Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಲ್ ಚೇರ್ ರೋಮಿಯೋದಲ್ಲಡಗಿದೆ ಅಪ್ಪ ಮಗನ ಸೆಂಟಿಮೆಂಟ್ !

ವೀಲ್ ಚೇರ್ ರೋಮಿಯೋ ಸಿನಿಮಾ ಕಣ್ಣಿಲ್ಲದ ವೇಶ್ಯೆ ಮತ್ತು ಕಾಲಿಲ್ಲದ ಹುಡುಗನ ಮಧ್ಯೆ ಶುರುವಾಗುವ ಪ್ರೀತಿ ಪ್ರೇಮದ ಕಥೆಯನ್ನು ಹೊಂದಿದೆ. ಇದೇ ತಿಂಗಳ 27 ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ.

ವೀಲ್ ಚೇರ್ ರೋಮಿಯೋದಲ್ಲಡಗಿದೆ ಅಪ್ಪ ಮಗನ ಸೆಂಟಿಮೆಂಟ್ !
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 25, 2022 | 5:56 PM

ಇಷ್ಟು ದಿನ ಅದೆಷ್ಟೋ ಸಿನಿಮಾಗಳಲ್ಲಿ ಅಮ್ಮ ಮಗನ ಸೆಂಟಿಮೆಂಟ್ ನೋಡಿ ಖುಷಿ ಪಟ್ಟಿದ್ದೀವಿ. ಆದರೆ ತಂದೆಗೂ ಮಗನನ್ನ ತಾಯಿಯಂತೆ ನೋಡಿಕೊಳ್ಳುವುದು ಗೊತ್ತು. ಅದು ವೀಲ್ ಚೇರ್ ರೋಮಿಯೋ ಸಿನಿಮಾದಲ್ಲಿ ಅನಾವರಣವಾಗಿದೆ. ಒಬ್ಬ ಕಾಲಿಲ್ಲದ ಮಗನನ್ನು ಸಿಕ್ಕಾಪಟ್ಟೆ ತಾಳ್ಮೆಯಿಂದ, ಎಲ್ಲದನ್ನು ಕೊಟ್ಟು, ಮಗನಿಗೆ ಸುಂದರ ಪ್ರಪಂಚ ತೋರಿಸುವ ಅದ್ಭುತ ಫಿಲೀಂಗ್ ಈ ಸಿನಿಮಾದಲ್ಲಿ ಸಿಗಲಿದೆ.

ಟ್ರೇಲರ್ ರಿಲೀಸ್ ಮಾಡಿರುವ ಚಿತ್ರತಂಡ ಒಂದಷ್ಟು ಭರವಸೆಗಳನ್ನು ಹುಟ್ಟು ಹಾಕಿದೆ. ಅದೇ ಟ್ರೇಲರ್ ನಲ್ಲಿ ತಂದೆ ಮಗನ ಪ್ರೀತಿ ಎದ್ದು ಕಾಣುತ್ತಿದೆ. ನ್ಯೂನತೆ ಇದ್ದರು ಆ ತಂದೆ ಮಗನಿಗೆ ಆಕಾಶವನ್ನೇ ತೋರಿಸುತ್ತಾನೆ. ವೇಶ್ಯವಾಟಿಕೆಯ ಜಾಗಕ್ಕೆ ಹೋಗಬೇಕೆಂದರೂ ತಂದೆ ಹಿಂದು ಮುಂದು ಯೋಚಿಸುವುದಿಲ್ಲ. ಮಗನ ಆಸೆಯನ್ನ ಈಡೇರಿಸಲೇಬೇಕೆಂಬ ಅಪ್ಪನ ಧ್ಯೇಯ, ಆ ಜಾಗಕ್ಕೆ ಹೋಗುವ ದಾರಿ ಯಾವುದು ಎಂಬುದನ್ನು ಹುಡುಕುತ್ತಿರುತ್ತಾನೆ. ಇದು ತಂದೆಗೆ ಮಗನ ಮೇಲಿನ ಮಮಕಾತ, ಪ್ರೀತಿ ವಾತ್ಸಲ್ಯವನ್ನು ತೋರಿಸುತ್ತಿದೆ.

ವೀಲ್ ಚೇರ್ ರೋಮಿಯೋ ಸಿನಿಮಾ ಕಣ್ಣಿಲ್ಲದ ವೇಶ್ಯೆ ಮತ್ತು ಕಾಲಿಲ್ಲದ ಹುಡುಗನ ಮಧ್ಯೆ ಶುರುವಾಗುವ ಪ್ರೀತಿ ಪ್ರೇಮದ ಕಥೆಯನ್ನು ಹೊಂದಿದೆ. ಇದೇ ತಿಂಗಳ 27 ಕ್ಕೆ ತೆರೆಗೆ ಬರುತ್ತಿದ್ದು, ಮಯೂರಿ ನಾಯಕಿಯಾಗಿ, ರಾಮ್ ಚೇತನ್ ನಾಯಕನಾಗಿ ನಟಿಸುತ್ತಿದ್ದಾರೆ. ನಟರಾಜ್ ಸಿನಿಮಾ ಆಕ್ಷನ್ ಕಟ್ ಹೇಳಿದ್ದಾರೆ.

ಇದನ್ನೂ ಓದಿ
Image
Bhool Bhulaiyaa 2 Box Office Collection: ಬಾಕ್ಸಾಫೀಸ್​ನಲ್ಲಿ ಮುಂದುವರೆದ ‘ಭೂಲ್ ಭುಲಯ್ಯ 2’ ಓಟ; ನಾಲ್ಕನೇ ದಿನದ ಕಲೆಕ್ಷನ್ ಎಷ್ಟು?
Image
Ragini Dwivedi Birthday: ಹಲವು ಸಿನಿಮಾಗಳಲ್ಲಿ ಬ್ಯುಸಿಯಾದ ರಾಗಿಣಿ; ‘ತುಪ್ಪದ ಬೆಡಗಿ’ಯ ಗ್ಲಾಮರಸ್ ಫೋಟೋಗಳು ಇಲ್ಲಿವೆ
Image
ಟ್ರೇಲರ್​ನಿಂದ ನಿರೀಕ್ಷೆ ಮೂಡಿಸಿದ ‘ಮನಸ್ಮಿತ’ ಸಿನಿಮಾ; ಅತುಲ್​ ಕುಲಕರ್ಣಿ ಜೊತೆ ಹೊಸ ಕಲಾವಿದರ ಸಂಗಮ
Image
ಕೊಡವ ಶೈಲಿಯಲ್ಲಿ ಸೀರೆ ಧರಿಸಿ ಮಿಂಚಿದ ರಶ್ಮಿಕಾ ಮಂದಣ್ಣ; ಅಭಿಮಾನಿಗಳಿಂದ ಸಿಕ್ತು ಮಿಲಿಯನ್​ ಲೈಕ್ಸ್​

ಇದನ್ನೂ ಓದಿ: ಟ್ರೇಲರ್ ಮೂಲಕವೇ ಗಮನ ಸೆಳೆಯುತ್ತಿದ್ದಾನೆ ವೀಲ್ ಚೇರ್ ರೋಮಿಯೋ !

ಬಿ.ಜೆ.ಭರತ್ ಸಂಗೀತ ನಿರ್ದೇಶನದಲ್ಲಿ ಹಾಡು ಹಾಗೂ ಹಿನ್ನೆಲೆ ಸಂಗೀತ ಮೂಡಿ ಬಂದಿದ್ದು, ಗುರುಕಶ್ಯಪ್ ಸಂಭಾಷಣೆ, ಸಂತೋಷ್  ಪಾಂಡಿ ಕ್ಯಾಮೆರಾ ವರ್ಕ್, ವಿ ನಾಗೇಂದ್ರ ಪ್ರಸಾದ್, ಜಯಂತ್ ಕಾಯ್ಕಿಣಿ ಸಾಹಿತ್ಯ ಕೃಷಿ ಚಿತ್ರಕ್ಕಿದೆ. ಸುಚೇಂದ್ರಪ್ರಸಾದ್, ತಬಲ ನಾಣಿ, ರಂಗಾಯಣ ರಘು ಚಿತ್ರ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ. ಅಗಸ್ತ್ಯ ಕ್ರಿಯೇಷನ್ಸ್ ಬ್ಯಾನರ್ ನಡಿ ವೆಂಕಟಾಚಲಯ್ಯ ಚಿತ್ರಕ್ಕೆ ಬಂಡವಾಳ ಹೂಡಿ ಚಿತ್ರ ನಿರ್ಮಾಣ ಮಾಡಿದ್ದಾರೆ. ಬೆಂಗಳೂರು, ಮಹರಾಷ್ಟ್ರ, ಪುಣೆಯಲ್ಲಿ ಚಿತ್ರೀಕರಣ ನಡೆಸಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ