AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವಾರವಾದ್ರೂ ಚೇತರಿಸಿಕೊಳ್ಳುತ್ತಾ ಚಿತ್ರರಂಗ? ವಾಣಿಜ್ಯ ಮಂಡಳಿಗೆ ‘ಡಿಎನ್​ಎ’ ತಂಡದ ಮನವಿ

ಮುಂದಿನ ವಾರದೊಳಗಾದರೂ ವೀಕೆಂಡ್​ ಕರ್ಫ್ಯೂ ಸಡಿಲಿಸುವಂತೆ ಸರ್ಕಾರದ ಮನವೊಲಿಸಬೇಕು ಎಂದು ವಾಣಿಜ್ಯ ಮಂಡಳಿಗೆ ‘ಡಿಎನ್​ಎ’ ತಂಡ ಮನವಿ ಸಲ್ಲಿಸಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜ.7ರಂದು ಈ ಚಿತ್ರ ರಿಲೀಸ್​ ಆಗಬೇಕಿತ್ತು.

ಮುಂದಿನ ವಾರವಾದ್ರೂ ಚೇತರಿಸಿಕೊಳ್ಳುತ್ತಾ ಚಿತ್ರರಂಗ? ವಾಣಿಜ್ಯ ಮಂಡಳಿಗೆ ‘ಡಿಎನ್​ಎ’ ತಂಡದ ಮನವಿ
ಡಿಎನ್​ಎ ಸಿನಿಮಾ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
Follow us
TV9 Web
| Updated By: ಮದನ್​ ಕುಮಾರ್​

Updated on: Jan 06, 2022 | 4:35 PM

ಎರಡು ಲಾಕ್​ಡೌನ್​ ಪರಿಣಾಮದಿಂದ ಕಂಗೆಟ್ಟಿದ್ದ ಚಿತ್ರರಂಗಕ್ಕೆ ಈಗ ಮೂರನೇ ಬಾರಿಗೆ ಶಾಕ್​ ಎದುರಾಗಿದೆ. ದೇಶದಲ್ಲಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ (Omicron Cases in India) ಹೆಚ್ಚುತ್ತಿರುವ ಕಾರಣ ಕಠಿಣ ನಿಯಮಗಳನ್ನು ಜಾರಿ ಮಾಡಲಾಗಿದೆ. ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ನೈಟ್​ ಕರ್ಫ್ಯೂ ಜತೆಗೆ ವೀಕೆಂಡ್​ ಕರ್ಫ್ಯೂ (Weekend Curfew) ಕೂಡ ಜಾರಿ ಆಗಿರುವುದರಿಂದ ಅನೇಕ ಸಿನಿಮಾಗಳು ರಿಲೀಸ್​ ದಿನಾಂಕವನ್ನು ಮಂದೂಡಿಕೊಂಡಿವೆ. ಈ ವಾರ (ಜ.7) ರಿಲೀಸ್​ ಆಗಬೇಕಿದ್ದ ಕನ್ನಡದ ‘ಡಿಎನ್​ಎ’ (DNA Kannada Movie) ಚಿತ್ರಕ್ಕೂ ಇದೇ ಪರಿಸ್ಥಿತಿ ಬಂದೊದಗಿದೆ. ಮುಂದಿನ ವಾರವಾದರೂ ಸಮಸ್ಯೆ ಪರಿಹರಿಸುವಂತೆ ಕೋರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (Karnataka Film Chamber of Commerce) ‘ಡಿಎನ್​ಎ’ ತಂಡ ಮನವಿ ಸಲ್ಲಿಸಿದೆ.

ಸದ್ಯದ ಪರಿಸ್ಥಿತಿಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಎಲ್ಲರೂ ಹಿಂದೇಟು ಹಾಕುತ್ತಿದ್ದಾರೆ. ಹೀಗಿರುವಾಗ ‘ಡಿಎನ್​ಎ’ ತಂಡ ಧೈರ್ಯ ತೋರಿಸಿತ್ತು. ಬಹುನಿರೀಕ್ಷಿತ ‘ಆರ್​ಆರ್​ಆರ್​’ ಚಿತ್ರ ಕೂಡ ಜ.7ರಂದು ರಿಲೀಸ್​ ಮಾಡಲು ಹಿಂದೇಟು ಹಾಕಿದೆ. ಆದರೆ ಅದೇ ದಿನಾಂಕದಲ್ಲಿ ಬಿಡುಗಡೆಯಾಗಲು ‘ಡಿಎನ್​ಎ’ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಅಷ್ಟರಲ್ಲಿ ವೀಕೆಂಡ್​ ಕರ್ಫ್ಯೂ ಜಾರಿ ಆಯಿತು. ಆ ಒಂದು ನಿಯಮದಿಂದಾಗಿ ‘ಡಿಎನ್​ಎ’ ತಂಡದ ನಿರ್ಧಾರವೇ ಬದಲಾಯಿತು.

ಜನರು ಸಿನಿಮಾಗೆ ಬರುವುದೇ ವೀಕೆಂಡ್​ಗಳಲ್ಲಿ. ಶನಿವಾರ ಮತ್ತು ಭಾನುವಾರ ಕರ್ಫ್ಯೂ ಹೇರಿದರೆ ಎಲ್ಲ ಚಿತ್ರಕ್ಕೆ ದೊಡ್ಡ ನಷ್ಟ ಉಂಟಾಗುತ್ತದೆ. ಹಾಗಾಗಿ ಜ.7ರಂದು ‘ಡಿಎನ್​ಎ’ ಸಿನಿಮಾವನ್ನು ರಿಲೀಸ್​ ಮಾಡದೇ ಇರಲು ನಿರ್ಮಾಪಕ ಎಂ. ಮೈಲಾರಿ ನಿರ್ಧರಿಸಿದ್ದಾರೆ. ಕನಿಷ್ಠ ಮುಂದಿನ ವಾರದೊಳಗಾದರೂ ವೀಕೆಂಡ್​ ಕರ್ಫ್ಯೂ ಸಡಿಲಿಸುವಂತೆ ಸರ್ಕಾರದ ಮನವೊಲಿಸಬೇಕು ಎಂದು ವಾಣಿಜ್ಯ ಮಂಡಳಿಗೆ ‘ಡಿಎನ್​ಎ’ ತಂಡ ಮನವಿ ಸಲ್ಲಿಸಿದೆ. ವೀಕೆಂಡ್​ನಲ್ಲಿ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಸಿಕ್ಕರೆ ಮುಂದಿನ ವಾರವೇ ಚಿತ್ರ ಬಿಡುಗಡೆ ಮಾಡುವ ಬಗ್ಗೆ ಆಲೋಚಿಸುತ್ತಿದ್ದಾರೆ ನಿರ್ಮಾಪಕರು.

ಈ ಚಿತ್ರಕ್ಕೆ ಪ್ರಕಾಶ್​ರಾಜ್​ ಮೇಹು ನಿರ್ದೇಶನ ಮಾಡಿದ್ದಾರೆ. ‘ಜನುಮದ ಜೋಡಿ’ ಸಿನಿಮಾದಿಂದಲೂ ಸಹ-ನಿರ್ದೇಶಕರಾಗಿ ಕೆಲಸ ಮಾಡಿಕೊಂಡು ಬಂದಿರುವ ಅವರು ಇದೇ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ತಮ್ಮ ಚೊಚ್ಚಲ ಸಿನಿಮಾ ‘ಡಿಎನ್​ಎ’ ಮೂಲಕ ಸದಭಿರುಚಿಯ ಕಥೆಯನ್ನು ಜನರಿಗೆ ತಲುಪಿಸಲು ಪ್ರಯತ್ನ ಮಾಡಿದ್ದಾರೆ. ಅದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಆದರೆ ಸದ್ಯಕ್ಕೆ ಚಿತ್ರದ ಬಿಡುಗಡೆಗೆ ಒಮಿಕ್ರಾನ್​ ಅಡ್ಡಿಯಾಗಿದೆ. ಈ ಸಿನಿಮಾದಲ್ಲಿ ಎಸ್ತರ್​ ನರೋನಾ, ರೋಜರ್​ ನಾರಾಯಣ್​, ಅನಿತಾ ಭಟ್​, ಮಾಸ್ಟರ್​ ಆನಂದ್​, ಅಚ್ಯುತ್​ ಕುಮಾರ್​ ಮುಂತಾದ ಕಲಾವಿದರು ನಟಿಸಿದ್ದಾರೆ.

ಇದನ್ನೂ ಓದಿ:

‘ವಿಕ್ರಾಂತ್​ ರೋಣ’ ಪ್ಲ್ಯಾನ್​ನಲ್ಲಿ ದೊಡ್ಡ ಬದಲಾವಣೆ; ಒಟಿಟಿ ಆಫರ್​ ಬೆನ್ನಲ್ಲೇ ಟೀಸರ್​ ರಿಲೀಸ್​ ಮುಂದೂಡಿಕೆ?

‘ರಾಧೆ ಶ್ಯಾಮ್​’ ರಿಲೀಸ್​ ದಿನಾಂಕ ಮುಂದಕ್ಕೆ; ಸಂಕ್ರಾಂತಿ ರೇಸ್​ನಿಂದ ಹಿಂದೆ ಸರಿದ ಪ್ರಭಾಸ್ ಸಿನಿಮಾ

Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ