AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ದರ್ಶನ್ ಅನ್ನು ಪ್ರೀತಿಯಿಂದ ಏನೆಂದು ಕರೆಯುತ್ತಾರೆ ಗೊತ್ತೆ?

Darshan: ನಟ ದರ್ಶನ್ ಅವರನ್ನು ಅಭಿಮಾನಿಗಳು ಪ್ರೀತಿಯಿಂದ 'ಡಿ ಬಾಸ್' ಎನ್ನುತ್ತಾರೆ. ಗೆಳೆಯರು ದಚ್ಚು ಎನ್ನುತ್ತಾರೆ. ಕೆಲವರು ಲಂಬು ಎಂದೂ ಕರೆಯುತ್ತಾರೆ. ಆದರೆ ಮನೆಯಲ್ಲಿ ದರ್ಶನ್​ರ ತಾಯಿ, ಸಹೋದರಿ ಅವರನ್ನು ಪ್ರೀತಿಯಿಂದ ಏನೆಂದು ಕರೆಯುತ್ತಾರೆ ಗೊತ್ತೆ?

ಮನೆಯಲ್ಲಿ ದರ್ಶನ್ ಅನ್ನು ಪ್ರೀತಿಯಿಂದ ಏನೆಂದು ಕರೆಯುತ್ತಾರೆ ಗೊತ್ತೆ?
ಮಂಜುನಾಥ ಸಿ.
|

Updated on: Oct 18, 2023 | 10:05 PM

Share

ದರ್ಶನ್​ ತೂಗುದೀಪ (Darshan) ಅವರನ್ನು ಅಭಿಮಾನಿಗಳು ಪ್ರೀತಿಯಿಂದ ‘ಡಿ-ಬಾಸ್’ ಎನ್ನುತ್ತಾರೆ. ಆತ್ಮೀಯ ಗೆಳೆಯರು ದಚ್ಚು ಎನ್ನುತ್ತಾರೆ. ಲಂಬು ಎಂದು ಕರೆಯುವ ಕೆಲವು ಗೆಳೆಯರೂ ದರ್ಶನ್ ಅವರಿಗಿದ್ದಾರೆ. ಆದರೆ ದರ್ಶನ್ ಅವರನ್ನು ಅವರ ತಾಯಿ ಮೀನಾ ಹಾಗೂ ಅವರ ಸಹೋದರಿ ಏನೆಂದು ಕರೆಯುತ್ತಾರೆ ಗೊತ್ತೆ? ಇಂದು ‘ಟಗರು ಪಲ್ಯ’ ಸಿನಿಮಾದ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟಿ ತಾರಾ ಈ ವಿಷಯ ಹಂಚಿಕೊಂಡಿದ್ದಾರೆ.

ವೇದಿಕೆ ಮೇಲೆ ‘ಟಗರು ಪಲ್ಯ’ ಸಿನಿಮಾದ ಬಗ್ಗೆ ಮಾತನಾಡುತ್ತಿದ್ದ ನಟಿ ತಾರಾ, ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದ ದರ್ಶನ್ ಅವರನ್ನು ‘ಅಪ್ಪು’ ಎಂದು ಸಂಭೋಧಿಸಿದರು. ಬಳಿಕ, ಕ್ಷಮಿಸಿ, ದರ್ಶನ್ ಅವರನ್ನು ಅವರ ಮನೆಯಲ್ಲಿ ಅವರ ತಾಯಿ, ಸಹೋದರಿ ಎಲ್ಲ ಅಪ್ಪು ಎಂದೇ ಕರೆಯುವುದು ಹಾಗಾಗಿ ನನಗೂ ದರ್ಶನ್ ಅನ್ನು ಅಪ್ಪು ಎಂದು ಕರೆದೇ ಅಭ್ಯಾಸ, ನಾನು ಅವರನ್ನು ಅಪ್ಪು ಎಂದೇ ಕರೆಯುವುದು ಎಂದರು.

ಇದನ್ನೂ ಓದಿ:‘ದರ್ಶನ್​ ಬಳಿ ಕೇಳೋಕೆ ನನ್ನಲ್ಲಿ ಕೆಲವು ಪ್ರಶ್ನೆಗಳಿವೆ’; ಗೊಂದಲದ ಬಗ್ಗೆ ಧ್ರುವ ಸರ್ಜಾ ಮಾತು 

ದರ್ಶನ್ ಬಂದಿದ್ದು ನನಗೆ ಬಹಳ ಖುಷಿಯಾಯಿತು. ಒಳ್ಳೆಯ ಮನಸ್ಸುಗಳು ಒಟ್ಟಿಗೆ ಸೇರಿದಾಗ ಗೆಲುವು ಶತಸಿದ್ಧ. ನೀನು ಇಂದು ಬಂದು ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಿರುವುದಕ್ಕೆ ವೈಯಕ್ತಿಕವಾಗಿ ಹಾಗೂ ಸಿನಿಮಾ ತಂಡದ ಭಾಗವಾಗಿ ನಾನು ಧನ್ಯವಾದ ತಿಳಿಸುತ್ತೀನಿ ಎಂದ ತಾರಾ ಚಿತ್ರತಂಡದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು.

ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಿದ ದರ್ಶನ್ ಚಿತ್ರತಂಡದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು. ಸಿನಿಮಾದ ನಾಯಕ ನಾಗಭೂಷಣ್, ನಿರ್ಮಾಪಕ ಡಾಲಿ ಧನಂಜಯ್, ನಾಯಕಿ ಪ್ರೇಮ್ ಪುತ್ರಿ ಅಮೃತಾ, ನಿರ್ದೇಶಕ ಉಮೇಶ್ ಇನ್ನೂ ಹಲವರಿಗೆ ವೈಯಕ್ತಿಕವಾಗಿ ವಿಷ್ ಮಾಡಿದ ನಟ ದರ್ಶನ್ ಈ ಸಿನಿಮಾ ದೊಡ್ಡ ಹಿಟ್ ಆಗಲೆಂದು ಶುಭ ಹಾರೈಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್