AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಸಂಬಳಕ್ಕೆ ಬಂದಿಲ್ಲ, ಹಂಬಲಕ್ಕೆ ಬಂದಿದ್ದೇನೆ’; ಬಿಗ್ ಬಾಸ್ ಹಿಂದಿನ ಕಾರಣ ತಿಳಿಸಿದ ಕಾಕ್ರೋಚ್ ಸುಧಿ

Cockroach Sudhi: ಸುಧಿ ಅವರು ಬಿಗ್ ಬಾಸ್​ಗೆ ಬರುತ್ತಾರೆ ಎಂಬ ಸುದ್ದಿ ಮೊದಲೇ ಹರಿದಾಡಿತ್ತು. ಈ ಬಗ್ಗೆ ಸಂದರ್ಶನಗಳಲ್ಲಿಯೂ ಅವರಿಗೆ ಪ್ರಶ್ನೆ ಮಾಡಲಾಯಿತು. ಆದರೆ, ಸಿನಿಮಾ ಕಮಿಟ್​ಮೆಂಟ್ ಹೆಚ್ಚಿರುವುದರಿಂದ ನಾನಂತೂ ದೊಡ್ಮನೆಗೆ ಹೋಗಲ್ಲ ಎಂದು ಅವರು ನೇರವಾಗಿ ಹೇಳಿದ್ದರು. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದವು.

‘ನಾನು ಸಂಬಳಕ್ಕೆ ಬಂದಿಲ್ಲ, ಹಂಬಲಕ್ಕೆ ಬಂದಿದ್ದೇನೆ’; ಬಿಗ್ ಬಾಸ್ ಹಿಂದಿನ ಕಾರಣ ತಿಳಿಸಿದ ಕಾಕ್ರೋಚ್ ಸುಧಿ
ಸುಧಿ
ರಾಜೇಶ್ ದುಗ್ಗುಮನೆ
|

Updated on:Sep 28, 2025 | 7:02 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ಗೆ (Bigg Boss) ಕಾಕ್ರೋಚ್ ಸುಧಿ ಎಂಟ್ರಿ ಆಗಿದೆ. ಸುದೀಪ್ ಅವರು ನಟನನ್ನು ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಸುಧಿ ಅವರು ವಿಲನ್ ಪಾತ್ರಗಳ ಮೂಲಕ ಗಮನ ಸೆಳೆದವರು. ಅವರು ಸಖತ್ ಚಿಲ್ ಆಗಿ ಇರುವವರು. ದೊಡ್ಮನೆಯಲ್ಲಿ ಅವರು ಯಾವ ರೀತಿಯಲ್ಲಿ ನಡೆದುಕೊಳ್ಳುತ್ತಾರೆ ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಅವರು ಬಿಗ್ ಬಾಸ್​ಗೆ ಬಂದಿದ್ದು ಏಕೆ ಎಂಬುದನ್ನು ವಿವರಿಸಿದ್ದಾರೆ.

ಸುಧಿ ಅವರು ಬಿಗ್ ಬಾಸ್​ಗೆ ಬರುತ್ತಾರೆ ಎಂಬ ಸುದ್ದಿ ಮೊದಲೇ ಹರಿದಾಡಿತ್ತು. ಈ ಬಗ್ಗೆ ಸಂದರ್ಶನಗಳಲ್ಲಿಯೂ ಅವರಿಗೆ ಪ್ರಶ್ನೆ ಮಾಡಲಾಯಿತು. ಆದರೆ, ಸಿನಿಮಾ ಕಮಿಟ್​ಮೆಂಟ್ ಹೆಚ್ಚಿರುವುದರಿಂದ ನಾನಂತೂ ದೊಡ್ಮನೆಗೆ ಹೋಗಲ್ಲ ಎಂದು ಅವರು ನೇರವಾಗಿ ಹೇಳಿದ್ದರು. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದವು. ಈಗ ಅವರು ಬರಲ್ಲ, ಬರಲ್ಲ ಅಂತಲೇ ದೊಡ್ಮನೆಗೆ ಬಂದಿದ್ದಾರೆ.

ಇದನ್ನೂ ಓದಿ
Image
‘ಬಿಗ್ ಬಾಸ್’ಗೆ ಮಂಗಳೂರಿನ ರಕ್ಷಿತಾ ಎಂಟ್ರಿ; ಮಾತು ಕೇಳಿ ಸುದೀಪ್ ಶಾಕ್
Image
ಊಹಿಸಿದ್ದಕ್ಕಿಂತ ಹೆಚ್ಚಿನ ಸ್ಪರ್ಧಿಗಳು ಬಿಗ್ ಬಾಸ್​ಗೆ ಎಂಟ್ರಿ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ
Image
‘ನಾನು ಒಂದು ದಿನ ಮಗು ಹೊಂದುತ್ತೇನೆ’; ಮನದ ಆಸೆ ಹೊರಹಾಕಿದ ಸಲ್ಮಾನ್ ಖಾನ್

ಬಿಗ್ ಬಾಸ್ ವೇದಿಕೆ ಏರಿದ ಬಳಿಕ ಮಾತನಾಡಿದ ಕಾಕ್ರೋಚ್ ಸುಧಿ ಅವರು ತಾವು ದೊಡ್ಮನೆಗೆ ಬಂದಿದ್ದರ ಹಿಂದಿನ ಕಾರಣ ತಿಳಿಸಿದರು. ‘ನಿಮ್ಮ ಜೊತೆ ಕೆಲಸ ಮಾಡೋದು ಹಾಗಿರಲಿ, ನೋಡೋಕು ಅವಕಾಶ ಸಿಕ್ಕಿರಲಿಲ್ಲ. ಅಲ್ಲಿ ಸಿಕ್ಕಿದ್ರೆ ಸಂದರ್ಶನ, ಇಲ್ಲಿ ಸಿಗೋದು ನಿಜವಾದ ದರ್ಶನ’ ಎಂದರು ಸುಧಿ.

‘ಪ್ರತಿಯೊಬ್ಬ ಆರ್ಟಿಸ್ಟ್​ಗೂ ಕ್ಯಾಮೆರಾ ಎದುರು ಕ್ಲೋಸ್​ಅಪ್​ ಶಾಟ್ ಬೇಕು ಎಂದು ಅನಿಸುತ್ತಾ ಇರುತ್ತದೆ. ಆದರೆ, ಇಲ್ಲಿ ನೂರಾರು ಕ್ಯಾಮೆರಾಗಳು 24 ಗಂಟೆ ಜನರಿಗೆ ತೋರಿಸುತ್ತೇವೆ ಎಂದಾಗ ಹೇಗೆ ಬಿಡೋಕೆ ಆಗುತ್ತೆ ಹೇಳಿ’ ಎಂದು ಸುದೀಪ್​ಗೆ ಸುಧಿ ಕೇಳಿದರು.

‘ನನಗೆ ಸಂಭಾವನೆ ಮುಖ್ಯ ಎಂದು ನಾನು ಈ ಮೊದಲು ಹೇಳಿದ್ದೆ. ಆದರೆ, ನಿಮ್ಮ ಎದುರು ನಿಜವನ್ನು ಹೇಳುತ್ತಿದ್ದೇನೆ. ನಾನು ಸಂಬಳಕ್ಕೆ ಬಂದಿಲ್ಲ, ಹಂಬಲಕ್ಕೆ ಬಂದಿದ್ದೇನೆ. ನನ್ನನ್ನು ನಾನು ಅರಿತುಕೊಳ್ಳಲು ಇಲ್ಲಿಗೆ ಬಂದಿಲ್ಲ. ನಾನು ಏನು ಎಂಬುದನ್ನು ತೋರಿಸಲು ಬಂದಿದ್ದೇನೆ’ ಎಂದು ಸುದೀಪ್ ಎದುರು ಹೇಳಿದರು ಕಾಕ್ರೋಚ್ ಸುಧಿ.

ಇದನ್ನೂ ಓದಿ: ಹದಿನೇಳೂ ಅಲ್ಲ, ಹದಿನೆಂಟೂ ಅಲ್ಲ; ಊಹಿಸಿದ್ದಕ್ಕಿಂತ ಹೆಚ್ಚಿನ ಸ್ಪರ್ಧಿಗಳು ಬಿಗ್ ಬಾಸ್​ಗೆ ಎಂಟ್ರಿ

‘ಕಾಕ್ರೋಚ್’ ಸುಧಿ ಅವರು ವಿಲನ್ ಪಾತ್ರಗಳ ಮೂಲಕ ಗಮನ ಸೆಳೆದಿದ್ದಾರೆ. ಶಿವರಾಜ್​ಕುಮಾರ್ ನಟನೆಯ ‘ಟಗರು’ ಸಿನಿಮಾದಲ್ಲಿ ಕಾಕ್ರೋಚ್ ಹೆಸರಿನ ಪಾತ್ರ ಮಾಡಿದ್ದರು ಸುಧಿ. ಅಲ್ಲಿಂದ ಕಾಕ್ರೋಚ್ ಸುಧಿ ಎಂದೇ ಫೇಮಸ್ ಆದರು. ಆ ಬಳಿಕ ಅವರಿಗೆ ಸಾಕಷ್ಟು ಆಫರ್​ಗಳು ಬಂದವರು. ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬಿಗ್ ಬಾಸ್ ಮನೆಗೆ ಹೋಗುವಾಗ ಅವರ ಕೈಯಲ್ಲಿ ಸಾಕಷ್ಟು ಆಫರ್​ಗಳಿವೆ. ಈ ಕೆಲಸಗಳನ್ನು ಮುಂದಕ್ಕೆ ಹಾಕಿ ಅವರು ದೊಡ್ಮನೆಗೆ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:41 pm, Sun, 28 September 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ