AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ 2’ ಸಿನಿಮಾ ವಿರುದ್ಧ ಹೋರಾಟದ ಎಚ್ಚರಿಕೆ: ಕಾರಣ?

Rishab Shetty: ರಿಷಬ್ ಶೆಟ್ಟಿ ನಿರ್ಮಾಣ ಮಾಡುತ್ತಿರುವ ‘ಕಾಂತಾರ 2’ ಸಿನಿಮಾದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ತುಳುನಾಡ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಎಚ್ಚರಿಕೆ ನೀಡಿದೆ.

‘ಕಾಂತಾರ 2’ ಸಿನಿಮಾ ವಿರುದ್ಧ ಹೋರಾಟದ ಎಚ್ಚರಿಕೆ: ಕಾರಣ?
ರಿಷಬ್ ಶೆಟ್ಟಿ
ಮಂಜುನಾಥ ಸಿ.
|

Updated on: Feb 10, 2024 | 7:07 PM

Share

ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ’ (Kantara) ಸಿನಿಮಾ 2022 ರ ಸೆಪ್ಟೆಂಬರ್​ನಲ್ಲಿ ಬಿಡುಗಡೆ ಆಗಿ ಭಾರಿ ದೊಡ್ಡ ಹಿಟ್ ಆಯ್ತು. ‘ಕಾಂತಾರ’ ಸಿನಿಮಾನಲ್ಲಿ ತುಳುನಾಡಿನ ದೈವದ ಕತೆಯನ್ನು ತೋರಿಸಲಾಗಿತ್ತು. ಸಿನಿಮಾ ಬಿಡುಗಡೆ ಬಳಿಕ, ತುಳು ನಾಡಿನ ದೈವಗಳ ಬಗ್ಗೆ ರಾಜ್ಯ ಹಾಗೂ ರಾಷ್ಟ್ರದ ಇತರೆ ಭಾಗಗಳವರಿಗೆ ಪರಿಚಯವಾಯ್ತು. ಇದರ ಜೊತೆಗೆ ದೈವದ ಅನುಕರಣೆಯೂ ಸಹ ಹೆಚ್ಚಾಯ್ತು. ರೀಲ್ಸ್​ಗಳಲ್ಲಿ, ಧಾರಾವಾಹಿಗಳಲ್ಲಿ ದೈವದ ವೇಷ ಹಾಕಿಕೊಂಡು ಪ್ರದರ್ಶನ ನೀಡುವ ಛಾಳಿ ಹೆಚ್ಚಾಗಿದ್ದು, ಇದು ತುಳು ನಾಡಿನ ಜನರ ಭಾವನೆಗಳಿಗೆ ಧಕ್ಕೆ ತರುತ್ತಿದೆ. ರಿಷಬ್ ಶೆಟ್ಟಿ ‘ಕಾಂತಾರ 2’ ಸಿನಿಮಾ ನಿರ್ದೇಶನದಲ್ಲಿ ತೊಡಗಿದ್ದು ಆ ಸಿನಿಮಾದ ವಿರುದ್ಧವೂ ಸಹ ಹೋರಾಟದ ಎಚ್ಚರಿಕೆಯನ್ನು ಕೆಲವರು ನೀಡಿದ್ದಾರೆ.

ಇತ್ತೀಚೆಗೆ ಧಾರಾವಾಹಿಯೊಂದರಲ್ಲಿ ದೈವದ ವೇಷ ಹಾಕಿಕೊಂಡು ನಟರೊಬ್ಬರು ಪ್ರದರ್ಶನ ನೀಡಿದ್ದರು. ಇದರ ವಿರುದ್ಧ ಅಸಮಾಧಾನ ಹೊಸ ಹಾಕಿರುವ ತುಳುನಾಡ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆಯು ಮಂಗಳೂರು ಹಾಗೂ ಬಜ್ಪೆ ಪೊಲೀಸ್ ಠಾಣೆಗಳಲ್ಲಿ ದೂರು ಸಲ್ಲಿಸಿದೆ. ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ತುಳುನಾಡ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆಯ ಕೆಲ ಮುಖಂಡರು, ದೈವಾರಾದನೆ ಎಂಬುದು ಹಣ ಮಾಡುವ ದಂಧೆಯಾಗಿಬಿಟ್ಟಿದೆ ಕೆಲವರು ಮಾಡಿಕೊಂಡಿದ್ದಾರೆ. ನಾವು ‘ಕಾಂತಾರ 2’ ಸಿನಿಮಾದ ವಿರುದ್ಧವೂ ಸಹ ಪ್ರತಿಭಟನೆ ನಡೆಸಲಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ:ತಾವು ಕಲಿತ ಶಾಲೆ ದತ್ತು ಪಡೆದ ರಿಷಬ್ ಶೆಟ್ಟಿ: ಶಿಕ್ಷಕರು ಹೇಳಿದ್ದು ಹೀಗೆ

‘ರಿಷಬ್ ಶೆಟ್ಟಿಯವರಿಗೆ ದೈವದ ಬಗ್ಗೆ ಹೆಚ್ಚಾಗಿ ತಿಳಿದಂತಿಲ್ಲ. ಆದರೂ ಅವರು ಮಾಡಿದ್ದಾರೆ. ಉತ್ತರ ಕನ್ನಡ ಬಿಟ್ಟರೆ ಬೇರೆಡೆ ದೈವ ಎಂದರೇನು ಎಂಬುದು ಗೊತ್ತಿಲ್ಲ ‘ಕಾಂತಾರ’ ಸಿನಿಮಾದ ಬಳಿಕ ದೈವದ ಬಗ್ಗೆ ಬೇರೆಡೆ ಅಪಹಾಸ್ಯ ಮಾಡಲಾಗುತ್ತಿದೆ. ಪಂಜುರ್ಲಿ ಎಂದರೆ ಯಾರು ಅದರ ಮಹತ್ವವೇನು ಎಂಬುದು ಗೊತ್ತಿಲ್ಲದವರು ಅದಕ್ಕೆ ಅಪಮಾನ ಎಸಗುತ್ತಿದ್ದಾರೆ. ರಿಷಬ್ ಶೆಟ್ಟಿ ಇದಕ್ಕೆಲ್ಲ ಉತ್ತರ ಕೊಡಬೇಕಿತ್ತು ಆದರೆ ಕೊಟ್ಟಿಲ್ಲ. ಈಗ ಅವರು ‘ಕಾಂತಾರ 2’ ಮಾಡಲು ಹೊರಟಿದ್ದಾರೆ. ಅದರಲ್ಲಿ ದೈವದ ಬಗ್ಗೆ ಕತೆ ಇದ್ದರೆ ಖಂಡಿತ ಅದರ ವಿರುದ್ಧ ನಾವು ಪ್ರತಿಭಟನೆ, ಆ ಸಿನಿಮಾದ ವಿರುದ್ಧ ನಿಲ್ಲುತ್ತೇವೆ ಮಾಡುತ್ತೇವೆ’ ಎಂದಿದ್ದಾರೆ.

‘ದೈವದ ಕೆಲಸ ಮಾಡಲು ಮೂರು ಸಮುದಾಯಗಳಿವೆ. ನಲಿಕೆ, ಪರವ, ಪಂಬರ ಸಮುದಾಯದವರು ಮಾತ್ರ ದೈವದ ಕೆಲಸ ಮಾಡಬೇಕು. ಅದನ್ನು ಬಿಟ್ಟು ಬೇರೆ ಯಾರಾದರೂ ದೈವ ಮಾಡಿದರೆ ಅದು ಸರಿಯಲ್ಲ. ಬೇರೆಯವರಲ್ಲಿ ದೈವದ ಭಕ್ತಿ ಇರುವುದಿಲ್ಲ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ