AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಂಗ್ ಹಿಡಿದು ಬಂದ ಶಿವರಾಜ್​ಕುಮಾರ್; ರಗಡ್ ಆಗಿದೆ ‘ವೇದ’ ಟೀಸರ್

ಈ ವರ್ಷ ಅವರ ನಟನೆಯ ‘ಬೈರಾಗಿ’ ಸಿನಿಮಾ ತೆರೆಗೆ ಬಂತು. ಈಗ ‘ವೇದ’ ಮೂಲಕ ಅಬ್ಬರಿಸಲು ಶಿವಣ್ಣ ರೆಡಿ ಆಗಿದ್ದಾರೆ.

ಲಾಂಗ್ ಹಿಡಿದು ಬಂದ ಶಿವರಾಜ್​ಕುಮಾರ್; ರಗಡ್ ಆಗಿದೆ ‘ವೇದ’ ಟೀಸರ್
ಶಿವಣ್ಣ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 11, 2022 | 8:10 PM

ಶಿವರಾಜ್​ಕುಮಾರ್ (Shivarajkumar) ನಟನೆಯ ‘ವೇದ’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಹಿಟ್ ಕಾಂಬಿನೇಷನ್ ಎನಿಸಿಕೊಂಡಿರುವ ಶಿವರಾಜ್​ಕುಮಾರ್ ಹಾಗೂ ಎ. ಹರ್ಷ (A Harsha) ಅವರು ‘ವೇದ’ ಚಿತ್ರಕ್ಕಾಗಿ ಒಂದಾಗಿದ್ದಾರೆ. ಈ ಚಿತ್ರದ ಟೀಸರ್ ಇಂದು (ನವೆಂಬರ್ 11) ರಿಲೀಸ್ ಆಗಿದೆ. ಶಿವಣ್ಣ ಅವರು ಈ ಚಿತ್ರದಲ್ಲಿ ಮಚ್ಚು ಹಿಡಿದು ಅಬ್ಬರಿಸಿದ್ದಾರೆ. ಚಿತ್ರದ ಟೀಸರ್ ಸಖತ್ ರಾ ಆಗಿದೆ.

ಪುನೀತ್ ರಾಜ್​ಕುಮಾರ್ ನಿಧನದ ನಂತರದಲ್ಲಿ ರಾಜ್ ಕುಟುಂಬದಲ್ಲಿ ದುಃಖ ಮನೆ ಮಾಡಿದೆ. ಪುನೀತ್ ನಿಧನದ ನಂತರ ಕೆಲ ತಿಂಗಳು ಶಿವಣ್ಣ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದಿದ್ದರು. ಈಗ ಅವರು ಮತ್ತೆ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈ ವರ್ಷ ಅವರ ನಟನೆಯ ‘ಬೈರಾಗಿ’ ಸಿನಿಮಾ ತೆರೆಗೆ ಬಂತು. ಈಗ ‘ವೇದ’ ಮೂಲಕ ಅಬ್ಬರಿಸಲು ಶಿವಣ್ಣ ರೆಡಿ ಆಗಿದ್ದಾರೆ.

‘ವೆಪನ್ಸ್ ಆಫ್ ವೇದ’ ಹೆಸರಿನಲ್ಲಿ ಟೀಸರ್ ರಿಲೀಸ್ ಮಾಡಲಾಗಿದೆ. ಇದು ಶಿವರಾಜ್​ಕುಮಾರ್ ಅವರ 125ನೇ ಸಿನಿಮಾ ಎಂಬ ಕಾರಣಕ್ಕೂ ಅಭಿಮಾನಿಗಳ ಪಾಲಿಗೆ ಚಿತ್ರ ವಿಶೇಷ ಎನಿಸಿಕೊಂಡಿದೆ. ಟೀಸರ್​​ಗೆ ಕೊಟ್ಟ ಶೀರ್ಷಿಕೆಯೇ ಹೇಳುವಂತೆ ಕಲ್ಲು, ಮಚ್ಚು, ಲಾಂಗ್​​ ಮೊದಲಾದ ಆಯುಧಗಳನ್ನು ತೋರಿಸಲಾಗಿದೆ. ಈ ಟೀಸರ್​​ನಲ್ಲಿ ಶಿವಣ್ಣ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಕಥೆ 1960ರಲ್ಲಿ ಸಾಗಲಿದೆ ಎಂಬ ಸೂಚನೆಯೂ ಟೀಸರ್​ನಲ್ಲಿ ಸಿಕ್ಕಿದೆ.

ಎ.ಹರ್ಷ ಹಾಗೂ ಶಿವಣ್ಣ ಮೊದಲ ಬಾರಿಗೆ ಕೈ ಜೋಡಿಸಿದ್ದು 2013ರಲ್ಲಿ ತೆರೆಗೆ ಬಂದ ‘ಭಜರಂಗಿ’ ಚಿತ್ರದಲ್ಲಿ. ಈ ಚಿತ್ರ ಹಿಟ್ ಆಯಿತು. ಆ ಬಳಿಕ ‘ವಜ್ರಕಾಯ’ ಹಾಗೂ ‘ಭಜರಂಗಿ 2’ ಚಿತ್ರಗಳಲ್ಲಿ ಇವರು ಒಟ್ಟಾಗಿ ಕೆಲಸ ಮಾಡಿದರು. ಈಗ ‘ವೇದ’ ಚಿತ್ರದ ಮೂಲಕ ಇವರು ಮತ್ತೆ ಒಂದಾಗಿದ್ದಾರೆ. ಈ ಸಿನಿಮಾ ಕ್ರಿಸ್​ಮಸ್​ ಪ್ರಯುಕ್ತ ಈ ವರ್ಷ ಡಿಸೆಂಬರ್ 23ರಂದು ತೆರೆಗೆ ಬರಲಿದೆ.

ಈ ಚಿತ್ರದಲ್ಲಿ ಗಾನವಿ ಲಕ್ಷ್ಮಣ್, ಉಮಾಶ್ರೀ, ಶ್ವೇತಾ ಚಂಗಪ್ಪ ಮೊದಲಾದವರು ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ಸ್ವಾಮಿ ಜೆ. ಗೌಡ ಛಾಯಾಗ್ರಹಣ ಇದೆ. ಈ ಚಿತ್ರವನ್ನು ಗೀತಾ ಶಿವರಾಜ್​ಕುಮಾರ್ ಹಾಗೂ ಜೀ ಸ್ಟುಡಿಯೋಸ್ ಒಟ್ಟಾಗಿ ನಿರ್ಮಿಸಿದೆ.

ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್