AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಂಗ್ ಹಿಡಿದು ಬಂದ ಶಿವರಾಜ್​ಕುಮಾರ್; ರಗಡ್ ಆಗಿದೆ ‘ವೇದ’ ಟೀಸರ್

ಈ ವರ್ಷ ಅವರ ನಟನೆಯ ‘ಬೈರಾಗಿ’ ಸಿನಿಮಾ ತೆರೆಗೆ ಬಂತು. ಈಗ ‘ವೇದ’ ಮೂಲಕ ಅಬ್ಬರಿಸಲು ಶಿವಣ್ಣ ರೆಡಿ ಆಗಿದ್ದಾರೆ.

ಲಾಂಗ್ ಹಿಡಿದು ಬಂದ ಶಿವರಾಜ್​ಕುಮಾರ್; ರಗಡ್ ಆಗಿದೆ ‘ವೇದ’ ಟೀಸರ್
ಶಿವಣ್ಣ
TV9 Web
| Edited By: |

Updated on: Nov 11, 2022 | 8:10 PM

Share

ಶಿವರಾಜ್​ಕುಮಾರ್ (Shivarajkumar) ನಟನೆಯ ‘ವೇದ’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಹಿಟ್ ಕಾಂಬಿನೇಷನ್ ಎನಿಸಿಕೊಂಡಿರುವ ಶಿವರಾಜ್​ಕುಮಾರ್ ಹಾಗೂ ಎ. ಹರ್ಷ (A Harsha) ಅವರು ‘ವೇದ’ ಚಿತ್ರಕ್ಕಾಗಿ ಒಂದಾಗಿದ್ದಾರೆ. ಈ ಚಿತ್ರದ ಟೀಸರ್ ಇಂದು (ನವೆಂಬರ್ 11) ರಿಲೀಸ್ ಆಗಿದೆ. ಶಿವಣ್ಣ ಅವರು ಈ ಚಿತ್ರದಲ್ಲಿ ಮಚ್ಚು ಹಿಡಿದು ಅಬ್ಬರಿಸಿದ್ದಾರೆ. ಚಿತ್ರದ ಟೀಸರ್ ಸಖತ್ ರಾ ಆಗಿದೆ.

ಪುನೀತ್ ರಾಜ್​ಕುಮಾರ್ ನಿಧನದ ನಂತರದಲ್ಲಿ ರಾಜ್ ಕುಟುಂಬದಲ್ಲಿ ದುಃಖ ಮನೆ ಮಾಡಿದೆ. ಪುನೀತ್ ನಿಧನದ ನಂತರ ಕೆಲ ತಿಂಗಳು ಶಿವಣ್ಣ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದಿದ್ದರು. ಈಗ ಅವರು ಮತ್ತೆ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈ ವರ್ಷ ಅವರ ನಟನೆಯ ‘ಬೈರಾಗಿ’ ಸಿನಿಮಾ ತೆರೆಗೆ ಬಂತು. ಈಗ ‘ವೇದ’ ಮೂಲಕ ಅಬ್ಬರಿಸಲು ಶಿವಣ್ಣ ರೆಡಿ ಆಗಿದ್ದಾರೆ.

‘ವೆಪನ್ಸ್ ಆಫ್ ವೇದ’ ಹೆಸರಿನಲ್ಲಿ ಟೀಸರ್ ರಿಲೀಸ್ ಮಾಡಲಾಗಿದೆ. ಇದು ಶಿವರಾಜ್​ಕುಮಾರ್ ಅವರ 125ನೇ ಸಿನಿಮಾ ಎಂಬ ಕಾರಣಕ್ಕೂ ಅಭಿಮಾನಿಗಳ ಪಾಲಿಗೆ ಚಿತ್ರ ವಿಶೇಷ ಎನಿಸಿಕೊಂಡಿದೆ. ಟೀಸರ್​​ಗೆ ಕೊಟ್ಟ ಶೀರ್ಷಿಕೆಯೇ ಹೇಳುವಂತೆ ಕಲ್ಲು, ಮಚ್ಚು, ಲಾಂಗ್​​ ಮೊದಲಾದ ಆಯುಧಗಳನ್ನು ತೋರಿಸಲಾಗಿದೆ. ಈ ಟೀಸರ್​​ನಲ್ಲಿ ಶಿವಣ್ಣ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಕಥೆ 1960ರಲ್ಲಿ ಸಾಗಲಿದೆ ಎಂಬ ಸೂಚನೆಯೂ ಟೀಸರ್​ನಲ್ಲಿ ಸಿಕ್ಕಿದೆ.

ಎ.ಹರ್ಷ ಹಾಗೂ ಶಿವಣ್ಣ ಮೊದಲ ಬಾರಿಗೆ ಕೈ ಜೋಡಿಸಿದ್ದು 2013ರಲ್ಲಿ ತೆರೆಗೆ ಬಂದ ‘ಭಜರಂಗಿ’ ಚಿತ್ರದಲ್ಲಿ. ಈ ಚಿತ್ರ ಹಿಟ್ ಆಯಿತು. ಆ ಬಳಿಕ ‘ವಜ್ರಕಾಯ’ ಹಾಗೂ ‘ಭಜರಂಗಿ 2’ ಚಿತ್ರಗಳಲ್ಲಿ ಇವರು ಒಟ್ಟಾಗಿ ಕೆಲಸ ಮಾಡಿದರು. ಈಗ ‘ವೇದ’ ಚಿತ್ರದ ಮೂಲಕ ಇವರು ಮತ್ತೆ ಒಂದಾಗಿದ್ದಾರೆ. ಈ ಸಿನಿಮಾ ಕ್ರಿಸ್​ಮಸ್​ ಪ್ರಯುಕ್ತ ಈ ವರ್ಷ ಡಿಸೆಂಬರ್ 23ರಂದು ತೆರೆಗೆ ಬರಲಿದೆ.

ಈ ಚಿತ್ರದಲ್ಲಿ ಗಾನವಿ ಲಕ್ಷ್ಮಣ್, ಉಮಾಶ್ರೀ, ಶ್ವೇತಾ ಚಂಗಪ್ಪ ಮೊದಲಾದವರು ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ಸ್ವಾಮಿ ಜೆ. ಗೌಡ ಛಾಯಾಗ್ರಹಣ ಇದೆ. ಈ ಚಿತ್ರವನ್ನು ಗೀತಾ ಶಿವರಾಜ್​ಕುಮಾರ್ ಹಾಗೂ ಜೀ ಸ್ಟುಡಿಯೋಸ್ ಒಟ್ಟಾಗಿ ನಿರ್ಮಿಸಿದೆ.

Follow Us
Web contact
Web contact

TV9 Kannada

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ