AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಂಗ್ ಹಿಡಿದು ಬಂದ ಶಿವರಾಜ್​ಕುಮಾರ್; ರಗಡ್ ಆಗಿದೆ ‘ವೇದ’ ಟೀಸರ್

ಈ ವರ್ಷ ಅವರ ನಟನೆಯ ‘ಬೈರಾಗಿ’ ಸಿನಿಮಾ ತೆರೆಗೆ ಬಂತು. ಈಗ ‘ವೇದ’ ಮೂಲಕ ಅಬ್ಬರಿಸಲು ಶಿವಣ್ಣ ರೆಡಿ ಆಗಿದ್ದಾರೆ.

ಲಾಂಗ್ ಹಿಡಿದು ಬಂದ ಶಿವರಾಜ್​ಕುಮಾರ್; ರಗಡ್ ಆಗಿದೆ ‘ವೇದ’ ಟೀಸರ್
ಶಿವಣ್ಣ
TV9 Web
| Edited By: |

Updated on: Nov 11, 2022 | 8:10 PM

Share

ಶಿವರಾಜ್​ಕುಮಾರ್ (Shivarajkumar) ನಟನೆಯ ‘ವೇದ’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಹಿಟ್ ಕಾಂಬಿನೇಷನ್ ಎನಿಸಿಕೊಂಡಿರುವ ಶಿವರಾಜ್​ಕುಮಾರ್ ಹಾಗೂ ಎ. ಹರ್ಷ (A Harsha) ಅವರು ‘ವೇದ’ ಚಿತ್ರಕ್ಕಾಗಿ ಒಂದಾಗಿದ್ದಾರೆ. ಈ ಚಿತ್ರದ ಟೀಸರ್ ಇಂದು (ನವೆಂಬರ್ 11) ರಿಲೀಸ್ ಆಗಿದೆ. ಶಿವಣ್ಣ ಅವರು ಈ ಚಿತ್ರದಲ್ಲಿ ಮಚ್ಚು ಹಿಡಿದು ಅಬ್ಬರಿಸಿದ್ದಾರೆ. ಚಿತ್ರದ ಟೀಸರ್ ಸಖತ್ ರಾ ಆಗಿದೆ.

ಪುನೀತ್ ರಾಜ್​ಕುಮಾರ್ ನಿಧನದ ನಂತರದಲ್ಲಿ ರಾಜ್ ಕುಟುಂಬದಲ್ಲಿ ದುಃಖ ಮನೆ ಮಾಡಿದೆ. ಪುನೀತ್ ನಿಧನದ ನಂತರ ಕೆಲ ತಿಂಗಳು ಶಿವಣ್ಣ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದಿದ್ದರು. ಈಗ ಅವರು ಮತ್ತೆ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈ ವರ್ಷ ಅವರ ನಟನೆಯ ‘ಬೈರಾಗಿ’ ಸಿನಿಮಾ ತೆರೆಗೆ ಬಂತು. ಈಗ ‘ವೇದ’ ಮೂಲಕ ಅಬ್ಬರಿಸಲು ಶಿವಣ್ಣ ರೆಡಿ ಆಗಿದ್ದಾರೆ.

‘ವೆಪನ್ಸ್ ಆಫ್ ವೇದ’ ಹೆಸರಿನಲ್ಲಿ ಟೀಸರ್ ರಿಲೀಸ್ ಮಾಡಲಾಗಿದೆ. ಇದು ಶಿವರಾಜ್​ಕುಮಾರ್ ಅವರ 125ನೇ ಸಿನಿಮಾ ಎಂಬ ಕಾರಣಕ್ಕೂ ಅಭಿಮಾನಿಗಳ ಪಾಲಿಗೆ ಚಿತ್ರ ವಿಶೇಷ ಎನಿಸಿಕೊಂಡಿದೆ. ಟೀಸರ್​​ಗೆ ಕೊಟ್ಟ ಶೀರ್ಷಿಕೆಯೇ ಹೇಳುವಂತೆ ಕಲ್ಲು, ಮಚ್ಚು, ಲಾಂಗ್​​ ಮೊದಲಾದ ಆಯುಧಗಳನ್ನು ತೋರಿಸಲಾಗಿದೆ. ಈ ಟೀಸರ್​​ನಲ್ಲಿ ಶಿವಣ್ಣ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಕಥೆ 1960ರಲ್ಲಿ ಸಾಗಲಿದೆ ಎಂಬ ಸೂಚನೆಯೂ ಟೀಸರ್​ನಲ್ಲಿ ಸಿಕ್ಕಿದೆ.

ಎ.ಹರ್ಷ ಹಾಗೂ ಶಿವಣ್ಣ ಮೊದಲ ಬಾರಿಗೆ ಕೈ ಜೋಡಿಸಿದ್ದು 2013ರಲ್ಲಿ ತೆರೆಗೆ ಬಂದ ‘ಭಜರಂಗಿ’ ಚಿತ್ರದಲ್ಲಿ. ಈ ಚಿತ್ರ ಹಿಟ್ ಆಯಿತು. ಆ ಬಳಿಕ ‘ವಜ್ರಕಾಯ’ ಹಾಗೂ ‘ಭಜರಂಗಿ 2’ ಚಿತ್ರಗಳಲ್ಲಿ ಇವರು ಒಟ್ಟಾಗಿ ಕೆಲಸ ಮಾಡಿದರು. ಈಗ ‘ವೇದ’ ಚಿತ್ರದ ಮೂಲಕ ಇವರು ಮತ್ತೆ ಒಂದಾಗಿದ್ದಾರೆ. ಈ ಸಿನಿಮಾ ಕ್ರಿಸ್​ಮಸ್​ ಪ್ರಯುಕ್ತ ಈ ವರ್ಷ ಡಿಸೆಂಬರ್ 23ರಂದು ತೆರೆಗೆ ಬರಲಿದೆ.

ಈ ಚಿತ್ರದಲ್ಲಿ ಗಾನವಿ ಲಕ್ಷ್ಮಣ್, ಉಮಾಶ್ರೀ, ಶ್ವೇತಾ ಚಂಗಪ್ಪ ಮೊದಲಾದವರು ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ಸ್ವಾಮಿ ಜೆ. ಗೌಡ ಛಾಯಾಗ್ರಹಣ ಇದೆ. ಈ ಚಿತ್ರವನ್ನು ಗೀತಾ ಶಿವರಾಜ್​ಕುಮಾರ್ ಹಾಗೂ ಜೀ ಸ್ಟುಡಿಯೋಸ್ ಒಟ್ಟಾಗಿ ನಿರ್ಮಿಸಿದೆ.

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK