ಮುಂದಿನ ವಾರವಾದ್ರೂ ಚೇತರಿಸಿಕೊಳ್ಳುತ್ತಾ ಚಿತ್ರರಂಗ? ವಾಣಿಜ್ಯ ಮಂಡಳಿಗೆ ‘ಡಿಎನ್​ಎ’ ತಂಡದ ಮನವಿ

ಮುಂದಿನ ವಾರದೊಳಗಾದರೂ ವೀಕೆಂಡ್​ ಕರ್ಫ್ಯೂ ಸಡಿಲಿಸುವಂತೆ ಸರ್ಕಾರದ ಮನವೊಲಿಸಬೇಕು ಎಂದು ವಾಣಿಜ್ಯ ಮಂಡಳಿಗೆ ‘ಡಿಎನ್​ಎ’ ತಂಡ ಮನವಿ ಸಲ್ಲಿಸಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜ.7ರಂದು ಈ ಚಿತ್ರ ರಿಲೀಸ್​ ಆಗಬೇಕಿತ್ತು.

ಮುಂದಿನ ವಾರವಾದ್ರೂ ಚೇತರಿಸಿಕೊಳ್ಳುತ್ತಾ ಚಿತ್ರರಂಗ? ವಾಣಿಜ್ಯ ಮಂಡಳಿಗೆ ‘ಡಿಎನ್​ಎ’ ತಂಡದ ಮನವಿ
ಡಿಎನ್​ಎ ಸಿನಿಮಾ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
Follow us
| Updated By: ಮದನ್​ ಕುಮಾರ್​

Updated on: Jan 06, 2022 | 4:35 PM

ಎರಡು ಲಾಕ್​ಡೌನ್​ ಪರಿಣಾಮದಿಂದ ಕಂಗೆಟ್ಟಿದ್ದ ಚಿತ್ರರಂಗಕ್ಕೆ ಈಗ ಮೂರನೇ ಬಾರಿಗೆ ಶಾಕ್​ ಎದುರಾಗಿದೆ. ದೇಶದಲ್ಲಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ (Omicron Cases in India) ಹೆಚ್ಚುತ್ತಿರುವ ಕಾರಣ ಕಠಿಣ ನಿಯಮಗಳನ್ನು ಜಾರಿ ಮಾಡಲಾಗಿದೆ. ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ನೈಟ್​ ಕರ್ಫ್ಯೂ ಜತೆಗೆ ವೀಕೆಂಡ್​ ಕರ್ಫ್ಯೂ (Weekend Curfew) ಕೂಡ ಜಾರಿ ಆಗಿರುವುದರಿಂದ ಅನೇಕ ಸಿನಿಮಾಗಳು ರಿಲೀಸ್​ ದಿನಾಂಕವನ್ನು ಮಂದೂಡಿಕೊಂಡಿವೆ. ಈ ವಾರ (ಜ.7) ರಿಲೀಸ್​ ಆಗಬೇಕಿದ್ದ ಕನ್ನಡದ ‘ಡಿಎನ್​ಎ’ (DNA Kannada Movie) ಚಿತ್ರಕ್ಕೂ ಇದೇ ಪರಿಸ್ಥಿತಿ ಬಂದೊದಗಿದೆ. ಮುಂದಿನ ವಾರವಾದರೂ ಸಮಸ್ಯೆ ಪರಿಹರಿಸುವಂತೆ ಕೋರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (Karnataka Film Chamber of Commerce) ‘ಡಿಎನ್​ಎ’ ತಂಡ ಮನವಿ ಸಲ್ಲಿಸಿದೆ.

ಸದ್ಯದ ಪರಿಸ್ಥಿತಿಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಎಲ್ಲರೂ ಹಿಂದೇಟು ಹಾಕುತ್ತಿದ್ದಾರೆ. ಹೀಗಿರುವಾಗ ‘ಡಿಎನ್​ಎ’ ತಂಡ ಧೈರ್ಯ ತೋರಿಸಿತ್ತು. ಬಹುನಿರೀಕ್ಷಿತ ‘ಆರ್​ಆರ್​ಆರ್​’ ಚಿತ್ರ ಕೂಡ ಜ.7ರಂದು ರಿಲೀಸ್​ ಮಾಡಲು ಹಿಂದೇಟು ಹಾಕಿದೆ. ಆದರೆ ಅದೇ ದಿನಾಂಕದಲ್ಲಿ ಬಿಡುಗಡೆಯಾಗಲು ‘ಡಿಎನ್​ಎ’ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಅಷ್ಟರಲ್ಲಿ ವೀಕೆಂಡ್​ ಕರ್ಫ್ಯೂ ಜಾರಿ ಆಯಿತು. ಆ ಒಂದು ನಿಯಮದಿಂದಾಗಿ ‘ಡಿಎನ್​ಎ’ ತಂಡದ ನಿರ್ಧಾರವೇ ಬದಲಾಯಿತು.

ಜನರು ಸಿನಿಮಾಗೆ ಬರುವುದೇ ವೀಕೆಂಡ್​ಗಳಲ್ಲಿ. ಶನಿವಾರ ಮತ್ತು ಭಾನುವಾರ ಕರ್ಫ್ಯೂ ಹೇರಿದರೆ ಎಲ್ಲ ಚಿತ್ರಕ್ಕೆ ದೊಡ್ಡ ನಷ್ಟ ಉಂಟಾಗುತ್ತದೆ. ಹಾಗಾಗಿ ಜ.7ರಂದು ‘ಡಿಎನ್​ಎ’ ಸಿನಿಮಾವನ್ನು ರಿಲೀಸ್​ ಮಾಡದೇ ಇರಲು ನಿರ್ಮಾಪಕ ಎಂ. ಮೈಲಾರಿ ನಿರ್ಧರಿಸಿದ್ದಾರೆ. ಕನಿಷ್ಠ ಮುಂದಿನ ವಾರದೊಳಗಾದರೂ ವೀಕೆಂಡ್​ ಕರ್ಫ್ಯೂ ಸಡಿಲಿಸುವಂತೆ ಸರ್ಕಾರದ ಮನವೊಲಿಸಬೇಕು ಎಂದು ವಾಣಿಜ್ಯ ಮಂಡಳಿಗೆ ‘ಡಿಎನ್​ಎ’ ತಂಡ ಮನವಿ ಸಲ್ಲಿಸಿದೆ. ವೀಕೆಂಡ್​ನಲ್ಲಿ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಸಿಕ್ಕರೆ ಮುಂದಿನ ವಾರವೇ ಚಿತ್ರ ಬಿಡುಗಡೆ ಮಾಡುವ ಬಗ್ಗೆ ಆಲೋಚಿಸುತ್ತಿದ್ದಾರೆ ನಿರ್ಮಾಪಕರು.

ಈ ಚಿತ್ರಕ್ಕೆ ಪ್ರಕಾಶ್​ರಾಜ್​ ಮೇಹು ನಿರ್ದೇಶನ ಮಾಡಿದ್ದಾರೆ. ‘ಜನುಮದ ಜೋಡಿ’ ಸಿನಿಮಾದಿಂದಲೂ ಸಹ-ನಿರ್ದೇಶಕರಾಗಿ ಕೆಲಸ ಮಾಡಿಕೊಂಡು ಬಂದಿರುವ ಅವರು ಇದೇ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ತಮ್ಮ ಚೊಚ್ಚಲ ಸಿನಿಮಾ ‘ಡಿಎನ್​ಎ’ ಮೂಲಕ ಸದಭಿರುಚಿಯ ಕಥೆಯನ್ನು ಜನರಿಗೆ ತಲುಪಿಸಲು ಪ್ರಯತ್ನ ಮಾಡಿದ್ದಾರೆ. ಅದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಆದರೆ ಸದ್ಯಕ್ಕೆ ಚಿತ್ರದ ಬಿಡುಗಡೆಗೆ ಒಮಿಕ್ರಾನ್​ ಅಡ್ಡಿಯಾಗಿದೆ. ಈ ಸಿನಿಮಾದಲ್ಲಿ ಎಸ್ತರ್​ ನರೋನಾ, ರೋಜರ್​ ನಾರಾಯಣ್​, ಅನಿತಾ ಭಟ್​, ಮಾಸ್ಟರ್​ ಆನಂದ್​, ಅಚ್ಯುತ್​ ಕುಮಾರ್​ ಮುಂತಾದ ಕಲಾವಿದರು ನಟಿಸಿದ್ದಾರೆ.

ಇದನ್ನೂ ಓದಿ:

‘ವಿಕ್ರಾಂತ್​ ರೋಣ’ ಪ್ಲ್ಯಾನ್​ನಲ್ಲಿ ದೊಡ್ಡ ಬದಲಾವಣೆ; ಒಟಿಟಿ ಆಫರ್​ ಬೆನ್ನಲ್ಲೇ ಟೀಸರ್​ ರಿಲೀಸ್​ ಮುಂದೂಡಿಕೆ?

‘ರಾಧೆ ಶ್ಯಾಮ್​’ ರಿಲೀಸ್​ ದಿನಾಂಕ ಮುಂದಕ್ಕೆ; ಸಂಕ್ರಾಂತಿ ರೇಸ್​ನಿಂದ ಹಿಂದೆ ಸರಿದ ಪ್ರಭಾಸ್ ಸಿನಿಮಾ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!