AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಂಗ್ ಹಿಡಿದು ಬಂದ ಶಿವರಾಜ್​ಕುಮಾರ್; ರಗಡ್ ಆಗಿದೆ ‘ವೇದ’ ಟೀಸರ್

ಈ ವರ್ಷ ಅವರ ನಟನೆಯ ‘ಬೈರಾಗಿ’ ಸಿನಿಮಾ ತೆರೆಗೆ ಬಂತು. ಈಗ ‘ವೇದ’ ಮೂಲಕ ಅಬ್ಬರಿಸಲು ಶಿವಣ್ಣ ರೆಡಿ ಆಗಿದ್ದಾರೆ.

ಲಾಂಗ್ ಹಿಡಿದು ಬಂದ ಶಿವರಾಜ್​ಕುಮಾರ್; ರಗಡ್ ಆಗಿದೆ ‘ವೇದ’ ಟೀಸರ್
ಶಿವಣ್ಣ
TV9 Web
| Edited By: |

Updated on: Nov 11, 2022 | 8:10 PM

Share

ಶಿವರಾಜ್​ಕುಮಾರ್ (Shivarajkumar) ನಟನೆಯ ‘ವೇದ’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಹಿಟ್ ಕಾಂಬಿನೇಷನ್ ಎನಿಸಿಕೊಂಡಿರುವ ಶಿವರಾಜ್​ಕುಮಾರ್ ಹಾಗೂ ಎ. ಹರ್ಷ (A Harsha) ಅವರು ‘ವೇದ’ ಚಿತ್ರಕ್ಕಾಗಿ ಒಂದಾಗಿದ್ದಾರೆ. ಈ ಚಿತ್ರದ ಟೀಸರ್ ಇಂದು (ನವೆಂಬರ್ 11) ರಿಲೀಸ್ ಆಗಿದೆ. ಶಿವಣ್ಣ ಅವರು ಈ ಚಿತ್ರದಲ್ಲಿ ಮಚ್ಚು ಹಿಡಿದು ಅಬ್ಬರಿಸಿದ್ದಾರೆ. ಚಿತ್ರದ ಟೀಸರ್ ಸಖತ್ ರಾ ಆಗಿದೆ.

ಪುನೀತ್ ರಾಜ್​ಕುಮಾರ್ ನಿಧನದ ನಂತರದಲ್ಲಿ ರಾಜ್ ಕುಟುಂಬದಲ್ಲಿ ದುಃಖ ಮನೆ ಮಾಡಿದೆ. ಪುನೀತ್ ನಿಧನದ ನಂತರ ಕೆಲ ತಿಂಗಳು ಶಿವಣ್ಣ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದಿದ್ದರು. ಈಗ ಅವರು ಮತ್ತೆ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈ ವರ್ಷ ಅವರ ನಟನೆಯ ‘ಬೈರಾಗಿ’ ಸಿನಿಮಾ ತೆರೆಗೆ ಬಂತು. ಈಗ ‘ವೇದ’ ಮೂಲಕ ಅಬ್ಬರಿಸಲು ಶಿವಣ್ಣ ರೆಡಿ ಆಗಿದ್ದಾರೆ.

‘ವೆಪನ್ಸ್ ಆಫ್ ವೇದ’ ಹೆಸರಿನಲ್ಲಿ ಟೀಸರ್ ರಿಲೀಸ್ ಮಾಡಲಾಗಿದೆ. ಇದು ಶಿವರಾಜ್​ಕುಮಾರ್ ಅವರ 125ನೇ ಸಿನಿಮಾ ಎಂಬ ಕಾರಣಕ್ಕೂ ಅಭಿಮಾನಿಗಳ ಪಾಲಿಗೆ ಚಿತ್ರ ವಿಶೇಷ ಎನಿಸಿಕೊಂಡಿದೆ. ಟೀಸರ್​​ಗೆ ಕೊಟ್ಟ ಶೀರ್ಷಿಕೆಯೇ ಹೇಳುವಂತೆ ಕಲ್ಲು, ಮಚ್ಚು, ಲಾಂಗ್​​ ಮೊದಲಾದ ಆಯುಧಗಳನ್ನು ತೋರಿಸಲಾಗಿದೆ. ಈ ಟೀಸರ್​​ನಲ್ಲಿ ಶಿವಣ್ಣ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಕಥೆ 1960ರಲ್ಲಿ ಸಾಗಲಿದೆ ಎಂಬ ಸೂಚನೆಯೂ ಟೀಸರ್​ನಲ್ಲಿ ಸಿಕ್ಕಿದೆ.

ಎ.ಹರ್ಷ ಹಾಗೂ ಶಿವಣ್ಣ ಮೊದಲ ಬಾರಿಗೆ ಕೈ ಜೋಡಿಸಿದ್ದು 2013ರಲ್ಲಿ ತೆರೆಗೆ ಬಂದ ‘ಭಜರಂಗಿ’ ಚಿತ್ರದಲ್ಲಿ. ಈ ಚಿತ್ರ ಹಿಟ್ ಆಯಿತು. ಆ ಬಳಿಕ ‘ವಜ್ರಕಾಯ’ ಹಾಗೂ ‘ಭಜರಂಗಿ 2’ ಚಿತ್ರಗಳಲ್ಲಿ ಇವರು ಒಟ್ಟಾಗಿ ಕೆಲಸ ಮಾಡಿದರು. ಈಗ ‘ವೇದ’ ಚಿತ್ರದ ಮೂಲಕ ಇವರು ಮತ್ತೆ ಒಂದಾಗಿದ್ದಾರೆ. ಈ ಸಿನಿಮಾ ಕ್ರಿಸ್​ಮಸ್​ ಪ್ರಯುಕ್ತ ಈ ವರ್ಷ ಡಿಸೆಂಬರ್ 23ರಂದು ತೆರೆಗೆ ಬರಲಿದೆ.

ಈ ಚಿತ್ರದಲ್ಲಿ ಗಾನವಿ ಲಕ್ಷ್ಮಣ್, ಉಮಾಶ್ರೀ, ಶ್ವೇತಾ ಚಂಗಪ್ಪ ಮೊದಲಾದವರು ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ಸ್ವಾಮಿ ಜೆ. ಗೌಡ ಛಾಯಾಗ್ರಹಣ ಇದೆ. ಈ ಚಿತ್ರವನ್ನು ಗೀತಾ ಶಿವರಾಜ್​ಕುಮಾರ್ ಹಾಗೂ ಜೀ ಸ್ಟುಡಿಯೋಸ್ ಒಟ್ಟಾಗಿ ನಿರ್ಮಿಸಿದೆ.

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ