿ. ಶೆಟ್ಟಿ
ರಾಜ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on:Jul 29, 2024 | 3:07 PM

Share

ರಾಜ್ ಬಿ. ಶೆಟ್ಟಿ ನಟನೆಯ ‘ರೂಪಾಂತರ’ ಸಿನಿಮಾ ಕಳೆದ ವಾರ ರಿಲೀಸ್ ಆಗಿದೆ. ಈ ಚಿತ್ರದ ಬಗ್ಗೆ ಒಳ್ಳೆಯ ಟಾಕ್ ಶುರುವಾಗಿದೆ. ಈ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಜೊತೆಗೆ ಲೇಖಾ ನಾಯ್ಡು, ಭರತ್ ಜಿಬಿ, ಅಂಜನ್ ಭಾರದ್ವಾಜ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಬಗ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿರುವುದಕ್ಕೆ ರಾಜ್ ಅವರು ಮೆಚ್ಚುಗೆಯ ಮಾತನಾಡಿದ್ದಾರೆ. ಈ ಚಿತ್ರವನ್ನು ಮಿಥಿಲೇಶ್ ಎಡವಲತ್ ಅವರು ನಿರ್ದೇಶನ ಮಾಡಿದ್ದಾರೆ.

‘ಕನ್ನಡ ಸಿನಿಮಾಗೆ ಜನ ಬರುತ್ತಿಲ್ಲ ಅನ್ನೋ ಮಾತು ಇತ್ತೀಚೆಗೆ ಹೆಚ್ಚಿದೆ. ಆದರೆ, ನಮ್ಮ ಸಿನಿಮಾಗೆ ನಾವು ಅಂದುಕೊಂಡಿದ್ದಕ್ಕಿಂತಲೂ ಒಳ್ಳೆಯ ರೆಸ್ಪಾನ್ಸ್ ಬರುತ್ತಿದೆ. ಎಲ್ಲರಿಗೂ ಸಲ್ಲುವ ಸಿನಿಮಾ ಅಲ್ಲ ಅನ್ನೋದು ನಮಗೆ ಗೊತ್ತು. ಇದು ತುಂಬಾ ಗಂಭೀರ ಸಿನಿಮಾ. ಸಿನಿಮಾನ ತುಂಬಾನೇ ಇಷ್ಟಪಡುವವರಿಗೆ ನಮ್ಮ ಚಿತ್ರ ಇಷ್ಟ ಆಗುತ್ತದೆ. ಆದಾಗ್ಯೂ ಈ ಸಿನಿಮಾನ  ವಯಸ್ಸಾದವರು, ಫ್ಯಾಮಿಲಿ ಮಂದಿ ನೋಡುತ್ತಿದ್ದಾರೆ’ ಎಂದಿದ್ದಾರೆ ಅವರು.

ಮಲಯಾಳಂ ಸಿನಿಮಾಗಳನ್ನು ನೋಡುತ್ತಾರೆ, ಕನ್ನಡ ಸಿನಿಮಾಗಳನ್ನು ನೋಡಲ್ಲ ಎನ್ನುವ ಮಾತು ಇದೆ. ಈ ಮಾತನ್ನು ರಾಜ್​ ಶೆಟ್ಟಿ ಒಪ್ಪುವುದಿಲ್ಲ. ‘ಮಲಯಾಳಂ ಸಿನಿಮಾಗಳು ಪೀಕ್ ಆಗಿರೋದು ನಾಲ್ಕೈದು ವರ್ಷಗಳ ಹಿಂದೆ. ಅವರು ಇದಕ್ಕಾಗಿ 15 ವರ್ಷ ದುಡಿದಿದ್ದಾರೆ. ಹೀಗಾಗಿ ಮಾರುಕಟ್ಟೆ ಅಲ್ಲಿ ಸೆಟ್ ಆಗಿದೆ. ಆದರೆ, ನಮ್ಮವರು ಆ ರೀತಿ ಸೆಟ್​ ಮಾಡಿಲ್ಲ. ಅಲ್ಲಿಯೂ ಸಾಕಷ್ಟು ಸಿನಿಮಾಗಳು ರೆಡಿ ಆಗುತ್ತವೆ. ಆದರೆ, ಎಲ್ಲವೂ ಇಲ್ಲಿ ಬರಲ್ಲ’ ಎಂದಿದ್ದಾರೆ ರಾಜ್ ಬಿ ಶೆಟ್ಟಿ.

‘ಮಲಯಾಳಂ ಸಿನಿಮಾನ ನೋಡುವ ಆಡಿಯನ್ಸ್ ಇದ್ದಾರೆ. ಆ ಒಂದು ಸಂಸ್ಕೃತಿನ ನಾವು ಇಲ್ಲಿ ಡೆವಲಪ್​ ಮಾಡಿಲ್ಲ. ಮಲಯಾಳಂ ತರ ಸಿನಿಮಾ ಮಾಡೋಕೆ ಮಲಯಾಳಂನವರು ಇದ್ದಾರೆ. ನಾವು ನಮ್ಮ ರೀತಿಯ ಸಿನಿಮಾ ಮಾಡಬೇಕು. ಇಲ್ಲಿಯವರ ಕಥೆಯನ್ನು ನಾವು ಹೇಳಬೇಕು. ಸಿನಿಮಾ ಚೆನ್ನಾಗಿ ಮಾಡಿದಾಗ ಜನ ಒಪ್ಪಿಕೊಳ್ಳುತ್ತಾರೆ. ಹೋಟೆಲ್ ಚೆನ್ನಾಗಿ ನಡೆಯುತ್ತಿಲ್ಲ ಎಂದಾಗ ಹೋಟೆಲ್ ಎದುರು ಬಂದು ಅತ್ತರೆ ಪ್ರಯೋಜನ ಇಲ್ಲ. ಏನು ಬದಲಾಯಿಸಬೇಕು ಎಂಬುದನ್ನು ನೋಡಬೇಕು. ಭಾವನಾತ್ಮಕವಾಗಿ ಮಾತನಾಡುವುದನ್ನು ನಿಲ್ಲಸಬೇಕು’ ಎಂಬುದು ರಾಜ್​ ಬಿ. ಶೆಟ್ಟಿ ಸಲಹೆ.

ಇದನ್ನೂ ಓದಿ: ಸಿನಿಮಾಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಹೆಸರಿಟ್ಟಿದ್ದೇಕೆ? ವಿವರಿಸಿದ್ದಾರೆ ರಾಜ್ ಬಿ ಶೆಟ್ಟಿ

ರಾಜ್ ಬಿ ಶೆಟ್ಟಿ ಅವರು ಸದ್ಯ ಶಿವರಾಜ್​ಕುಮಾರ್ ನಟನೆಯ ‘45’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಕ್ಲೈಮ್ಯಾಕ್ಸ್ ಶೂಟ್ ಬಾಕಿ ಇದೆ. ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸುತ್ತಿದ್ದೇನೆ. ಆ ಬಗ್ಗೆ ಘೋಷಣೆ ಇನ್ನಷ್ಟೇ ಆಗಬೇಕಿದೆ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:02 pm, Mon, 29 July 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!