AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ ಎಂದವರು ಈಗೆಲ್ಲಿ ಹೋದ್ರಿ?’; ಟ್ರೋಲ್​ ಆದ ಅಲ್ಲು ಅರ್ಜುನ್​ ಸಿನಿಮಾ

ನಟ ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ಸುಕುಮಾರ್​ ಕಾಂಬಿನೇಷನ್​ನ ‘ಪುಷ್ಪ’ ಸಿನಿಮಾ ಶುಕ್ರವಾರ (ಡಿಸೆಂಬರ್​ 17)​ಸಾಕಷ್ಟು ಹೈಪ್​ನೊಂದಿಗೆ ರಿಲೀಸ್​​ ಆಗಿತ್ತು. ಎರಡು ಪಾರ್ಟ್​ಗಳಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಮೊದಲ ಭಾಗ ಬಿಡುಗಡೆ ಆಗಿದೆ. ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ಚಿತ್ರ ಪ್ರದರ್ಶನ ಕಾಣುತ್ತಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವರು ಸಿನಿಮಾ ಉತ್ತಮವಾಗಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ. ಈ ಮಧ್ಯೆ ‘ಕೆಜಿಎಫ್​’ ಬಗ್ಗೆ ಹಗುರವಾಗಿ ಮಾತನಾಡಿದ್ದ ಆಂಧ್ರದ ನಿರ್ದೇಶಕರಿಗೆ ಈಗ ಕರ್ನಾಟಕದವರು ಪ್ರಶ್ನೆ […]

‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ ಎಂದವರು ಈಗೆಲ್ಲಿ ಹೋದ್ರಿ?’; ಟ್ರೋಲ್​ ಆದ ಅಲ್ಲು ಅರ್ಜುನ್​ ಸಿನಿಮಾ
ಪುಷ್ಪ-ಕೆಜಿಎಫ್​
TV9 Web
| Edited By: |

Updated on:Dec 18, 2021 | 8:01 AM

Share

ನಟ ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ಸುಕುಮಾರ್​ ಕಾಂಬಿನೇಷನ್​ನ ‘ಪುಷ್ಪ’ ಸಿನಿಮಾ ಶುಕ್ರವಾರ (ಡಿಸೆಂಬರ್​ 17)​ಸಾಕಷ್ಟು ಹೈಪ್​ನೊಂದಿಗೆ ರಿಲೀಸ್​​ ಆಗಿತ್ತು. ಎರಡು ಪಾರ್ಟ್​ಗಳಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಮೊದಲ ಭಾಗ ಬಿಡುಗಡೆ ಆಗಿದೆ. ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ಚಿತ್ರ ಪ್ರದರ್ಶನ ಕಾಣುತ್ತಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವರು ಸಿನಿಮಾ ಉತ್ತಮವಾಗಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ. ಈ ಮಧ್ಯೆ ‘ಕೆಜಿಎಫ್​’ ಬಗ್ಗೆ ಹಗುರವಾಗಿ ಮಾತನಾಡಿದ್ದ ಆಂಧ್ರದ ನಿರ್ದೇಶಕರಿಗೆ ಈಗ ಕರ್ನಾಟಕದವರು ಪ್ರಶ್ನೆ ಮಾಡುತ್ತಿದ್ದಾರೆ.

‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಪಕ್ಕಾ ಹಳ್ಳಿ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಅಲ್ಲು ಅರ್ಜುನ್ ಲುಕ್​ ಬಗ್ಗೆ, ಸಿನಿಮಾ ಮೇಕಿಂಗ್​ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ, ಸಿನಿಮಾದ ಅವಧಿ ದೀರ್ಘ ಎನಿಸುತ್ತದೆ. ಸಿನಿಮಾ ಬಗ್ಗೆ ನೆಗೆಟಿವ್​ ಮಾತನಾಡಿದವರೇ ಹೆಚ್ಚು. ಈ ಕಾರಣಕ್ಕೆ ಅನೇಕರು ಈ ಸಿನಿಮಾ ಟ್ರೋಲ್​ ಮಾಡುತ್ತಿದ್ದಾರೆ.

ಈ ಮೊದಲು ‘ಪುಷ್ಪ’ ಬಗ್ಗೆ ಮಾತನಾಡಿದ್ದ ‘ಉಪ್ಪೇನಾ’ ನಿರ್ದೇಶಕ ಬುಚಿ ಬಾಬು, ‘ನಾನು ಸಿನಿಮಾದ ಮೊದಲ ಭಾಗವನ್ನು ವೀಕ್ಷಣೆ ಮಾಡಿದ್ದೇನೆ. ಈ ಚಿತ್ರ 10 ಕೆಜಿಎಫ್​ಗೆ ಸಮ. ಸಿನಿಮಾದಲ್ಲಿ ಬರುವ ಪಾತ್ರಗಳು ತುಂಬಾನೇ ಅದ್ಭುತವಾಗಿ ಮೂಡಿ ಬಂದಿವೆ. ನಾನು ಇದನ್ನು ಅತಿಶಯೋಕ್ತಿಯಾಗಿ ಹೇಳುತ್ತಿಲ್ಲ. ಸಿನಿಮಾ ನೋಡಿದ ಮೇಲೆ ನಿಮಗೇ ತಿಳಿಯಲಿದೆ’ ಎಂದಿದ್ದರು. ಈಗ ಚಿತ್ರ ರಿಲೀಸ್​ ಆಗಿ ಏನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಕನ್ನಡಿಗರು ಹೇಳುತ್ತಿದ್ದಾರೆ.

ಈ ವಿಚಾರ ಚರ್ಚೆ ಆಗುತ್ತಿದೆ. ‘ಕೆಜಿಎಫ್’​ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಸಿನಿಮಾ ಬಗ್ಗೆ ಎಲ್ಲ ಕಡೆಗಳಲ್ಲೂ ಮೆಚ್ಚುಗೆ ವ್ಯಕ್ತವಾಗಿತ್ತು. ‘ಪುಷ್ಪ’ ಸಿನಿಮಾ ನಮ್ಮ ಚಿತ್ರದ ಅರ್ಧಕ್ಕೂ ನಿಲ್ಲೋಕೆ ಸಾಧ್ಯವಿಲ್ಲ ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ. ಸದ್ಯ, ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

ಇದನ್ನೂ ಓದಿ: ಸಂಕಷ್ಟದಲ್ಲಿದ್ದ ಅಲ್ಲು ಅರ್ಜುನ್​ ಸಹಾಯಕ್ಕೆ ನಿಂತ ‘ಕೆಜಿಎಫ್​ 2’ ನಟಿ ರವೀನಾ ಟಂಡನ್​ ಕುಟುಂಬ

KGF Chapter 2: ಕೆಜಿಎಫ್​ ಚಾಪ್ಟರ್ 2 ಡಬ್ಬಿಂಗ್​ ಮುಗಿಸಿದ ಸಂಜಯ್​ ದತ್​; ಕುತೂಹಲ ಹೆಚ್ಚಿಸಿದ ಅಧೀರನ ಪಾತ್ರ

Published On - 7:00 am, Sat, 18 December 21

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ