AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಪ್ರಾಣಿಗಳ ಮೇಲೆ ವಿಶೇಷ ಪ್ರೀತಿ ಏಕೆ? ಅವರ ಬದುಕು ಬದಲಿಸಿದ ಕಥೆ ಇದು

Darshan Thoogudeepa: ದರ್ಶನ್​ಗೆ ಪ್ರಾಣಿಗಳ ಮೇಲೆ ವಿಶೇಷ ಪ್ರೀತಿ ಮತ್ತು ಕಾಳಜಿ. ಕಳೆದ ವರ್ಷ ಕಾಡಾನೆ ರಕ್ಷಣೆ ವೇಳೆ ನಟ ಅರ್ಜುನ ಆನೆ ನಿಧನ ಹೊಂದಿದ್ದ ವಿಚಾರ ಗೊತ್ತೇ ಇದೆ. ಇದಕ್ಕೆ ಪ್ರಾಣಿ ಪ್ರಿಯರು ಕಂಬನಿ ಮಿಡಿದಿದ್ದರು. ಆನೆ ಸತ್ತ ವಿಚಾರ ಸಾಕಷ್ಟು ಚರ್ಚೆ ಕೂಡ ಆಗಿತ್ತು. ನಟ ದರ್ಶನ್ ಅವರು ಅರ್ಜುನನ ನಿಧನಕ್ಕೆ ಮರುಗಿದ್ದರು. ಅವರಿಗೆ ಪ್ರಾಣಿಗಳ ಮೇಲೆ ವಿಶೇಷ ಪ್ರೀತಿ ಇರುವುದಕ್ಕೆ ಕಾರಣವೂ ಇದೆ.

ದರ್ಶನ್​ಗೆ ಪ್ರಾಣಿಗಳ ಮೇಲೆ ವಿಶೇಷ ಪ್ರೀತಿ ಏಕೆ? ಅವರ ಬದುಕು ಬದಲಿಸಿದ ಕಥೆ ಇದು
Darshan Thoogudeepa Animal
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 16, 2025 | 7:45 AM

Share

ಕಳೆದ ವರ್ಷ ಕಾಡಾನೆ ರಕ್ಷಣೆ ವೇಳೆ ನಟ ಅರ್ಜುನ ಆನೆ ನಿಧನ ಹೊಂದಿದ್ದ ವಿಚಾರ ಗೊತ್ತೇ ಇದೆ. ಇದಕ್ಕೆ ಪ್ರಾಣಿ ಪ್ರಿಯರು ಕಂಬನಿ ಮಿಡಿದಿದ್ದರು. ಆನೆ ಸತ್ತ ವಿಚಾರ ಸಾಕಷ್ಟು ಚರ್ಚೆ ಕೂಡ ಆಗಿತ್ತು. ನಟ ದರ್ಶನ್ ಅವರು ಅರ್ಜುನನ ನಿಧನಕ್ಕೆ ಮರುಗಿದ್ದರು. ಅವರಿಗೆ ಪ್ರಾಣಿಗಳ ಬಗ್ಗೆ ವಿಶೇಷ ಪ್ರೀತಿ ಇದೆ. ಇಂದು (ಫೆಬ್ರವರಿ 16) ದರ್ಶನ್ ಜನ್ಮದಿನ. ಈ ವೇಳೆ ಅವರ ಪ್ರಾಣಿ ಪ್ರೀತಿ ಬಗ್ಗೆ ನೆನಪಿಸಿಕೊಳ್ಳಲಾಗುತ್ತಿದೆ.

ಒಮ್ಮೆ ಆನೆ ಮೃತಪಟ್ಟು, ಅದನ್ನು ಮಣ್ಣು ಮಾಡಿದ ಬಳಿಕ ಯಾರೂ ಆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ದರ್ಶನ್ ಹಾಗಿಲ್ಲ ಅನ್ನೋದು ಇಲ್ಲಿ ಗಮನಿಸಬೇಕು. ಆನೆಗೆ ತಾತ್ಕಾಲಿಕವಾಗಿ ಸ್ಮಾರಕ ನಿರ್ಮಾಣ ಮಾಡಲು ಕಲ್ಲುಗಳನ್ನು ಅವರು ಕಳುಹಿಸಿದ್ದರು. ಕೇವಲ ಆನೆ ಮಾತ್ರವಲ್ಲ, ಎಲ್ಲಾ ಪ್ರಾಣಿಗಳ ಮೇಲೆ ಅವರಿಗೆ ಪ್ರೀತಿ ಇದೆ.

ದರ್ಶನ್ ಅವರಿಗೆ ಮೊದಲಿನಿಂದಲೂ ಪ್ರಾಣಿಗಳ ಬಗ್ಗೆ ವಿಶೇಷ ಪ್ರೀತಿ ಇದೆ. ಅವರು ನಟನಾ ತರಬೇತಿ ಪಡೆದು ಬಂದ ನಂತರ ಕೆಲ ವರ್ಷ ಅವರು ಮೈಸೂರಿನಲ್ಲೇ ವಾಸ ಇದ್ದರು. ಆಗ ಅವರು ದನಗಳನ್ನು ಸಾಕಿದ್ದರು. ಹಾಲು ಕರೆದು, ಅದನ್ನು ಮನೆ ಮನೆಗೆ ಹಾಕಿ ಜೀವನ ನಡೆಸಿದ್ದರು. ಅವರು ಹೀರೋ ಆದ ಬಳಿಕವೂ ಪ್ರಾಣಿಗಳ ಬಗ್ಗೆ ವಿಶೇಷ ಪ್ರಿತಿಯನ್ನು ಅವರು ಇಟ್ಟುಕೊಂಡಿದ್ದಾರೆ ಎಂಬುದು ಇಲ್ಲಿ ಗಮನಿಸಬೇಕಾದ ವಿಚಾರ.

ದರ್ಶನ್ ಅವರಿಗೆ ಇತರ ಪ್ರಾಣಿಗಳ ಬಗ್ಗೆಯೂ ಪ್ರೀತಿ ಇದೆ. ಅವರು ಮೈಸೂರು ಮೃಗಾಲಯದಲ್ಲಿ ಹುಲಿ ಹಾಗೂ ಇತರ ಕೆಲವು ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಕೊವಿಡ್ ಸಮಯದಲ್ಲಿ ಅವರು ಪ್ರಾಣಿಗಳನ್ನು ದತ್ತು ಪಡೆಯುವಂತೆ ಕರೆ ನೀಡಿದ್ದರು. ಅವರ ಅಭಿಮಾನಿಗಳು ಮುಂದೆ ಬಂದು ಪ್ರಾಣಿಗಳನ್ನು ದತ್ತು ಪಡೆದಿದ್ದರು.

ಇದನ್ನೂ ಓದಿ:ದರ್ಶನ್ ಹುಟ್ಟುಹಬ್ಬ, ಕಾಮನ್ ಡಿಪಿ ಬಿಡುಗಡೆ ಮಾಡಿದ ಪತ್ನಿ ವಿಜಯಲಕ್ಷ್ಮಿ

ದರ್ಶನ್ ಅವರು ಮೈಸೂರಿನಲ್ಲಿ ಫಾರ್ಮ್ಹೌಸ್ ಹೊಂದಿದ್ದಾರೆ. ಅಲ್ಲಿ ಅವರು ದನ, ಕುದುರೆಗಳನ್ನು ಸಾಕಿದ್ದಾರೆ. ದರ್ಶನ್ ಅವರು ಒಂದು ಕುದುರೆ ಸಾಕಿದ್ದು, ದರ್ಶನ್ ಮೇಲೆ ಆ ಕುದುರೆ ವಿಶೇಷ ಪ್ರೀತಿಯನ್ನು ಇಟ್ಟುಕೊಂಡಿದೆಯಂತೆ. ಈ ಮೊದಲು ಆ ಬಗ್ಗೆ ಅವರು ಹೇಳಿಕೊಂಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್