AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಜೈಲಿಗೆ ಹೋಗಲಿದ್ದಾರೆ ದರ್ಶನ್, ಬಳ್ಳಾರಿ ಜೈಲಿನಲ್ಲಿ ಸಿದ್ಧತೆ?

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ ತೂಗುದೀಪ ಹಾಗೂ ಇತರೆ ಕೆಲವು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಇದೀಗ ದರ್ಶನ್, ಪವಿತ್ರಾ ಸೇರಿದಂತೆ ಇನ್ನೂ ಕೆಲ ಆರೋಪಿಗಳು ಮತ್ತೆ ಜೈಲಿಗೆ ಹೋಗಬೇಕಿದೆ. ಅಂದಹಾಗೆ ಈ ಬಾರಿ ದರ್ಶನ್ ಅನ್ನು ಯಾವ ಜೈಲಿನಲ್ಲಿ ಇರಿಸಲಾಗುತ್ತದೆ? ಇಲ್ಲಿದೆ ನೋಡಿ ಮಾಹಿತಿ...

ಯಾವ ಜೈಲಿಗೆ ಹೋಗಲಿದ್ದಾರೆ ದರ್ಶನ್, ಬಳ್ಳಾರಿ ಜೈಲಿನಲ್ಲಿ ಸಿದ್ಧತೆ?
Darshan Thoogudeepa
ಮಂಜುನಾಥ ಸಿ.
|

Updated on:Aug 14, 2025 | 4:58 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಆ ಬಳಿಕ ಹೈಕೋರ್ಟ್​ನಲ್ಲಿ ಜಾಮೀನು ಪಡೆದು ಆರಾಮವಾಗಿ ಸಿನಿಮಾ ಶೂಟಿಂಗ್, ಪ್ರವಾಸ, ಕುಟುಂಬದೊಡನೆ ದೇವಸ್ಥಾನಗಳ ಸುತ್ತಾಟದಲ್ಲಿದ್ದ ದರ್ಶನ್​ಗೆ ಸುಪ್ರೀಂಕೋರ್ಟ್ ದೊಡ್ಡ ಆಘಾತ ನೀಡಿದೆ. ನಟ ದರ್ಶನ್ ಸೇರಿದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಬರೋಬ್ಬರಿ ಏಳು ಆರೋಪಿಗಳ ಜಾಮೀನು ರದ್ದು ಮಾಡಿದೆ. ಇದೀಗ ದರ್ಶನ್, ಪವಿತ್ರಾ ಸೇರಿದಂತೆ ಏಳು ಪ್ರಮುಖ ಆರೋಪಿಗಳು ಮತ್ತೆ ಜೈಲು ಪಾಲಾಗಲಿದ್ದಾರೆ.

ಪವಿತ್ರಾ ಗೌಡ ಅವರು ಮಧ್ಯಾಹ್ನ 2 ಗಂಟೆ ಸುಮಾರಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿದ್ದಾರೆ. ಇನ್ನೂ ಕೆಲ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಸಂಜೆ ನಾಲ್ಕು ಗಂಟೆ ಸುಮಾರಿಗೆ ನಟ ದರ್ಶನ್ ಅವರನ್ನು ಅವರ ಪತ್ನಿ ವಿಜಯಲಕ್ಷ್ಮಿ ಅಪಾರ್ಟ್​ಮೆಂಟ್​ನಲ್ಲಿ ಪೊಲೀಸರು ವಶಕ್ಕೆ ಪಡೆಯಲಾಗಿದೆ.

ದರ್ಶನ್ ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಜೈಲಿಗೆ ಕಳಿಸಲಾಗುತ್ತದೆ. ಆದರೆ ಯಾವ ಜೈಲಿಗೆ ಎಂಬುದು ಪ್ರಶ್ನೆಯಾಗಿದೆ. ದರ್ಶನ್, ಮಧ್ಯಂತರ ಜಾಮೀನು ಪಡೆದಾಗ ಅವರು ಬಳ್ಳಾರಿ ಜೈಲಿನಲ್ಲಿದ್ದರು. ಬೆಂಗಳೂರು ಜೈಲಿನಲ್ಲಿ ರಾಜಾತಿಥ್ಯ ಸ್ವೀಕರಿಸಿದ ಕಾರಣ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು. ಆರೋಪಿಗಳು ಜಾಮೀನು ಪಡೆಯುವಾಗ ಯಾವ ಜೈಲಿನಲ್ಲಿದ್ದರೋ, ಜಾಮೀನು ರದ್ದಾದಾಗಲೂ ಅದೇ ಜೈಲಿಗೆ ಕಳಿಸಬೇಕು ಎಂಬ ನಿಯಮ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:Darshan Arrest: ನಟ ದರ್ಶನ್ ಬಂಧನ: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ಮತ್ತೆ ಜೈಲು ವಾಸ

ಬಳ್ಳಾರಿ ಕಾರಾಗೃಹ ಅಧಿಕಾರಿ ಲತಾ ಅವರು ಹೇಳಿರುವಂತೆ, ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಕಳುಹಿಸುತ್ತಿರುವ ಬಗ್ಗೆ ಯಾವುದೇ ಅಧಿಕೃತ ಆದೇಶ ಬಂದಿಲ್ಲವಂತೆ. ದರ್ಶನ್​ಗಾಗಿ ಯಾವುದೇ ವಿಶೇಷ ವ್ಯವಸ್ಥೆ ಮಾಡಲಾಗಿಲ್ಲ. ಈ ಹಿಂದೆ ದರ್ಶನ್ ಇದ್ದ ಕೊಠಡಿಯನ್ನೇ ಅವರಿಗೆ ಕೊಡಲಾಗುವುದು, ಆಗ ಅವರಿಗೆ ಕೊಡಲಾಗಿದ್ದ ಮೆಡಿಕಲ್ ಚೇರು ಸಹ ಅಲ್ಲಿಯೇ ಇದೆ, ಅದನ್ನು ಮತ್ತೆ ಅವರು ಬಳಸಿಕೊಳ್ಳಬಹುದು’ ಎಂದಿದ್ದಾರೆ.

ನಟ ದರ್ಶನ್ ಬಂಧನದಲ್ಲಿ ಮತ್ತು ದರ್ಶನ್ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸುವ ಸಂದರ್ಭದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆಗ ಬೆಂಗಳೂರು ಪೊಲೀಸ್ ಕಮೀಷನರ್ ಸಹ ಆಗಿದ್ದ ಬಿ ದಯಾನಂದ ಅವರು ಈಗ ಕರ್ನಾಟಕ ರಾಜ್ಯದ ಕಾರಾಗೃಹಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ದರ್ಶನ್ ಈಗ ಮತ್ತೆ ದಯಾನಂದ ಅವರ ಸುಪರ್ಧಿಗೆ ಬಿದ್ಧಂತಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:30 pm, Thu, 14 August 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು