AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೇಲರ್ ಮೂಲಕವೇ ಗಮನ ಸೆಳೆಯುತ್ತಿದ್ದಾನೆ ವೀಲ್ ಚೇರ್ ರೋಮಿಯೋ !

ಕಳೆದ ವರ್ಷದ ಹಿಂದೆ ಬಿಡುಗಡೆಯಾಗಿದ್ದ ವೀಲ್ ಚೇರ್ ರೋಮಿಯೋ ಸಿನಿಮಾದ ಮೊದಲ ನೋಟ ಇಂದಿಗೂ ಅದೇ ಕ್ರೇಜ್ ಉಳಿಸಿಕೊಂಡಿದೆ. ಚಿತ್ರಪ್ರೇಮಿಗಳನ್ನು ಸಿನಿಮಾ ನೋಡುವಂತೆ ಸೀಟಿನ ತುದಿಗೆ ತಂದು ಕೂರಿಸಿದೆ.

ಟ್ರೇಲರ್ ಮೂಲಕವೇ ಗಮನ ಸೆಳೆಯುತ್ತಿದ್ದಾನೆ ವೀಲ್ ಚೇರ್ ರೋಮಿಯೋ !
TV9 Web
| Edited By: |

Updated on: May 23, 2022 | 3:53 PM

Share

ಕನ್ನಡದಲ್ಲಿ ವೀಲ್ ಚೇರ್ ರೋಮಿಯೋ ಎಂಬ ವಿಶೇಷ ಸಿನಿಮಾವೊಂದು ತಯಾರಾಗಿದೆ. ವಿಕಲಚೇತನ ವೇಶ್ಯೆಯ ಪ್ರೀತಿಯಲ್ಲಿ ಬೀಳುವ ಸೂಕ್ಷ್ಮ ಎಳೆಯ ಕಂಟೆಂಟಿನ ಈ ಸಿನಿಮಾ ಇದೇ ತಿಂಗಳ‌ 27ರಂದು ಬಿಡುಗಡೆಯಾಗಲಿದೆ. ಅಗಸ್ತ್ಯ ಬ್ಯಾನರ್ ನಡಿಯಲ್ಲಿ ವೆಂಕಟಾಚಲಯ್ಯ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಈಗಾಗಲೇ ಬಿಡುಗಡೆಯಾಗಿರುವ ಸ್ಯಾಂಪಲ್ಸ್ ವೀಲ್ ಚೇರ್ ರೋಮಿಯೋದ ಕ್ವಾಲಿಟಿಯನ್ನು ಬಿಚ್ಚಿಟ್ಟಿದೆ.

ಕಳೆದ ವರ್ಷದ ಹಿಂದೆ ಬಿಡುಗಡೆಯಾಗಿದ್ದ ವೀಲ್ ಚೇರ್ ರೋಮಿಯೋ ಸಿನಿಮಾದ ಮೊದಲ ನೋಟ ಇಂದಿಗೂ ಅದೇ ಕ್ರೇಜ್ ಉಳಿಸಿಕೊಂಡಿದೆ. ಚಿತ್ರಪ್ರೇಮಿಗಳನ್ನು ಸಿನಿಮಾ ನೋಡುವಂತೆ ಸೀಟಿನ ತುದಿಗೆ ತಂದು ಕೂರಿಸಿದೆ. ಟ್ರೇಲರ್ ನೋಡಿ ಫಿದಾ ಆಗಿರುವ ಪ್ರೇಕ್ಷಕ ಸಿನಿಮಾಗಾಗಿ ಎದುರು‌ ನೋಡ್ತಿದ್ದಾನೆ. ಇಷ್ಟು ಮಟ್ಟದ ನಿರೀಕ್ಷೆ ಹುಟ್ಟಿಸುವುದು ಅಂದರೆ ಸುಮ್ಮನೇ ಮಾತಲ್ಲ. ಅದರಲ್ಲೂ ಮೊದಲ ಪ್ರಯತ್ನದಲ್ಲಿ ಸಾಧ್ಯವೇ. ಖಂಡಿತ ಸಾಧ್ಯ ಅನ್ನುವುದನ್ನು ನಿರ್ದೇಶಕ ನಟರಾಜ್ ಸಾಬೀತುಪಡಿಸಿದ್ದಾರೆ.

ಇದನ್ನೂ ಓದಿ
Image
Vikrant Rona: ‘ವಿಕ್ರಾಂತ್​ ರೋಣ’ ಚಿತ್ರದ ಬಿಗ್​ ಅನೌನ್ಸ್​ಮೆಂಟ್​; ಕಾತರದಿಂದ ಕಾಯುತ್ತಿರುವ ಕಿಚ್ಚ ಸುದೀಪ್ ಫ್ಯಾನ್ಸ್​
Image
ರಾಷ್ಟ್ರ ಭಾಷೆ ವಿವಾದದ ಬಳಿಕ ಗಲ್ಲಾ ಪೆಟ್ಟಿಗೆಯಲ್ಲೂ ಕಿಚ್ಚ ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಪೈಪೋಟಿ
Image
‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಕಿಚ್ಚನ ಚಪ್ಪಾಳೆ; ಸುದೀಪ್​ ಬರೆದ ದೀರ್ಘ ಪತ್ರದಲ್ಲಿ ಏನೇನಿದೆ?
Image
ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಸಾಥ್​​ ನೀಡಿದ ಪರಭಾಷೆಯ ಸ್ಟಾರ್​ ನಟರು

ಖ್ಯಾತ ನಿರ್ದೇಶಕರ ಜೊತೆ ನಿರ್ದೇಶನದ ಕಲಾ ಕೌಶಲ್ಯ ಕಲಿತಿರುವ ನಟರಾಜ್, ಜೂಮ್, ಆರೆಂಜ್, ರೋಮಿಯೋ ಸೇರಿದಂತೆ ಹಲವು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದಾರೆ. ಒಟ್ಟಾರೆ 17 ವರ್ಷದ ಸಿನಿಮಾ ಅನುಭವವನ್ನು ಧಾರೆ ಎರೆದು ವೀಲ್ ಚೇರ್ ರೋಮಿಯೋ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಕಾಲಿಲ್ಲದೇ ವೀಲ್ ಚೇರ್ ಗೆ ಅಂಟಿಕೊಂಡು ಕುರುವ ನಾಯಕನ ಪಾತ್ರದಲ್ಲಿ ರಾಮ್ ಚೇತನ್ ನಟಿಸಿದ್ದು, ವೇಶ್ಯೆ ಪಾತ್ರದಲ್ಲಿ ಮಯೂರಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ಸುಚೇಂದ್ರ ಪ್ರಸಾದ್, ತಬಲನಾಣಿ ಸೇರಿದಂತೆ ಹಿರಿಯ ಕಲಾವಿದರು ತಮ್ಮ ತಮ್ಮ ಪಾತ್ರ ಪೋಷಿಸಿದ್ದಾರೆ. ಭರತ್ ಬಿ.ಜೆ ಸಂಗೀತದ ಇಂಪು, ಸಂತೋಷ್ ಪಾಂಡಿ ಕ್ಯಾಮೆರಾ ತಂಪು, ಗುರುಕಶ್ಯಪ್ ಸಂಭಾಷಣೆ ಮಜಾ ವೀಲ್ ಚೇರ್ ರೋಮಿಯೋಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್